Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Team Udayavani, Apr 11, 2024, 10:54 AM IST
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರನ್ನು ವಿಜಿಲೆನ್ಸ್ ಡಿಪಾರ್ಟ್ ಮೆಂಟ್ ಕರ್ತವ್ಯದಿಂದ ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:LokSabha Election; ಚುನಾವಣೆ ಪ್ರಚಾರ ವೀಕ್ಷಿಸಲು 25 ರಾಷ್ಟ್ರಗಳನ್ನು ಆಹ್ವಾನಿಸಿದ ಬಿಜೆಪಿ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ(ED) ವಿಚಾರಣೆಗೊಳಪಡಿಸಿದ್ದು, ಈ ಹಿನ್ನೆಲೆಯಲ್ಲಿ ವಿಭವ್ ಕುಮಾರ್ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ವರದಿ ವಿವರಿಸಿದೆ.
ತಕ್ಷಣವೇ ಜಾರಿಗೆ ಬರುವಂತೆ ಕುಮಾರ್ ನೇಮಕಾತಿಯನ್ನು ರದ್ದುಪಡಿಸಲಾಗಿದೆ ಎಂದು ವಿಶೇಷ ಕಾರ್ಯದರ್ಶಿ ರಾಜಶೇಖರ್ ಕಳುಹಿಸಿರುವ ಆದೇಶದಲ್ಲಿ ನಮೂದಿಸಲಾಗಿದೆ.