ಬಿಜೆಪಿ ಷಡ್ಯಂತ್ರಕ್ಕೆ ವಲಸಿಗರು ಬಲಿ : ದಿನೇಶ್ ಗುಂಡೂರಾವ್
Team Udayavani, Jan 27, 2020, 9:37 PM IST
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ವಲಸೆ ಹೋಗಿರುವ 17 ಜನರನ್ನು ಒಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಬಿಜೆಪಿಯ ಷಡ್ಯಂತ್ರಕ್ಕೆ ವಲಸಿಗರು ಬಲಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ವಲಸಿಗರು ಒಗ್ಗಟ್ಟಾಗಿದ್ದರು. ಈಗ ಬಹಿರಂಗವಾಗಿ ಒಬ್ಬರ ವಿರುದ್ಧ ಮತ್ತೂಬ್ಬರು ಹೇಳಿಕೆ ಕೊಡುತ್ತಿದ್ದಾರೆ. 2008 ರಲ್ಲಿ ಬಿಜೆಪಿಗೆ ಹೋದವರ ಪರಿಸ್ಥಿತಿ ಏನಾಗಿತ್ತೂ ಇವರಿಗೂ ಅದೇ ಪರಿಸ್ಥಿತಿ ಬರುತ್ತದೆ. ಬಿಜೆಪಿಯವರು 17 ಜನರನ್ನು ಮೂರು ಗುಂಪುಗಳಾಗಿ ಒಡೆದಿದ್ದು, ಅವರ ಐಕ್ಯತೆಯನ್ನು ಮುರಿದಿದ್ದಾರೆ. ಅವರು ಮಂತ್ರಿಗಳಾದರೂ ಡಮ್ಮಿಗಳಾಗುತ್ತಾರೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿದ್ದಾಗ ವಲಸೆ ಹೋಗಿರುವ ಶಾಸಕರಿಗೆ ಒಳ್ಳೆಯ ಸ್ಥಾನ ಮಾನ ನೀಡಲಾಗಿತ್ತು. ಈಗ ಕಾಂಗ್ರೆಸ್ಗೆ ವಾಪಸ್ ಬಂದರೂ ಅವರನ್ನು ಸೇರಿಸಿಕೊಳ್ಳುವುದಿಲ್ಲ. ಎಂಟಿಬಿ ನಾಗರಾಜ್ ಹಣ ಇದೆ ಎಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಚಿವ ಸ್ಥಾನ ಬಿಟ್ಟು ಆಪರೇಷನ್ ಕಮಲಕ್ಕೆ ಬಲಿಯಾಗಿದ್ದರು. ಈಗ ಸಚಿವರನ್ನಾಗಿ ಮಾಡುವಂತೆ ದುಂಬಾಲು ಬಿದ್ದಿದ್ದಾರೆ.
ರಾಜಕೀಯದಲ್ಲಿ ಸಿದ್ದಾಂತ ಮುಖ್ಯ. ಸಚಿವ ಸ್ಥಾನ ಶಾಸ್ವತವಲ್ಲ. ರಾಜಕೀಯ ಶಾಸ್ವತ. ವಲಸಿಗರಿಗೆ ಈಗ ತಾವು ತಪ್ಪು ಮಾಡಿದ್ಧೇವೆ ಎಂದು ಅನಿಸುತ್ತಿದೆ. ಬಿಜೆಪಿಯವರು ಇವರ ಬೀದಿ ನಾಟಕ ನೋಡಿ ಮನರಂಜನೆ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ