ಗ್ರಾಮ ಪಂಚಾಯಿತಿ ಆಸ್ತಿಗಳ “ಡಿಜಿಟಲೀಕರಣ’ಕ್ಕೆ ಅಸ್ತು


Team Udayavani, May 2, 2019, 3:09 AM IST

grama

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಡಿಸಿದ್ದ 2019-20ನೇ ಸಾಲಿನ ಬಜೆಟ್‌ ಘೋಷಣೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವ ಗ್ರಾಮೀಣಾಭಿವೃದ್ಧಿ ಇಲಾಖೆ, ರಾಜ್ಯದ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ “ಡಿಜಿಟಲೀಕರಣ’ಕ್ಕೆ ಅಸ್ತು ಎಂದಿದೆ.

ಗ್ರಾಪಂಗಳು ಆರ್ಥಿಕವಾಗಿ ಸದೃಢಗೊಳ್ಳಲು ತಮ್ಮ ಸ್ವಂತ ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳುವುದು ಅವಶ್ಯಕ. ಆದ್ದರಿಂದ ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳನ್ನೂ ಡಿಜಟಲೀಕರಣಗೊಳಿಸಿ ತೆರಿಗೆ ವ್ಯಾಪ್ತಿಯ ಹೊರಗೆ ಉಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ 2019ರ ಫೆ.8ರಂದು ಮಂಡಿಸಲಾದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು.

ಇದೀಗ ಅದನ್ನು ಕಾರ್ಯಗತಗೊಳಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ಧರಿಸಿದೆ. ಇಲಾಖೆಯ ಮಾಹಿತಿಯಂತೆ ಪಂಚತಂತ್ರದಲ್ಲಿ ಅಳವಡಿಸಿರುವ ಪ್ರಕಾರ ರಾಜ್ಯದ ಸುಮಾರು 6,022 ಗ್ರಾಪಂಗಳ ವ್ಯಾಪ್ತಿಯಲ್ಲಿ ಅಂದಾಜು 1.02 ಕೋಟಿ ಆಸ್ತಿಗಳಿವೆ. ಅವುಗಳನ್ನು ಇ-ಆಡಳಿತ ನೆರವಿನೊಂದಿಗೆ ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದೆ.

ಅದರಂತೆ ಗ್ರಾಪಂಗಳಲ್ಲಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಮತ್ತು ಆಸ್ತಿಗಳ ದಾಖಲೀಕರಣವನ್ನು ಕರಾರುವಕ್ಕಾಗಿ ಗುರುತಿಸುವ ಸಲುವಾಗಿ ಡಿಜಿಟಲೀಕರಣ ಮಾಡುವ ಬಗ್ಗೆ ಇತ್ತೀಚೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಆಸ್ತಿಗಳ ಡಿಜಟಲೀಕರಣ ಯೋಜನೆಯನ್ನು ಅನಷ್ಠಾನಕ್ಕೆ ತರಲು ಎಲ್ಲ ಗ್ರಾಪಂಗಳ “ರೆವಿನ್ಯೂ ಮ್ಯಾಪ್‌’ (ಕಂದಾಯ ನಕಾಶೆ)ಗಳನ್ನು ರಾಜ್ಯ ದೂರ ಸಂವೇದಿ ಆನ್ವಯಿಕ ಕೇಂದ್ರದಿಂದ (ಕೆಎಸ್‌ಆರ್‌ಎಸ್‌ಎಸಿ) ಪಡೆದುಕೊಳ್ಳಬೇಕು. ಬಳಿಕ ಆ ಆಸ್ತಿಗಳ ಬಹುಕೋನಾಕೃತಿಗಳನ್ನು ರಚಿಸಿ ಗಾಪಂಗಳಿಗೆ ಕೊಡಬೇಕು.

ತೆರಿಗೆ ವ್ಯಾಪ್ತಿಯ ಹೊರಗೆ ಉಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು, ಪಂಚತಂತ್ರದ ಎಲ್ಲ ಆಸ್ತಿಗಳನ್ನು ಇ-ಸ್ವತ್ತು ತಂತ್ರಾಂಶಕ್ಕೆ ತರಲು ಬೇಕಾದ ದಾಖಲೆಗಳನ್ನು ಸಾರ್ವಜನಿಕರಿಂದ ಸಂಗ್ರಹಿಸಬೇಕು. ಆಸ್ತಿಗಳ ಡಿಜಟಲೀಕರಣಕ್ಕೆ ಸ್ವಯಂಸೇವಾ ಸಂಸ್ಥೆಗಳಿಂದ ಸೇವೆ ಪಡೆದುಕೊಳ್ಳಬೇಕು. ಆಸ್ತಿಗಳ ಸಂಪೂರ್ಣ ಮಾಹಿತಿಯನ್ನು ಕರಾರುವಕ್ಕಾಗಿ ದಾಖಲಿಸಲು ಕಿಯೋನಿಕ್ಸ್‌ ಅಥವಾ ಬೇರೆ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಎರಡು ತಿಂಗಳಲ್ಲಿ ಚಾಲನೆ: ಗ್ರಾಪಂಗಳ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲು ಇಲಾಖಾ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದಕ್ಕೆ ಬೇಕಾದ ಪ್ರಾಥಮಿಕ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ. ಡಿಜಿಟಲೀಕರಣಕ್ಕೆ ಬೇಕಾದ “ಟ್ಯಾಬ್‌’ಗಳನ್ನು ಖರೀದಿಸಲು ಟೆಂಡರ್‌ ಕರೆಯಲಾಗುತ್ತದೆ.

ಅದಕ್ಕಾಗಿ ತಾಂತ್ರಿಕ ಅನುಮೋದನಾ ಸಮಿತಿ ರಚಿಸಲಾಗಿದ್ದು, ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿಕೊಂಡ ಬಳಿಕ ಇನ್ನೆರಡು ತಿಂಗಳಲ್ಲಿ ಅಧಿಕೃತವಾಗಿ ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗುವುದು. ಇದರಿಂದ ಎಲ್ಲ ಆಸ್ತಿಗಳ ಪಕ್ಕಾ ಲೆಕ್ಕ ಸಿಗಲಿದ್ದು, ಅದರಿಂದಾಗಿ ಆಸ್ತಿಗಳಿಗೆ ತೆರಿಗೆ ವಿಧಿಸಲು ಅನುಕೂಲವಾಗಲಿದೆ. ಹೆಚ್ಚೆಚ್ಚು ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬಂದರೆ, ಆದಾಯ ಹೆಚ್ಚಾಗಿ, ಆ ಮೂಲಕ ಗ್ರಾಪಂಗಳು ಆರ್ಥಿಕವಾಗಿ ಸದೃಢವಾಗಲಿವೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಅನುಷ್ಠಾನ: “ಆಸ್ತಿಗಳ ಡಿಜಿಟಲೀಕರಣ’ ಯೋಜನೆಯನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಎಲ್ಲ ಗ್ರಾಪಂಗಳಲ್ಲಿ ಅನುಷ್ಠಾನಕ್ಕೆ ತರಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಈಗಾಗಲೇ ಬೆಂಗಳೂರು ನಗರ ಜಿಲ್ಲೆಯ ಚಿಕ್ಕಬಾಣಾವರ ಗ್ರಾಪಂನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಇದೀಗ ಅದನ್ನು ನಗರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಸಾಧಕ-ಬಾಧಕಗಳನ್ನು ಅವಲೋಕಿಸಿ, ರಾಜ್ಯಾದ್ಯಂತ ಅನುಷ್ಠಾನಕ್ಕೆ ತರುವ ಸಂದರ್ಭದಲ್ಲಿ ಸುಧಾರಣೆ ಮತ್ತು ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತದೆ. ಬೆಂಗಳೂರು ನಗರ ಜಿಲ್ಲೆಯ ಪ್ರತಿ ಗ್ರಾಪಂಗಳಿಗೆ ತಲಾ 8ರಂತೆ 250 ಟ್ಯಾಬ್‌ಗಳನ್ನು ಖರೀದಿಸಲು ನಗರ ಜಿಲ್ಲಾ ಪಂಚಾಯಿತಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ಸದ್ಯ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಗ್ರಾಪಂಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಇದರ ಸಾಧಕ-ಬಾಧಕಗಳನ್ನು ಅವಲೋಕಿಸಿ ರಾಜ್ಯಾದ್ಯಂತ ಜಾರಿಗೆ ತರಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಒಂದೆರಡು ತಿಂಗಳಲ್ಲಿ ಡಿಜಿಟಲೀಕರಣ ಅಧಿಕೃತವಾಗಿ ಪ್ರಾರಂಭವಾಗಲಿದೆ.
-ಯಾಲಕ್ಕಿಗೌಡ, ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ.

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.