ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ವಿಡಿಯೋ: ನಿರ್ದೇಶಕ ನಂದಕಿಶೋರ್ ಆಕ್ರೋಶ
ಕನ್ನಡ ಚಿತ್ರರಂಗದ ಯಾವುದೇ ಕಲಾವಿದರ ಬಗ್ಗೆ ಮಾತನಾಡುವುದಕ್ಕೆ ಮೊದಲು ಎಚ್ಚರಿಕೆ ಇರಲಿ
Team Udayavani, Jul 4, 2022, 5:58 PM IST
ಬೆಂಗಳೂರು:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಸುದೀಪ್ ಅವರ ಕುರಿತು ವ್ಯಕ್ತಿಯೊಬ್ಬ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅಮೃತ್ ಪೌಲ್ ಬಂಧನದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ: ಸಿಎಂ ಬೊಮ್ಮಾಯಿ
ಒಂದೆಡೆ ಸುದೀಪ್ ಅಭಿಮಾನಿಗಳು ಕಿಡಿಕಾರಿದ್ದರೆ, ಮತ್ತೊಂದೆಡೆ ನಿರ್ದೇಶಕ ನಂದ ಕಿಶೋರ್ ಕಿಚ್ಚನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವ್ಯಕ್ತಿಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. “ ಕನ್ನಡ ಚಿತ್ರರಂಗದ ಯಾವುದೇ ಕಲಾವಿದರ ಬಗ್ಗೆ ಮಾತನಾಡುವುದಕ್ಕೆ ಮೊದಲು ಎಚ್ಚರಿಕೆ ಇರಲಿ ಎಂದು ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಅವರ ಬಗ್ಗೆ ವ್ಯಕ್ತಿಯೊಬ್ಬ ಕೀಳಾಗಿ ಮಾತನಾಡಿರುವ ವಿಡಿಯೋವನ್ನು ನೋಡಿದೆ. ಕನ್ನಡದ ನಟರಿಗೆ ನಪುಂಸಕರು ಎಂದು ಹೇಳುವ ಆತನ ಭಾಷೆಯಲ್ಲಿಯೇ ನೀನು ಎಂಥ ಸಂಸ್ಕಾರದಿಂದ ಬಂದಿದ್ದೀಯಾ ಎಂಬುದು ಗೊತ್ತಾಗುತ್ತದೆ. ಪ್ರಚಾರದ ತೇವಲಿಗಾಗಿ ಕನ್ನಡದ ಮೇರು ನಟನ ಹೆಸರನ್ನು ಬಳಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ್ದೆ. ನೀನು ನಪುಂಸಕನಲ್ಲದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಎಲ್ಲಿ ಅಡಗಿ ಕುಳಿತಿರುವೆ ಎಂದು ನಂದ ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ