ಹಳ್ಳಿ ಜನರಿಗೆ ಸ್ವಾಮಿತ್ವ ಬಲ ! ಡಿಜಿಟಲ್‌ ಆಸ್ತಿ ಮಾಲಕತ್ವ ದಾಖಲೆ ಹಸ್ತಾಂತರಕ್ಕೆ ಚಾಲನೆ


Team Udayavani, Oct 12, 2020, 6:45 AM IST

ಹಳ್ಳಿ ಜನರಿಗೆ ಸ್ವಾಮಿತ್ವ ಬಲ ! ಡಿಜಿಟಲ್‌ ಆಸ್ತಿ ಮಾಲಕತ್ವ ದಾಖಲೆ ಹಸ್ತಾಂತರಕ್ಕೆ ಚಾಲನೆ

ಹೊಸದಿಲ್ಲಿ: ಇನ್ನು ಗ್ರಾಮೀಣ ಜನರ ಆಸ್ತಿ ಲಪಟಾಯಿಸಲು ಯಾರಿಗೂ ಸಾಧ್ಯವಿಲ್ಲ. ಸ್ವಾಮಿತ್ವ ಯೋಜನೆಯಿಂದ ಗ್ರಾಮ ಭಾರತದ ವರ್ಚಸ್ಸು ಬದಲಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕರ್ನಾಟಕದ ಎರಡು ಸೇರಿದಂತೆ ದೇಶದ 763 ಗ್ರಾಮಗಳ 1.32 ಲಕ್ಷ ಮಂದಿಗೆ ಡಿಜಿಟಲ್‌ ಆಸ್ತಿ ಮಾಲಕತ್ವ ದಾಖಲೆಯನ್ನು ನೀಡುವ ವೀಡಿಯೋ ಕಾನ್ಫರೆನ್ಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತ ನಾಡಿದರು. ಇದೊಂದು ಐತಿಹಾಸಿಕ ಕ್ರಮ ಎಂದು ಬಣ್ಣಿಸಿದರು.

“ಸರ್ವೇ ಆಫ್ ವಿಲೇಜಸ್‌ ಆ್ಯಂಡ್‌ ಮ್ಯಾಪಿಂಗ್‌ ವಿದ್‌ ಇಂಪ್ರೊ ವೈಸ್ಡ್ ಟೆಕ್ನಾಲಜಿ ಇನ್‌ ವಿಲೇಜ್‌ ಏರಿಯಾಸ್‌’ (ಸ್ವಾಮಿತ್ವ -SVAMI TVA) ಯೋಜನೆಯಡಿ ಮೊದಲ ಬಾರಿಗೆ ಗ್ರಾಮೀಣ ಪ್ರದೇಶದ ಜಮೀನಿನ ಅಳತೆಯನ್ನು ಡ್ರೋನ್‌ ಮೂಲಕ ನಡೆಸಲಾಗಿದೆ. ಮಾಲಕರಿಗೆ ಆಧಾರ್‌ ಮಾದರಿಯ ಕಾರ್ಡ್‌ ಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ :ಫ್ರೆಂಚ್ ಓಪನ್ : 20ನೇ ಗ್ರಾಂಡ್ ಸ್ಲಾಮ್ ಗೆದ್ದ ನಡಾಲ್! ವೃತ್ತಿ ಜೀವನದ 100ನೇ ಗೆಲುವು

ದೇಶದ ಅಭಿವೃದ್ಧಿಯಲ್ಲಿ ಆಸ್ತಿ ಮಾಲಕತ್ವ ಬಹಳ ಪ್ರಭಾವ ಬೀರು ತ್ತದೆ ಎಂದು ಜಗತ್ತಿನ ಹಲವು ತಜ್ಞರು ಪ್ರತಿಪಾದಿಸುತ್ತಿದ್ದಾರೆ.
ಜಗತ್ತಿನ ಒಟ್ಟು ಜನಸಂಖ್ಯೆ ಪೈಕಿ ಮೂರನೇ ಒಂದಂಶದಷ್ಟು ಜನರು ಮಾತ್ರ ಸೂಕ್ತ ರೀತಿಯಲ್ಲಿ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಮುಂದಿನ 3ರಿಂದ 4 ವರ್ಷಗಳ ಅವಧಿಯಲ್ಲಿ ದೇಶದ ಪ್ರತಿಯೊಂದು ಗ್ರಾಮದ ನಿವಾಸಿಗೂ ಇದೇ ಮಾದರಿಯ ಆಸ್ತಿ ಮಾಲಕತ್ವದ ಕಾರ್ಡ್‌ ಗಳನ್ನು ವಿತರಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ಆಸ್ತಿ ಹಕ್ಕಿನಿಂದಾಗಿ ಗ್ರಾಮೀಣ ಪ್ರದೇಶದಲ್ಲಿರುವ ಯುವ ಜನತೆಗೆ ಆತ್ಮವಿಶ್ವಾಸದಿಂದ ಮುಂದಿನ ಹೆಜ್ಜೆ ಇಡಲು ನೆರವಾಗಲಿದೆ ಎಂದಿದ್ದಾರೆ.

ಆರು ವರ್ಷಗಳ ಅವಧಿಯಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಲಾಗಿದೆ. ಸ್ವಾಮಿತ್ವ ಯೋಜನೆಯಿಂದಾಗಿ ಗ್ರಾಮೀಣ ಮಟ್ಟದಲ್ಲಿ ಪಂಚಾಯತ್‌ಗಳಿಗೆ ಆಸ್ತಿಯ ನಿರ್ವಹಣೆ ಸುಲಭವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಬಳಿಕ ಹೆಚ್ಚಿನ ವಿವರಣೆ ನೀಡಿದ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ)ಯು, 1.32 ಲಕ್ಷ ಮಂದಿಯ ಮೊಬೈಲ್‌ ಫೋನ್‌ಗೆ ಎಸ್‌ಎಂಎಸ್‌ ಲಿಂಕ್‌ ಕಳುಹಿಸಲಾಗುತ್ತದೆ. ಅದನ್ನು ತೆರೆಯುವ ಮೂಲಕ ಆಧಾರ್‌ ಮಾದರಿಯ ಆಸ್ತಿಯ ಮಾಲಕತ್ವ ದಾಖಲೆಗಳನ್ನು ಪಡೆದುಕೊಳ್ಳಬಹುದು. ಅನಂತರದ ದಿನಗಳಲ್ಲಿ ರಾಜ್ಯ ಸರಕಾರಗಳೇ ಜಮೀನಿನ ಮಾಲಕತ್ವದ ದಾಖಲೆಗಳನ್ನು ನೀಡಲಿವೆ ಎಂದಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.