ಹಳ್ಳಿ ಜನರಿಗೆ ಸ್ವಾಮಿತ್ವ ಬಲ ! ಡಿಜಿಟಲ್ ಆಸ್ತಿ ಮಾಲಕತ್ವ ದಾಖಲೆ ಹಸ್ತಾಂತರಕ್ಕೆ ಚಾಲನೆ
Team Udayavani, Oct 12, 2020, 6:45 AM IST
ಹೊಸದಿಲ್ಲಿ: ಇನ್ನು ಗ್ರಾಮೀಣ ಜನರ ಆಸ್ತಿ ಲಪಟಾಯಿಸಲು ಯಾರಿಗೂ ಸಾಧ್ಯವಿಲ್ಲ. ಸ್ವಾಮಿತ್ವ ಯೋಜನೆಯಿಂದ ಗ್ರಾಮ ಭಾರತದ ವರ್ಚಸ್ಸು ಬದಲಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕರ್ನಾಟಕದ ಎರಡು ಸೇರಿದಂತೆ ದೇಶದ 763 ಗ್ರಾಮಗಳ 1.32 ಲಕ್ಷ ಮಂದಿಗೆ ಡಿಜಿಟಲ್ ಆಸ್ತಿ ಮಾಲಕತ್ವ ದಾಖಲೆಯನ್ನು ನೀಡುವ ವೀಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತ ನಾಡಿದರು. ಇದೊಂದು ಐತಿಹಾಸಿಕ ಕ್ರಮ ಎಂದು ಬಣ್ಣಿಸಿದರು.
“ಸರ್ವೇ ಆಫ್ ವಿಲೇಜಸ್ ಆ್ಯಂಡ್ ಮ್ಯಾಪಿಂಗ್ ವಿದ್ ಇಂಪ್ರೊ ವೈಸ್ಡ್ ಟೆಕ್ನಾಲಜಿ ಇನ್ ವಿಲೇಜ್ ಏರಿಯಾಸ್’ (ಸ್ವಾಮಿತ್ವ -SVAMI TVA) ಯೋಜನೆಯಡಿ ಮೊದಲ ಬಾರಿಗೆ ಗ್ರಾಮೀಣ ಪ್ರದೇಶದ ಜಮೀನಿನ ಅಳತೆಯನ್ನು ಡ್ರೋನ್ ಮೂಲಕ ನಡೆಸಲಾಗಿದೆ. ಮಾಲಕರಿಗೆ ಆಧಾರ್ ಮಾದರಿಯ ಕಾರ್ಡ್ ಗಳನ್ನು ನೀಡಲಾಗುತ್ತದೆ.
ಇದನ್ನೂ ಓದಿ :ಫ್ರೆಂಚ್ ಓಪನ್ : 20ನೇ ಗ್ರಾಂಡ್ ಸ್ಲಾಮ್ ಗೆದ್ದ ನಡಾಲ್! ವೃತ್ತಿ ಜೀವನದ 100ನೇ ಗೆಲುವು
ದೇಶದ ಅಭಿವೃದ್ಧಿಯಲ್ಲಿ ಆಸ್ತಿ ಮಾಲಕತ್ವ ಬಹಳ ಪ್ರಭಾವ ಬೀರು ತ್ತದೆ ಎಂದು ಜಗತ್ತಿನ ಹಲವು ತಜ್ಞರು ಪ್ರತಿಪಾದಿಸುತ್ತಿದ್ದಾರೆ.
ಜಗತ್ತಿನ ಒಟ್ಟು ಜನಸಂಖ್ಯೆ ಪೈಕಿ ಮೂರನೇ ಒಂದಂಶದಷ್ಟು ಜನರು ಮಾತ್ರ ಸೂಕ್ತ ರೀತಿಯಲ್ಲಿ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಮುಂದಿನ 3ರಿಂದ 4 ವರ್ಷಗಳ ಅವಧಿಯಲ್ಲಿ ದೇಶದ ಪ್ರತಿಯೊಂದು ಗ್ರಾಮದ ನಿವಾಸಿಗೂ ಇದೇ ಮಾದರಿಯ ಆಸ್ತಿ ಮಾಲಕತ್ವದ ಕಾರ್ಡ್ ಗಳನ್ನು ವಿತರಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ಆಸ್ತಿ ಹಕ್ಕಿನಿಂದಾಗಿ ಗ್ರಾಮೀಣ ಪ್ರದೇಶದಲ್ಲಿರುವ ಯುವ ಜನತೆಗೆ ಆತ್ಮವಿಶ್ವಾಸದಿಂದ ಮುಂದಿನ ಹೆಜ್ಜೆ ಇಡಲು ನೆರವಾಗಲಿದೆ ಎಂದಿದ್ದಾರೆ.
ಆರು ವರ್ಷಗಳ ಅವಧಿಯಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಲಾಗಿದೆ. ಸ್ವಾಮಿತ್ವ ಯೋಜನೆಯಿಂದಾಗಿ ಗ್ರಾಮೀಣ ಮಟ್ಟದಲ್ಲಿ ಪಂಚಾಯತ್ಗಳಿಗೆ ಆಸ್ತಿಯ ನಿರ್ವಹಣೆ ಸುಲಭವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಬಳಿಕ ಹೆಚ್ಚಿನ ವಿವರಣೆ ನೀಡಿದ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ)ಯು, 1.32 ಲಕ್ಷ ಮಂದಿಯ ಮೊಬೈಲ್ ಫೋನ್ಗೆ ಎಸ್ಎಂಎಸ್ ಲಿಂಕ್ ಕಳುಹಿಸಲಾಗುತ್ತದೆ. ಅದನ್ನು ತೆರೆಯುವ ಮೂಲಕ ಆಧಾರ್ ಮಾದರಿಯ ಆಸ್ತಿಯ ಮಾಲಕತ್ವ ದಾಖಲೆಗಳನ್ನು ಪಡೆದುಕೊಳ್ಳಬಹುದು. ಅನಂತರದ ದಿನಗಳಲ್ಲಿ ರಾಜ್ಯ ಸರಕಾರಗಳೇ ಜಮೀನಿನ ಮಾಲಕತ್ವದ ದಾಖಲೆಗಳನ್ನು ನೀಡಲಿವೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ