ಟ್ವಿಟರ್ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ರಾಜೀನಾಮೆ
Team Udayavani, Jun 27, 2021, 9:39 PM IST
ನವದೆಹಲಿ: ದಿಢೀರ್ ಬೆಳವಣಿಗೆಯೊಂದರಲ್ಲಿ ಟ್ವಿಟರ್ ಸಂಸ್ಥೆಯಲ್ಲಿ ಭಾರತೀಯ ಗ್ರಾಹಕರ ಕುಂದು ಕೊರತೆ ನಿವಾರಣಾ ಅಧಿಕಾರಿಯಾಗಿ ಇತ್ತೀಚೆಗಷ್ಟೇ ನೇಮಕವಾಗಿದ್ದ ಧರ್ಮೇಂದ್ರ ಚತುರ್, ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಐಟಿ ನಿಯಮದ ಪ್ರಕಾರ, ಭಾರತದಲ್ಲಿ ಕುಂದುಕೊರತೆ ನಿವಾರಣಾ ಅಧಿಕಾರಿಯನ್ನು ನೇಮಿಸುವುದು ಎಲ್ಲಾ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಕಡ್ಡಾಯವಾಗಿದೆ.
ಹಾಗಾಗಿ, ಟ್ವಿಟರ್ ಸಂಸ್ಥೆ ಚತುರ್ ಅವರನ್ನು ತನ್ನಲ್ಲಿ ನೇಮಿಸಿಕೊಂಡಿತ್ತು. ಐಟಿ ನಿಯಮಗಳನ್ನು ಪರಿಪೂರ್ಣ ಪಾಲನೆ ಮಾಡದ ಟ್ವಿಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಕಾರ್ಮೋಡದ ವಾತಾವರಣ ಆವರಿಸಿರುವ ನಡುವೆಯೇ ಚತುರ್ ಅವರು ಹುದ್ದೆಯಿಂದ ನಿರ್ಗಮಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಲು ಟ್ವಿಟರ್ ಕೂಡ ನಿರಾಕರಿಸಿದೆ.
ಇದನ್ನೂ ಓದಿ :ಯೋಧರ, ನಿವೃತ್ತರ ಸಮರ್ಪಣಾ ಭಾವ ಅನುಕರಣೀಯ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್