ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ! ಉದ್ಯಮಿ, ರಾಜಕಾರಣಿಗಳು ಸೇರಿ 100ಕ್ಕೂ ಅಧಿಕ ಮಂದಿ ಬಂಧನ


Team Udayavani, Nov 16, 2020, 11:28 AM IST

ಜೂಜು ಅಡ್ಡೆ ಮೇಲೆ ಪೋಲೀಸರ ದಾಳಿ! ಉದ್ಯಮಿ, ರಾಜಕಾರಣಿಗಳು ಸೇರಿ 100ಕ್ಕೂ ಅಧಿಕ ಮಂದಿ ಬಂಧನ

ಧಾರವಾಡ: ದೀಪಾವಳಿ ಹಬ್ಬದ ಪ್ರಯುಕ್ತ ಇಸ್ಪೀಟ್‌ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಬಿಜೆಪಿ -ಕಾಂಗ್ರೆಸ್‌ ಮುಖಂಡರು ಸೇರಿ ಸುಮಾರು ನೂರಕ್ಕೂ ಹೆಚ್ಚು ಜನರನ್ನು ಬಂಧಿಸಿ, 55 ಲಕ್ಷಕ್ಕೂ ಅಧಿಕ ಮೊತ್ತದ ನಗದು ವಶಪಡಿಸಿಕೊಂಡ ಘಟನೆ ರವಿವಾರ ನಡೆದಿದೆ.

ಬೆಳಗಿನ ಜಾವ ಎಸ್‌ಪಿ ಕೃಷ್ಣಕಾಂತ ನೇತೃತ್ವದ ತಂಡ ರಮ್ಯ ರೆಸಿಡೆನ್ಸಿ ಹಾಗೂ ಪ್ರೀತಿ ಲಾಡ್ಜ್ ಮೇಲೆ ದಾಳಿ ನಡೆಸಿದೆ. ಈ ಪೈಕಿ ರಮ್ಯ ರೆಸಿಡೆನ್ಸಿಯಲ್ಲಿ 50-60 ಜನರನ್ನು ಬಂಧಿಸಿ 49 ಲಕ್ಷ ನಗದು ವಶಪಡಿಸಿಕೊಂಡಿದ್ದು, ಪ್ರೀತಿ ಲಾಡ್ಜ್ ನಲ್ಲಿ 60-70 ಜನರನ್ನು ಬಂಧಿಸಿ ಸುಮಾರು 8 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ರಾಘವೇಂದ್ರ ಸುಹಾಸ ಖಚಿತಪಡಿಸಿದ್ದಾರೆ.

ಲಾಡ್ಜ್ ಕೊಠಡಿಗಳಲ್ಲಿ ಅಂದರ್‌- ಬಾಹರ್‌, ಇಸ್ಪೀಟ್‌ ಜೂಜಾಟದಲ್ಲಿ ತೊಡಗಿದ್ದ ಕಾಂಗ್ರೆಸ್‌-ಬಿಜೆಪಿಯ ಕೆಲ ಮುಖಂಡರು, ಹೋಟೆಲ್‌ ಉದ್ಯಮಿಗಳು ದಾಳಿ ವೇಳೆ ಸಿಕ್ಕಿ ಬಿದ್ದಿದ್ದು, 34 ವಿವಿಧ ವಾಹನಗಳು, 66 ಮೊಬೈಲ್‌ಗ‌ಳನ್ನೂ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ಕೇಂದ್ರದ ಮಾರ್ಗಸೂಚಿ ಆಧರಿಸಿ ಕಂಬಳ ಆಯೋಜನೆಗೆ ನಿರ್ಧಾರ

ನಾಲ್ವರು ಪೊಲೀಸರ ಅಮಾನತು: ಬಿಜೆಪಿ ಮುಖಂಡನ ಜತೆಗೆ ಇಸ್ಪೀಟ್‌ ಜೂಜಾಟದಲ್ಲಿ ತೊಡಗಿದ್ದ ಪೊಲೀಸರನ್ನು ಎಸ್‌ಪಿ ಕೃಷ್ಣಕಾಂತ ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ. ಮುಮ್ಮಿಗಟ್ಟಿ ಬಳಿಯ ಹೋಟೆಲ್‌ನಲ್ಲಿ ಜೂಜಾಟ ಆಡುತ್ತಿದ್ದಾಗ ಡಿವೈಎಸ್ಪಿ ರವಿ ನಾಯಕ ನೇತೃತ್ವದಲ್ಲಿ ದಾಳಿ ನಡೆದಿತ್ತು. ಜೂಜಾಟ ನಿರತ ಹತ್ತು ಜನರ ಪೈಕಿ ಗರಗ ಠಾಣೆಯ ಮಂಜುನಾಥ ನಾಗಾವಿ, ಆತ್ಮಾನಂದ ಬೆಟಗೇರಿ, ಗ್ರಾಮೀಣ ಠಾಣೆಯ ಇಸ್ಮಾಯಿಲ್‌ ಸಯ್ಯದನವರ್‌ ಹಾಗೂ ಸಶಸ್ತ್ರ ಪಡೆಯ ಮೈಯುದ್ದೀನ ಮುಲ್ಲಾ ಕೂಡ ಸೇರಿದ್ದು, ಅಮಾನತು ಶಿಕ್ಷೆಗೆ ಒಳಗಾಗಿದ್ದಾರೆ.

45 ಜನ ಅಂದರ್‌-95 ಸಾವಿರ ರೂ. ಬಾಹರ್‌!
ಹುಬ್ಬಳ್ಳಿ: ಹಳೇಹುಬ್ಬಳ್ಳಿ, ಅಶೋಕನಗರ, ಬೆಂಡಿಗೇರಿ ಹಾಗೂ ಕಸಬಾಪೇಟೆ ಠಾಣೆ ವ್ಯಾಪ್ತಿಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಜೂಜಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿ ಒಟ್ಟು 45 ಜನರನ್ನು ಬಂಧಿಸಿ, 95,550 ನಗದು, 6 ಮೊಬೈಲ್‌ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಹಳೇಹುಬ್ಬಳ್ಳಿ ಅರವಿಂದನಗರದ ಭೈರನಾಥ ಕಲ್ಯಾಣ ಮಂಟಪ ಬಳಿ ರವಿವಾರ ಜೂಜಾಡುತ್ತಿದ್ದಾಗ ಹಳೇಹುಬ್ಬಳ್ಳಿ ಪೊಲೀಸರು ದಾಳಿ ಮಾಡಿ 17ಜನರನ್ನು ಬಂಧಿಸಿ, 10,500 ನಗದು ವಶಪಡಿಸಿಕೊಂಡಿದ್ದಾರೆ. ಮಯೂರ ಬಡಾವಣೆ ಬಳಿಯ ಇಂದಿರಾನಗರ ದ್ಯಾಮವ್ವನ ಗುಡಿ ಹತ್ತಿರ ಜೂಜಾಡುತ್ತಿದ್ದವರ ಮೇಲೆ ಅಶೋಕನಗರ ಪೊಲೀಸರು ದಾಳಿ ಮಾಡಿ 6 ಜನರನ್ನು ಬಂಧಿಸಿ 15,790 ನಗದು, 6 ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ಬೆಂಡಿಗೇರಿ ಪೊಲೀಸರು ಮಂಟೂರ ರಸ್ತೆ ಕೃಪಾನಗರ ಬಳಿಯ ಸ್ಮಶಾನದಲ್ಲಿ ಜೂಜಾಡುತ್ತಿದ್ದ ಎಂಟು ಜನರನ್ನು ಬಂಧಿಸಿ 24,340 ನಗದು ಹಾಗೂ ನಗರ ಹೊರವಲಯದ ಹೊಸ ಗಬ್ಬೂರನಲ್ಲಿ ಹೊಲದಲ್ಲಿ ಜೂಜಾಡುತ್ತಿದ್ದ ಐದು ಜನರನ್ನು ಬಂಧಿಸಿ 17,490ರೂ. ನಗದು ವಶಪಡಿಸಿಕೊಂಡಿದ್ದಾರೆ. ಕಸಬಾಪೇಟೆ ಪೊಲೀಸರು ಹಳೇಹುಬ್ಬಳ್ಳಿ ಸಿದ್ಧಾರ್ಥ ಕಾಲೋನಿ ಯಲ್ಲಿ ಜೂಜಾಡುತ್ತಿದ್ದ 9 ಜನರನ್ನು ಬಂಧಿಸಿ 27,430 ರೂ. ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.