2008ರ ಬಾಟ್ಲಾ ಎನ್ಕೌಂಟರ್ ಪ್ರಕರಣ : ಉಗ್ರ ಆರಿಝ್ಗೆ ಖಾನ್ಗೆ ಗಲ್ಲು
Team Udayavani, Mar 15, 2021, 10:00 PM IST
ಹೊಸದಿಲ್ಲಿ : ದಿಲ್ಲಿಯಲ್ಲಿ 2008ರಲ್ಲಿ ನಡೆದಿದ್ದ ಬಾಟ್ಲಾ ಎನ್ಕೌಂಟರ್ ವೇಳೆ ಪೊಲೀಸ್ ಅಧಿಕಾರಿಯೊಬ್ಬರನ್ನು ಹತ್ಯೆಗೈದಿದ್ದ ಇಂಡಿಯನ್ ಮುಜಾಹಿದೀನ್ ಸಂಘಟನೆಯ ಉಗ್ರ ಆರಿಝ್ ಖಾನ್ಗೆ ದಿಲ್ಲಿಯ ಸ್ಥಳೀಯ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಎನ್ಕೌಂಟರ್ ನಡೆದಲ್ಲಿಂದ ತಪ್ಪಿಸಿಕೊಂಡಿದ್ದ ಆರಿಝ್ ಖಾನ್ನನ್ನು 2018ರ ಫೆಬ್ರವರಿಯಲ್ಲಿ ದಿಲ್ಲಿ ಪೊಲೀಸರ ವಿಶೇಷ ತಂಡ ಬಂಧಿಸಿತ್ತು. ಉತ್ತರಪ್ರದೇಶ ಮೂಲದ ಈತನನ್ನು ನ್ಯಾಯಾಲಯ ಕಳೆದ ವಾರ ಅಪರಾಧಿ ಎಂದು ಘೋಷಿಸಿ, ಶಿಕ್ಷೆಯ ಪ್ರಮಾಣದ ಪ್ರಕಟನೆಯನ್ನು ಮಾ. 15ಕ್ಕೆ ನಿಗದಿಪಡಿಸಿತ್ತು. ಈತ 2008ರಲ್ಲಿ ದಿಲ್ಲಿ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶಗಳಲ್ಲಿ ನಡೆದ ಸರಣಿ ಸ್ಫೋಟಗಳ ರೂವಾರಿಯೂ ಹೌದು ಎಂದು ಮೂಲಗಳು ತಿಳಿಸಿವೆ.
2008ರ ಸೆ. 19ರಂದು ದಿಲ್ಲಿಯ ಜಾಮಿಯಾ ನಗರದಲ್ಲಿರುವ ಬಾಟ್ಲಾ ಹೌಸ್ನಲ್ಲಿ ಅಡಗಿದ್ದ ಮುಜಾಹಿದೀನ್ ಉಗ್ರರು ತಮ್ಮ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದ ದಿಲ್ಲಿ ಪೊಲೀಸ್ ವಿಶೇಷ ಕಾರ್ಯಪಡೆಯ ಸಿಬಂದಿ ಜತೆಗೆ ಗುಂಡಿನ ಚಕಮಕಿ ನಡೆಸಿದ್ದರು. ಆಗ ಕಾರ್ಯಪಡೆಯ ಇನ್ಸ್ಪೆಕ್ಟರ್ ಮೋಹನ್ಚಂದ್ ಶರ್ಮಾ ಹುತಾತ್ಮರಾಗಿದ್ದರಲ್ಲದೆ, ಇತರ ಇಬ್ಬರು ಸಿಬಂದಿ ಗಾಯಗೊಂಡಿದ್ದರು.
ಇದನ್ನೂ ಓದಿ :ನೋಟಾ: ಕೇಂದ್ರದ ಅಭಿಪ್ರಾಯ ಕೋರಿದ ಸುಪ್ರೀಂ ಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ