ನನ್ನನ್ನು ಜೆಡಿಎಸ್ನಿಂದ ದೇವೇಗೌಡರು ಉಚ್ಛಾಟಿಸಿದ್ರು, ಗೊತ್ತಾಯ್ತಾ
Team Udayavani, May 11, 2019, 11:52 AM IST
ಕಲಬುರಗಿ:ಪಕ್ಷಾಂತರ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಗ್ಸಮರ ಮುಂದುವರಿದಿದ್ದು, ಜೆಡಿಎಸ್ ಬಿಟ್ಟು ಕಾಂಗ್ರೆಸ್ಗೆ ಹೋಗಿರಲಿಲ್ವೆ ಎಂದು ಪ್ರಶ್ನಿಸಿದ್ದ ಆರ್.ಅಶೋಕ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಿರುಗೇಟು ನೀಡಿದ್ದಾರೆ.
ಚಿಂಚೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನ್ನನ್ನ ಅಹಿಂದ ಚುಟುವಟಿಕೆ ನಡೆಸಿದ್ದಕ್ಕೆ ದೇವೇಗೌಡರು ಜೆಡಿಎಸ್ನಿಂದ ಉಚ್ಛಾಟನೆ ಮಾಡಿದ್ದರು. ನಾನು ಪಕ್ಷ ಬಿಟ್ಟಿರಲಿಲ್ಲ. ನನಗೂ ಉಮೇಶ್ ಜಾಧವ್ಗೆ ಇರುವ ವ್ಯತ್ಯಾಸ ಇಷ್ಟೆ ಎಂದರು.
ಅಶೋಕ್ಗೆ ಸುಳ್ಳು ಗೊತ್ತಿಲ್ಲ, ಸತ್ಯವೂ ಗೊತ್ತಿಲ್ಲ, ಏನೂ ಗೊತ್ತಿಲ್ಲ ಎಂದರು.
ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಅವರಿಗೆ ಸಿದ್ದರಾಮಯ್ಯ ಗೋಮುಖ ವ್ಯಾಘ್ರ ಎಂದು ಕರೆದಿದ್ದರು. ಪಕ್ಷಕ್ಕೆ ದ್ರೋಹ ಬಗೆದ ವ್ಯಕ್ತಿ ಎಂದು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದರು.
ಆರ್.ಅಶೋಕ್ ಅವರು ಸಿದ್ದಾರಮಯ್ಯ ಅವರಿಗೆ ಜೆಡಿಎಸ್ ಮೇಲೆ 40 ವರ್ಷದ ದ್ವೇಷ. ಅವರನ್ನು ಮೈಸೂರು ರೋಡ್ಗೆ ತಳ್ಳಲಾಗಿತ್ತು, ಅದನ್ನು ಅವರು ತೀರಿಸಿಕೊಳ್ಳಲಿದ್ದಾರೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ