6 ಸಬ್ಮರೀನ್ ನಿರ್ಮಾಣದ ಪ್ರಸ್ತಾವನೆಗೆ ಕೇಂದ್ರ ರಕ್ಷಣಾ ಸಚಿವಾಲಯ ಅಸ್ತು
43 ಸಾವಿರ ಕೋಟಿ ರೂ. ವೆಚ್ಚದ ಯೋಜನೆ
Team Udayavani, Jun 4, 2021, 9:26 PM IST
ಹೊಸದಿಲ್ಲಿ : ಭಾರತೀಯ ನೌಕಾಪಡೆಗಾಗಿ ಆರು ಹೊಸ ಸಾಂಪ್ರದಾಯಿಕ ಜಲಾಂತರ್ಗಾಮಿಗಳನ್ನು ತಯಾರಿಸುವ ಬೃಹತ್ ಪ್ರಸ್ತಾವನೆಗೆ ರಕ್ಷಣ ಸಚಿವಾಲಯ ಒಪ್ಪಿಗೆ ನೀಡಿದೆ. “ಪಿ-75′ ಹೆಸರಿನ ಈ ಯೋಜನೆಯ ಅನುಷ್ಠಾನದ ಬಗ್ಗೆ ರಕ್ಷಣ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣ ಖರೀದಿ ಮಂಡಳಿ (ಡಿಎಸಿ)ಯ ಸಭೆಯಲ್ಲಿ ಪ್ರಸ್ತಾವನೆಗೆ ಅಂಗೀಕಾರ ನೀಡಲಾಗಿದೆ.
ಮುಂದಿನ 12 ವರ್ಷಗಳಲ್ಲಿ ಈ ಜಲಾಂತರ್ಗಾಮಿಗಳು ಹಂತಹಂತವಾಗಿ ತಯಾರಾಗಲಿವೆ. ಸದ್ಯ ಈ ಯೋಜನೆಯ ಅಂದಾಜು ವೆಚ್ಚವನ್ನು 43 ಸಾವಿರ ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ. ಯೋಜನೆಯ ಅನುಷ್ಠಾನದ ಹೊಣೆಯನ್ನು ಎಲ್ ಆ್ಯಂಡ್ ಟಿ ಮತ್ತು ಕೇಂದ್ರ ಸರಕಾರಿ ಸ್ವಾಮ್ಯದ ಮಝಗಾಂವ್ ಡಾಕ್ಸ್ ಲಿ.ಗೆ (ಎಂಡಿಎಲ್) ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಕಂಪೆನಿಗಳು ಭಾರತೀಯ ರಕ್ಷಣ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ವಿಶ್ವದ ದೈತ್ಯ ಕಂಪೆನಿಗಳ ಜತೆ ಸೇರಿ ಯೋಜನೆಯನ್ನು ಅನುಷ್ಠಾನಕ್ಕೆ ತರಲಿವೆ.
ವ್ಯೂಹಾತ್ಮಕ ಪಾಲುದಾರಿಕೆ ಮಾದರಿಯಡಿ ಈ ಸಬ್ಮರೀನ್ಗಳ ನಿರ್ಮಾಣ ನಡೆಯಲಿದೆ. ಇವುಗಳ ನಿರ್ಮಾಣದಲ್ಲಿ ವಿದೇಶಿ ರಕ್ಷಣ ಸಂಸ್ಥೆಗಳೊಂದಿಗೆ ದೇಶೀಯ ರಕ್ಷಣ ಸಂಸ್ಥೆಗಳೂ ಕೈಜೋಡಿಸಲಿದ್ದು, ಆ ಮೂಲಕ ಆಮದು ಅವಲಂಬನೆ ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ.
ಇದನ್ನೂ ಓದಿ :2 ಡೋಸ್ ಹಾಕಿದವರಿಗೆ ಸೋಂಕು ತಟ್ಟಿದ್ದರೂ, ಜೀವ ಹಾನಿಯಾಗಿಲ್ಲ: ಏಮ್ಸ್ ಅಧ್ಯಯನದಲ್ಲಿ ಉಲ್ಲೇಖ
ಚೀನಕ್ಕೆ ಸಡ್ಡು
ಚೀನವು ಇತ್ತೀಚೆಗೆ ತನ್ನ ನೌಕಾದಳದ ಬಲವರ್ಧನೆಗಾಗಿ ಹಲವಾರು ಅತ್ಯಾಧುನಿಕ ಜಲಾಂತರ್ಗಾಮಿಗಳನ್ನು ನಿರ್ಮಿಸಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಭಾರತವೂ ತನ್ನ ನೌಕಾಪಡೆಯನ್ನು ಶಕ್ತಿಶಾಲಿಯಾಗಿಸಲು ಹೊಸ ಹೆಜ್ಜೆಗಳನ್ನು ಇರಿಸುತ್ತಿದ್ದು, ಅದರ ಭಾಗವಾಗಿ ಆರು ಹೊಸ ಜಲಾಂತರ್ಗಾಮಿಗಳ ನಿರ್ಮಾಣಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ