ಕಲಬುರಗಿ; ಸೋಲಿಲ್ಲದ ಸರದಾರ ಖರ್ಗೆಗೆ ಮುಖಭಂಗ, ಸುಮಲತಾ ಅಂಬರೀಶ್ ಜಯಭೇರಿ
Team Udayavani, May 23, 2019, 3:32 PM IST
ಕಲಬುರಗಿ/ಮಂಡ್ಯ:ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಸ್ಟಾರ್ ಕ್ಷೇತ್ರವಾಗಿದ್ದ ಕಲಬುರಗಿಯಲ್ಲಿ ಸೋಲಿಲ್ಲದ ಸರದಾರರಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿಯ ಡಾ.ಉಮೇಶ್ ಜಾಧವ್ ಪರಾಜಯಗೊಳಿಸಿದ್ದಾರೆ.
ಜಿದ್ದಾಜಿದ್ದಿನ ಲೋಕಸಭಾ ಕ್ಷೇತ್ರವಾಗಿದ್ದ ಕಲಬುರಗಿಯಲ್ಲಿ ಡಾ.ಉಮೇಶ್ ಜಾಧವ್ 6,42,510 ಮತ ಗಳಿಸಿದ್ದರೆ, ಕಾಂಗ್ರೆಸ್ ಪಕ್ಷದ ಮಲ್ಲಿಕಾರ್ಜುನ ಖರ್ಗೆ 5,51,632 ಮತ ಪಡೆದಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಖರ್ಗೆ ಹೀನಾಯವಾಗಿ ಸೋಲು ಕಂಡಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಜಯಭೇರಿ:
ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ, ಜಿದ್ದಾಜಿದ್ದಿನ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದು, ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತೀವ್ರ ಹಿನ್ನಡೆ ಅನುಭವಿಸುವ ಮೂಲಕ ಸೋಲಿನ ರುಚಿ ಕಂಡಿದ್ದಾರೆ.
ಸುಮಲತಾ ಅಂಬರೀಶ್ 4,28,781 ಮತ ಗಳಿಸಿದ್ದರೆ, ನಿಖಿಲ್ ಕುಮಾರಸ್ವಾಮಿ 3,79,413 ಮತ ಪಡೆದಿದ್ದಾರೆ. ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಸುಮಲತಾ ಕೇವಲ 5,430 ಮತ ಹಾಗೂ ಎಂ ಸುಮಲತಾ 5,191 ಮತ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ