ಡೆಲ್ಟಾ ಪ್ಲಸ್‌ ಕಡೆಗಣಿಸಿದರೆ ಅಪಾಯ ಖಚಿತ!


Team Udayavani, Jun 26, 2021, 7:05 AM IST

ಡೆಲ್ಟಾ ಪ್ಲಸ್‌ ಕಡೆಗಣಿಸಿದರೆ ಅಪಾಯ ಖಚಿತ!

ಬೆಂಗಳೂರು: ಕೊರೊನಾ ವೈರಸ್‌ ಡೆಲ್ಟಾ ರೂಪಾಂತ ರದ ನಿರ್ಲಕ್ಷ್ಯವೇ ರಾಜ್ಯದಲ್ಲಿ ಎರಡನೇ ಅಲೆಯ ಗಂಭೀರತೆಗೆ ಕಾರಣವಾಗಿತ್ತು. ಈಗ ಡೆಲ್ಟಾ ಪ್ಲಸ್‌ ಅನ್ನೂ ಕಡೆಗಣಿಸಿದರೆ 3ನೇ ಅಲೆ ಹೆಚ್ಚು ಭೀಕರವಾಗಲಿದೆ.

ರಾಜ್ಯದಲ್ಲಿ ಇನ್ನೆರಡು ತಿಂಗಳಲ್ಲಿ 3ನೇ ಅಲೆ ಉಚ್ಛಾ†ಯ ಸ್ಥಿತಿಗೆ ತಲ ಪುವ ಸಾಧ್ಯತೆಗಳಿವೆ ಎನ್ನುತ್ತಾರೆ ತಜ್ಞರು. ಮೊದಲ ಅಲೆಯು 3 ತಿಂಗಳಲ್ಲಿ ಹಾಗೂ 2ನೇ ಅಲೆ ಒಂದೂವರೆ ತಿಂಗಳಲ್ಲಿ ಹೆಚ್ಚು ತೀವ್ರವಾಗಿತ್ತು. ಮೂರನೇ ಅಲೆಯು ಮೊದಲೆರಡು ಅಲೆಗಳಿಗಿಂತ ಬೇಗ ಉಚ್ಛಾ†ಯ ಸ್ಥಿತಿಗೆ ತಲುಪಬಹುದು. ಆದ್ದರಿಂದ ಸರಕಾರ ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದಿದ್ದು ಸೋಂಕು ಹರಡದಂತೆ ನೋಡಿಕೊಳ್ಳುವುದು ಅಗತ್ಯ ಎಂದು ಎಚ್‌ಸಿಜಿ ಆಸ್ಪತ್ರೆ ವೈದ್ಯ ಡಾ| ವಿಶಾಲ್‌ ರಾವ್‌ ಹೇಳಿದ್ದಾರೆ.

2ನೇ ಅಲೆ ಗಂಭೀರವಾಗಿತ್ತು
ಕಳೆದ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನ‌ ಕೊರೊನಾ ವೈರಸ್‌ ರೂಪಾಂತರ ತಳಿಗಳು ಜತೆಗೂಡಿ ಡಬಲ್‌ ಮ್ಯೂಟೆಂಟ್‌ (ಬಿ.1.617) ಎಂಬ ಹೊಸ ತಳಿ ಕಾಣಿಸಿಕೊಂಡಿದೆ. ಮೂಲ ಕೊರೊನಾ ವೈರಸ್‌ಗೆ ಹೋಲಿಸಿದರೆ ಈ ತಳಿ ಹೆಚ್ಚು ಪ್ರಬಲವಾಗಿತ್ತು ಎಂಬ ಕಾರಣಕ್ಕೆ ಇದನ್ನು ಡೆಲ್ಟಾ ಎಂದು ಕರೆಯಲಾಗಿತ್ತು. ಡಿಸೆಂಬರ್‌ ಮೊದಲ ವಾರದಲ್ಲಿ ಇದು ರಾಜ್ಯ ದಲ್ಲಿ ಪತ್ತೆಯಾಯಿತು. ಆಗ ಅಷ್ಟೊಂದು ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ. ಎಪ್ರಿಲ್‌, ಮೇ ತಿಂಗಳಲ್ಲಿ ತೀವ್ರತೆ ಹೆಚ್ಚಾಯಿತು. ಈಗ ಡೆಲ್ಟಾದ ಮುಂದುವರಿದ ಭಾಗವಾಗಿ ಡೆಲ್ಟಾ ಪ್ಲಸ್‌ (ಬಿ.1.617.2.1) ಕಾಣಿಸಿಕೊಂಡಿದೆ ಎಂದು ವಂಶವಾಹಿ ತಜ್ಞರು ತಿಳಿಸಿದ್ದಾರೆ.

ರೂಪಾಂತರಗಳು ಶಕ್ತಿಶಾಲಿ
ಎರಡು ಮೂರು ತಳಿಗಳು ಸೇರಿ ರೂಪಾಂತರಗಳು ಉಂಟಾಗಿರುತ್ತವೆ. ವೈರಾಣು ಹೊಸ ತಳಿ ಬಂದಾಗ ಅದರ ಸಾಮರ್ಥ್ಯ ಹೆಚ್ಚಿರುತ್ತದೆ ಎಂದು ಡಾ| ವಿಶಾಲ್‌ ರಾವ್‌ ತಿಳಿಸಿದ್ದಾರೆ.

ವೈದ್ಯರು, ತಜ್ಞರಿಗೆ ಬಿಟ್ಟುಬಿಡಿ
ಕೊರೊನಾ ವೈರಸ್‌ ಅಲೆ, ಡೆಲ್ಟಾ, ಡೆಲ್ಟಾ+ ಏನೇ ಬಂದರೂ ಆತಂಕಕ್ಕೊಳಗಾಗಬೇಡಿ. ಅವುಗಳ ಬಗ್ಗೆ ತಜ್ಞರು,ವೈದ್ಯರು ಸಂಶೋಧನೆ ನಡೆಸುತ್ತಾರೆ. ಲಸಿಕೆ ಹಾಕಿಸಿಕೊಳ್ಳು ವುದು, ಕೊರೊನಾ ಮಾರ್ಗಸೂಚಿ ಪಾಲಿಸುವುದು, ಎಲ್ಲ ಕಡೆಗಳಲ್ಲೂ ಸ್ವತ್ಛತೆ ಪಾಲಿಸುವುದು ಮುಂತಾದ ಕ್ರಮಗಳಿಂದ ಕೊರೊನಾದಿಂದ ರಕ್ಷಣೆ ಸಾಧ್ಯ ಎಂದು ಮಣಿಪಾಲ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ಮುಖ್ಯಸ್ಥ ಡಾ| ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ.

ಡೆಲ್ಟಾ ಪ್ಲಸ್‌ ವಿಶೇಷತೆ
– ಹಿಂದಿನ ತಳಿಗೆ ಹೋಲಿಸಿದರೆ ಸೋಂಕು ಸಾಮರ್ಥ್ಯ ಸಾಕಷ್ಟು ಹೆಚ್ಚು.
– ಸೋಂಕು ತಗಲಿದವರಿಗೆ ತೀವ್ರತೆ ಹೆಚ್ಚಿರುತ್ತದೆ. ನೇರವಾಗಿ ಶ್ವಾಸಕೋಶಕ್ಕೆ ಹಾನಿ ಮಾಡುತ್ತದೆ. ಆಕ್ಸಿಜನ್‌ ಮತ್ತು ವೆಂಟಿಲೇಟರ್‌ ಅಗತ್ಯವಿರುತ್ತದೆ.
– ದೇಹದಲ್ಲಿ ಕೊರೊನಾ ಲಸಿಕೆಯ ಶಕ್ತಿಯನ್ನು ಕುಗ್ಗಿಸುವ ಸಾಧ್ಯತೆ ಇದೆ.

ಮುಂಜಾಗ್ರತಾ ಕ್ರಮ
– ಡೆಲ್ಟಾ ಪ್ಲಸ್‌ ದೃಢಪಟ್ಟವರ ಸಂಪರ್ಕಿತರನ್ನು ಶೀಘ್ರ ಪತ್ತೆ ಮಾಡಿ ಪರೀಕ್ಷೆ ನಡೆಸಬೇಕು. ಕಡ್ಡಾಯ ಕ್ವಾರಂಟೈನ್‌ ಮಾಡಬೇಕು.
– ವೈರಸ್‌ ವಂಶವಾಹಿ ಪತ್ತೆಗೆ ನಡೆಸುವ ಪರೀಕ್ಷೆಯನ್ನು ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಆರಂಭಿಸಬೇಕು.
– ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಮಾದರಿಗಳನ್ನು ವಂಶವಾಹಿ ಪರೀಕ್ಷೆಗೆ ಒಳಪಡಿಸಬೇಕು.

– ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.