ಬಾಯಲ್ಲಿ ನೀರೂರಿಸುವ ಈಶಾನ್ಯ ಭಾರತದ ಖಾದ್ಯಗಳು


Team Udayavani, Nov 24, 2020, 10:25 AM IST

sw-38

ನಾವು ಸೇವಿಸುವ ಆಹಾರ ಪದಾರ್ಥಗಳಿಗೆ ಹೋಲಿಸಿದರೆ ಈಶಾನ್ಯ ಭಾರತದ ಮಂದಿ ಸೇವಿಸುವ ಆಹಾರಗಳು ಕೊಂಚ ಭಿನ್ನವಾಗಿ ನಿಲ್ಲುತ್ತವೆ. ಕೇವಲ ಮಾಂಸಾಹಾರದಲ್ಲಿ ಮಾತ್ರವಲ್ಲದೆ ಸಸ್ಯಾಹಾರದಲ್ಲೂ ಬಗೆ ಬಗೆಯ ಅಡುಗೆಗಳನ್ನು ನಾವು ಈಶಾನ್ಯ ಭಾರತದ ಭಾಗಗಳಲ್ಲಿ ಕಾಣಬಹುದು. ಅಂತಹ ಕೆಲವು ಖಾದ್ಯಗಳ ತಯಾರಿಕೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

ಕ್ಯಾಬೇಜ್‌ ಸಲಾಡ್‌
ಬೇಕಾಗುವ ಸಾಮಗ್ರಿಗಳು
ಕ್ಯಾಬೇಜ್‌
ಈರುಳ್ಳಿ
ಟೊಮೇಟೊ
ಹಸಿ ಮೆಣಸು
ಎಣ್ಣೆ
ಉಪ್ಪು

ಮಾಡುವ ವಿಧಾನ
ಪಾತ್ರೆಯೊಂದಕ್ಕೆ ಹೆಚ್ಚಿದ ಕ್ಯಾಬೇಜ್‌, ಈರುಳ್ಳಿ, ಟೊಮೇಟೊ, ಹಸಿ ಮೆಣಸು, ಎಣ್ಣೆ, ಉಪ್ಪು ಸೇರಿ‌ಸಿ ಚೆನ್ನಾಗಿ ಕಲಸಿ. ಬೇಕಿದ್ದರೆ ಕಾಳುಮೆಣಸಿನ ಪುಡಿಯನ್ನೂ ಸೇರಿಸಬಹುದು. ಊಟದೊಂದಿಗೆ ಸೈಡ್‌ ಐಟಮ್‌ ಆಗಿ ಇದನ್ನು ಸವಿಯುವ ಪದ್ಧತಿ ಈಶಾನ್ಯ ಭಾರತದ ರಾಜ್ಯಗಳಲ್ಲಿವೆ.


ಕಣಿಲೆ ಚಟ್ನಿ

ಬೇಕಾಗುವ ಸಾಮಗ್ರಿಗಳು

ಚಿಕ್ಕದಾಗಿ ಹೆಚ್ಚಿದ ಕಣಿಲೆ (ಎಳೆ ಬಿದಿರು)
ಹಸಿಮೆಣಸು
ಉಪ್ಪು
ಮೆಣಸಿನ ಹುಡಿ
ಬೆಳ್ಳುಳ್ಳಿ
ಎಣ್ಣೆ

ಮಾಡುವ ವಿಧಾನ
ಪಾತ್ರೆಯೊಂದಕ್ಕೆ ಹೆಚ್ಚಿದ ಕಣಿಲೆ, ಹಸಿ ಮೆಣಸು, ಉಪ್ಪು, ಮೆಣಸಿನ ಹುಡಿ, ಬೆಳ್ಳುಳ್ಳಿ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿಕೊಳ್ಳಿ. ಬಳಿಕ ಈ ಮಿಶ್ರಣಕ್ಕೆ ಬೇಕಾಗುವಷ್ಟು ಎಣ್ಣೆ ಸೇರಿಸಿ ಮತ್ತೂಮ್ಮೆ ಚೆನ್ನಾಗಿ ಕಲಕಿ ಒಂದು ಡಬ್ಬದಲ್ಲಿ ಈ ಮಿಶ್ರಣವನ್ನು ತುಂಬಿ 2-3 ವಾರಗಳ ಕಾಲ ಬಿಸಿಲಿನಲ್ಲಿ ಇಡಿ. ಬಳಿಕ ಪಾತ್ರೆಯೊಂದಕ್ಕೆ ಎಣ್ಣೆ ಹಾಕಿ ಬಿಸಿ ಮಾಡಿ ಈ ಮಿಶ್ರಣವನ್ನು ಅದಕ್ಕೆ ಸೇರಿಸಿ ಚೆನ್ನಾಗಿ ಹುರಿದರೆ ಕಣಿಲೆ ಚಟ್ನಿ ಸವಿಯಲು ಸಿದ್ಧ.

ವೆಜ್‌ ಮೊಮೋಸ್‌
ಬೇಕಾಗುವ ಸಾಮಗ್ರಿಗಳು
1 1/2 ಕಪ್‌ನಷ್ಟು ಹೆಚ್ಚಿದ ಕ್ಯಾಬೇಜ್‌
ಮಧ್ಯಮ ಗಾತ್ರದ ಎರಡು ಈರುಳ್ಳಿ
ಶುಂಠಿ ಪೇಸ್ಟ್‌ ಸ್ವಲ್ಪ
ಬೆಣ್ಣೆ
ಉಪ್ಪು
ಕಾಳುಮೆಣಸಿನ ಹುಡಿ
ಮೈದಾ ಹಿಟ್ಟು

ಮಾಡುವ ವಿಧಾನ:
ಬಾಣಲೆಗೆ ಬೆಣ್ಣೆಯನ್ನು ಹಾಕಿ ಚಿಕ್ಕ ಉರಿಯಲ್ಲಿ ಕಾಯಿಸಿ. ಬೆಣ್ಣೆ ಕರಗುತ್ತಿದ್ದಂತೆ ಅದಕ್ಕೆ ಶುಂಠಿ ಪೇಸ್ಟ್‌, ಹೆಚ್ಚಿದ ಈರುಳ್ಳಿ ಮತ್ತು ಕ್ಯಾಬೇಜ್‌ ಅನ್ನು ಸೇರಿಸಿ. ಬಳಿಕ ರುಚಿಗೆ ತಕ್ಕಷ್ಟು ಉಪ್ಪು ಮತ್ತು ಮೆಣಸಿನಕಾಳಿನ ಹುಡಿ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿ. ಬಳಿಕ 4-5 ನಿಮಿಷ ಚೆನ್ನಾಗಿ ಬೇಯಿಸಿ. ಬಳಿಕ ಮೈದಾಹಿಟ್ಟಿಗೆ ನೀರು, ಎಣ್ಣೆ ಸೇರಿಸಿ ಚಪಾತಿ ಹಿಟ್ಟಿನ ಹದದಲ್ಲಿ ಚೆನ್ನಾಗಿ ಕಲಸಿ 15 ನಿಮಿಷ ಬಿಡಿ. ಹಿಟ್ಟನ್ನು ಚಿಕ್ಕ ಉಂಡೆಗಳಾಗಿ ಮಾಡಿಕೊಂಡು ಚಿಕ್ಕ ಚಿಕ್ಕ ಚಪಾತಿ ಆಕಾರದಲ್ಲಿ ಅವುಗಳನ್ನು ಒರೆದು ಅದರಲ್ಲಿ ಬೇಯಿಸಿದ ಹೂರಣವನ್ನು ತುಂಬಿ. ಬಳಿಕ ಇವುಗಳನ್ನು ಹಬೆಯಲ್ಲಿ 15-20 ನಿಮಿಷಗಳ ಕಾಲ ಬೇಯಿಸಿ. ಬಳಿಕ ಇದನ್ನು ಚಟ್ನಿಯೊಂದಿಗೆ ಸವಿಯಿರಿ.


ಮಿಜೋ ವೆಜಿಟೆಬಲ್‌ ಸ್ಟೀವ್‌

ಬೇಕಾಗುವ ಸಾಮಗ್ರಿಗಳು
ಬಟಾಟೆ
ಬೆಂಡೆಕಾಯಿ
ತುಂಡರಿಸಿದ ಬೀನ್ಸ್‌
ಹಸಿ ಮೆಣಸು
ಹೆಚ್ಚಿದ ಕ್ಯಾಬೇಜ್‌
ಬೆಳ್ಳುಳ್ಳಿ
ಶುಂಠಿ
ಉಪ್ಪು
ಎಣ್ಣೆ
ಬೆಣ್ಣೆ
ಅನ್ನ

ಮಾಡುವ ವಿಧಾನ
ಸುಮಾರು 5 ಲೋಟ ನೀರನ್ನು ಪಾತ್ರೆಗೆ ಹಾಕಿ ಚೆನ್ನಾಗಿ ಕುದಿಸಿ. ಬಳಿಕ ಇದಕ್ಕೆ ಕ್ಯಾಬೇಜ್‌, ಬೀನ್ಸ್‌, ಬಟಾಟೆ ಸೇರಿಸಿ 10 ನಿಮಿಷ ಕುದಿಸಿ. ಹಸಿ ಮೆಣಸು, ಶುಂಠಿ, ಬೆಳ್ಳುಳ್ಳಿ, ಬೆಣ್ಣೆ, ಎಣ್ಣೆ ಸೇರಿಸಿ ಚೆನ್ನಾಗಿ ಕಲಸಿ. ಬಟಾಟೆ ಬೆಂದಿದೆಯೇ ಎಂಬುದನ್ನು ಖಾತ್ರಿಪಡಿಸಿದ ಬಳಿಕ ಅನ್ನ, ಬೆಂಡೆಕಾಯಿ ಸೇರಿಸಿ ಸ್ಪಲ್ಪ ಸಮಯ ಕುದಿಸಿದರೆ ಮಿಜೋ ವೆಜಿಟೆಬಲ್‌ ಸ್ಟೀವ್‌ ಸವಿಯಲು ಸಿದ್ಧ.


ಉಸೋಯಿ ಊಟಿ

ಬೇಕಾಗುವ ಸಾಮಗ್ರಿಗಳು
ತೆಳ್ಳಗೆ ಹೆಚ್ಚಿದ ಕಣಿಲೆ ತುಂಡುಗಳು
ಹಸಿರು ಬಟಾಣಿ
ಶುಂಠಿ
ಅಕ್ಕಿ
ಎಣ್ಣೆ
ಉಪ್ಪು
ಒಣ ಮೆಣಸು
ಈರುಳ್ಳಿ
ಇಂಗು
ಕೊತ್ತುಂಬರಿ ಸೊಪ್ಪು

ಮಾಡುವ ವಿಧಾನ
ಪಾತ್ರೆಯೊಂದಕ್ಕೆ ಹಸಿರು ಬಟಾಣಿ, ಶುಂಠಿ, ಹೆಚ್ಚಿದ ಕಣಿಲೆ ಅಕ್ಕಿ ಮತ್ತು ನೀರನ್ನು ಹಾಕಿ 20-30 ನಿಮಿಷ ಕುದಿಸಿ. ಬಳಿಕ ಇದಕ್ಕೆ ಎಣ್ಣೆ, ಉಪ್ಪು ಸೇರಿಸಿ ಮತ್ತೆ 10 ನಿಮಿಷ ಸಣ್ಣ ಉರಿಯಲ್ಲಿ ಕುದಿಸಿ. ಮತ್ತೂಂದು ಪಾತ್ರೆ ತೆಗೆದುಕೊಂಡು ಅದಕ್ಕೆ ಎಣ್ಣೆ, ಒಣ ಮೆಣಸು, ಇಂಗು, ಹೆಚ್ಚಿದ ಈರುಳ್ಳಿ ಸೇರಿಸಿ ಒಂದು ನಿಮಿಷ ಹುರಿಯಿರಿ.  ಬಳಿಕ ಈ ಒಗ್ಗರಣೆಯನ್ನು ಬೇಯಿಸಿದ ಪದಾರ್ಥಕ್ಕೆ ಸೇರಿಸಿ. ಬಳಿಕ ಅದಕ್ಕೆ ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿದರೆ ಉಸೋಯಿ ಊಟಿ ರೆಡಿ.

ಟಾಪ್ ನ್ಯೂಸ್

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.