ನೌಕೆ ತಯಾರಿಕ ಹಬ್ ಆಗಲಿದೆ ಭಾರತ : ICGS ಕಾರ್ಯಕ್ರಮದಲ್ಲಿ ರಕ್ಷಣ ಸಚಿವ ರಾಜನಾಥ್ ಸಿಂಗ್
Team Udayavani, Aug 28, 2021, 11:55 PM IST
ಚೆನ್ನೈ: ಇಡೀ ವಿಶ್ವದಲ್ಲೇ ಒಂದು ಅತ್ಯು ತ್ತಮ ಸಮರ ನೌಕೆ ನಿರ್ಮಾಣ ಕೇಂದ್ರ ವಾಗುವ ಅದ್ಭುತ ಅವಕಾಶಗಳನ್ನು ಭಾರತ ಹೊಂದಿದೆ. ಅದಕ್ಕೆ ಬೇಕಾದ ಎಲ್ಲ ಸೌಕರ್ಯಗಳನ್ನು ನಮ್ಮ ಸರಕಾರ ಈಗಾಗಲೇ ಕಲ್ಪಿಸಿದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೇಶೀಯವಾಗಿ ತಯಾರಿಸಲಾಗಿರುವ “ವಿಗ್ರಹ’ ಗಸ್ತು ನೌಕೆಯನ್ನು ಭಾರತೀಯ ಕರಾವಳಿ ರಕ್ಷಕ ಪಡೆಯ (ಐಸಿಜಿಎಸ್) ಸೇವೆಗೆ ನಿಯೋಜಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ ನಾಡಿದ ಅವರು ಈ ವಿಷಯ ತಿಳಿಸಿದರು. “ಇಡೀ ವಿಶ್ವದಲ್ಲಿ ಎಲ್ಲ ದೇಶಗಳೂ ತಮ್ಮ ರಕ್ಷಣ ವೆಚ್ಚವನ್ನು ಅಗಾಧವಾಗಿ ಹೆಚ್ಚಿಸಿಕೊಂಡಿವೆ. ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಒಟ್ಟಾರೆ ರಕ್ಷಣ ವೆಚ್ಚ 15 ಸಾವಿರ ಕೋಟಿ ರೂ.ಗಳನ್ನು ಮೀರುತ್ತದೆ. ಇದನ್ನು ಮನಗಂಡು ನಮ್ಮ ಸರಕಾರ, ಭಾರತವನ್ನು ವಿಶ್ವದ ದೊಡ್ಡ ಸಮರ ನೌಕೆಗಳ ನಿರ್ಮಾಣ ತಾಣವನ್ನಾಗಿಸಲು ಅಗತ್ಯವಾದ ಎಲ್ಲ ನಿಯಮಗಳನ್ನು ಜಾರಿಗೊಳಿಸಿದೆ’ ಎಂದಿದ್ದಾರೆ.
ಕರಾವಳಿ ರಕ್ಷಕ ಪಡೆಗೆ ಸೇರಿಸಲಾದ “ವಿಗ್ರಹ’ ಗಸ್ತು ನೌಕೆಯನ್ನು ಲಾರ್ಸೆನ್ ಆ್ಯಂಡ್ ಟರ್ಬೊ ಕಂಪೆನಿಯು ಪೂರೈಸಿದೆ. ಐಸಿಜಿಎಸ್ಗೆ ಸೇರ್ಪಡೆಯಾದ ಒಟ್ಟು 7 ನೌಕೆಗಳ ಪೈಕಿ ಕೊನೆಯ ನೌಕೆ ಇದಾಗಿದೆ. ಸುಧಾರಿತ ಟೆಕ್ನಾಲಜಿ ರೇಡಾರ್ ಗಳು, ನೇವಿಗೇಶನ್ ಮತ್ತು ಸಂವಹನ ಉಪಕರಣಗಳು, ಯಾವುದೇ ರೀತಿಯ ಪ್ರತಿಕೂಲ ಪರಿಸ್ಥಿತಿಯಲ್ಲೂ ಕಾರ್ಯನಿರ್ವಹಿಸಬಲ್ಲ ಸೆನ್ಸರ್ ಗಳು ಮತ್ತು ಯಂತ್ರಗಳು ಇದರಲ್ಲಿವೆ. ಸಮುದ್ರದಲ್ಲಿ ತೈಲ ಸೋರಿಕೆಯನ್ನು ನಿಯಂತ್ರಣಕ್ಕೆ ತರುವ ಸಾಧನವನ್ನೂ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ