2020ರ ಗಲಭೆ ಪ್ರಕರಣಗಳ ತನಿಖೆ ವಿಫಲ : ದೆಹಲಿ ಪೊಲೀಸರಿಗೆ 25 ಸಾವಿರ ರೂ. ದಂಡ
Team Udayavani, Jul 14, 2021, 11:07 PM IST
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 2020ರಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ತನಿಖೆ ನಡೆಸುವಲ್ಲಿ ದೆಹಲಿ ಪೊಲೀಸರು ದಯನೀಯವಾಗಿ ವಿಫಲರಾಗಿದ್ದಾರೆ ಎಂದು ಉಲ್ಲೇಖೀಸಿರುವ ನ್ಯಾಯಾಲಯವು, ಪೊಲೀಸರಿಗೆ 25 ಸಾವಿರ ರೂ. ದಂಡ ವಿಧಿಸಿದೆ.
ಕಾರ್ಕದೂìಮಾ ಕೋರ್ಟ್ನಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಹಿಂದಿನ ಆದೇಶವನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ದಂಡ ವಿಧಿಸಿದೆ.
ಗಲಭೆ ಪ್ರಕರಣಗಳಿಗೆ ಸಂಬಂಧಿಸಿದ ಎಫ್ಐಆರ್ ಒಂದರಲ್ಲಿ ದೆಹಲಿ ಪೊಲೀಸರು ತನಿಖೆಯನ್ನು “ಅತ್ಯಂತ ಸಾಂದರ್ಭಿಕ, ನಿರ್ದಯ ಮತ್ತು ವಿಡಂಬನಾತ್ಮಕ ರೀತಿಯಲ್ಲಿ’ ನಡೆಸಿದ್ದಾರೆ ಎಂದು ಕೋರ್ಟ್ ಹೇಳಿದೆ. ಜತೆಗೆ, ಗಲಭೆ ವೇಳೆ ಗಾಯಗೊಂಡ ಮೊಹಮದ್ ನಾಸಿರ್ ಎಂಬವರ ದೂರಿಗೆ ಸಂಬಂಧಿಸಿ ಪ್ರತ್ಯೇಕ ಎಫ್ಐಆರ್ ದಾಖಲಿಸುವಂತೆ ನಿರ್ದೇಶಿಸಿದೆ.
ಇದನ್ನೂ ಓದಿ : ಅಗ್ನಿಶಾಮಕ ಠಾಣಾಧಿಕಾರಿ ರಾಜುಗೆ ಸಿಎಂ ಚಿನ್ನದ ಪದಕ
2020ರ ಫೆ. 20ರಂದು ದೆಹಲಿಯ ಜಫ್ರಾಬಾದ್ನಲ್ಲಿ ಕೋಮು ಗಲಭೆ ನಡೆದು, 58 ಮಂದಿ ಮೃತರಾಗಿ, 581 ಮಂದಿ ಗಾಯಗೊಂಡಿದ್ದರು. ಅಲ್ಲದೆ ಅನೇಕ ಅಂಗಡಿ-ಮುಂಗಟ್ಟುಗಳು, ಮನೆಗಳು ಸುಟ್ಟುಭಸ್ಮವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು