ಕತ್ತೆಗೊಂದು ಕಾಲ…!ಹುಳಿಯಾರಿನಲ್ಲಿ ಕತ್ತೆ ಹಾಲಿಗೂ ಭಾರೀ ಬೇಡಿಕೆ
Team Udayavani, Sep 21, 2019, 6:07 PM IST
ಹುಳಿಯಾರು: ಕತ್ತೆ ಹಾಲು ಬೇಕಾ ಕತ್ತೆ ಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಕಡಿಮೆಯಾಗುತ್ತೆ ಎಂದು ಕೂಗುತ್ತಿದ್ದಂತೆ ತಾಯಂದಿರು ಓಡೋಡಿ ಬಂದು ಹಾಲು ಖರೀದಿಸಿ ಮಕ್ಕಳಿಗೆ ಕುಡಿಸಿದರು.
ಹೌದು… ಇದು ಹುಳಿಯಾರಿನಲ್ಲಿ ಶನಿವಾರ ಕಂಡು ಬಂದ ದೃಶ್ಯ. ಕತ್ತೆಯನ್ನು ಜನರು ನಿಕೃಷ್ಟವಾಗಿ ಕಾಣುತ್ತಾರೆ. ಆದರೆ ಹುಳಿಯಾರಿನ ಜನರು ಕತ್ತೆ ಹಾಲು ಕುಡಿಯಲು ಆಸಕ್ತಿ ವಹಿಸಿರುವುದು ಅಚ್ಚರಿ ಸೃಷ್ಟಿಸಿದೆ. ಅಂದ ಹಾಗೆ ಕತ್ತೆ ಹಾಲು ಅರ್ಧ ಲೀಟರ್ನಷ್ಟು ಸಿಗುವುದಿಲ್ಲ. ಗ್ರಾಹಕರ ಎದುರೆ ಹಾಲು ಕರೆದು ಕೊಡಲಾಗುತ್ತದೆ. ಒಂದು ವಳಲೆ ಹಾಲಿಗೆ 50 ರೂ. ನಿಗದಿ ಮಾಡಿದ್ದಾರೆ.
ಒಂದು ಕತ್ತೆಯು ದಿನವೊಂದಕ್ಕೆ ಸುಮಾರು 300 ಎಂ.ಎಲ್. ನಿಂದ ಅರ್ಧ ಲೀಟರ್ ಹಾಲು ನೀಡುತ್ತದೆ . ಹಳ್ಳಿ ಹಳ್ಳಿ ತಿರುಗಿ ಮಾರಾಟ ಮಾಡಬೇಕು. ಹೆಚ್ಚೆಂದರೆ ದಿನಕ್ಕೆ 600ರಿಂದ 800 ರೂ ಸಂಪಾದಿಸುತ್ತೇವೆ . ಸದಾ ಇದನ್ನೇ ನಂಬುವುದೂ ಕಷ್ಟ. ಹೀಗಾಗಿ ಕೃಷಿ ಕೆಲಸಗಳಿಗೆ ಕೂಲಿ ಮಾಡಿ ಜೀವನ ನಿರ್ವಹಣೆ ಮಾಡುತ್ತೇವೆ ಎನ್ನುತ್ತಾರೆ ಕತ್ತೆ ಮಾಲೀಕ ಹನುಮಂತಪ್ಪ.
ಕೃಷಿ ಕಸುಬು ಇಲ್ಲದಿದ್ದಾಗ ಪಟ್ಟಣಗಳಿಗೆ ತೆರಳಿ ಕತ್ತೆ ಹಾಲು ಮಾರುತ್ತೇವೆ .ಬೆಳಗ್ಗೆ 7ರಿಂದ 10 ರವರೆಗೆ ಕತ್ತೆಯ ಹಾಲು ಎಂದು ಕೂಗುತ್ತಾ ಮಾರಾಟಗಾರರು ಅಡ್ಡಾಡುತ್ತಾರೆ. ಆಸಕ್ತರು ಹಣ ನೀಡಿ ಸ್ಥಳದಲ್ಲಿಯೇ ಕತ್ತೆ ಹಾಲು ಕುಡಿಯುತ್ತಾರೆ. ಒಟ್ಟಾರೆ “ಕತ್ತೆಗೊಂದು ಕಾಲ’ ಎಂಬ ಮಾತು ಈಗ ಹಾಲು ಸೇವನೆಯಿಂದ ನಿಜವಾಗಿದೆ!.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?