ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಪಾಠ ಮಾಡಿದ ಜಿಲ್ಲಾ ಪಂಚಾಯತ್ ಸಿಇಒ
Team Udayavani, Sep 14, 2019, 6:04 PM IST
ಚಿಕ್ಕಬಳ್ಳಾಪುರ: ಜಿಪಂ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ಪೀಕರಿಸಿದ ಬಳಿಕ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ದಿಡೀರ್ ಬೇಟಿ ನೀಡಿ ಮಕ್ಕಳ ಕಲಿಕಾ ಗುಣಮಟ್ಟ, ಶಾಲೆ ಮೂಲಭೂತ ಸೌಕರ್ಯ ಪರಿಶೀಲಿಸಿ ಗಮನ ಸೆಳೆಯುವ ಮೂಲಕ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಶ್ರಮಿಸುತ್ತಿರುವ ಸಿಇಒ ಬಿ. ಫೌಜಿಯಾ ತರುನ್ನುಮ್ ಇದೀಗ ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದಾರೆ.
ಶನಿವಾರ ಮದ್ಯಾಹ್ನ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರಿಗೆ ಸುಮಾರು ಎರಡು ಗಂಟೆಗಳ ಕಾಲ ಶೈಕ್ಷಣಿಕ ಗುಣಮಟ್ಟ ಕಾಪಾಡುವ ಬಗ್ಗೆ ಪಾಠ ಮಾಡಿ ಗಮನ ಸೆಳೆದರು.
ಜಿಲ್ಲೆಯ ಶಾಲೆಗಳು ಮದ್ಯವಾರ್ಷಿಕ ಪರೀಕ್ಷೆಗಳಿಗೆ ಸಿದ್ದವಾಗುತ್ತಿರುವ ಸಂಧರ್ಭದಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಸಾಕಷ್ಟು ಕಾಳಜಿ ವಹಿಸಿರುವ ಸಿಇಒ, ಮಕ್ಕಳಿಗೆ ಪಾಠ ಹೇಗೆ ಮಾಡಬೇಕು. ಮಕ್ಕಳ ಕಲಿಕಾ ಸಾಮರ್ಥ್ಯ ಹೇಗೆ ಗುರುತಿಸಬೇಕು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಹೇಗೆ ಕಲಿಕೆಯಲ್ಲಿ ಮುಖ್ಯ ವಾಹಿನಿಗೆ ತರಬೇಕು ಎಂಬುದರ ಬಗ್ಗೆ ಮುಖ್ಯ ಶಿಕ್ಷಕರಿಗೆ ಪಾಠ ಮಾಡಿದರು.
ಕಳೆದ ವರ್ಷ ಅಂದ್ರೆ 2017 ರಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ರಾಜ್ಯದಲ್ಲಿ ಕಡೆ ಸ್ಥಾನದಲ್ಲಿ ಇತ್ತು. ಆದರೆ 18-19 ರಲ್ಲಿ ಜಿಪಂ ಅಧ್ಯಕ್ಷ ಹೆಚ್.ವಿ.ಮಂಜುನಾಥ ಅವರ ವಿಶೇಷ ಕಾಳಜಿಯಿಂದ 31 ನೇ ಸ್ಥಾನದಲ್ಲಿ ಇದ್ದ ಚಿಕ್ಕಬಳ್ಳಾಪುರ 20 ನೇ ಸ್ಥಾನಕ್ಕೆ ಬಂದಿತ್ತು. ಈ ವರ್ಷ ರಾಜ್ಯ ಕ್ರಮಾಂಕದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ 10ರ ಒಳಗೆ ಸ್ಥಾನ ಪಡೆಯಬೇಕೆಂದು ನಿರ್ಧಾರಿಸಿ ಜಿಲ್ಲೆಯ ಮುಖ್ಯ ಶಿಕ್ಷಕರಿಗೆ, ಸಹ ಶಿಕ್ಷಕರಿಗೆ ವಿಶೇಷ ಸಭೆ, ಕಾರ್ಯಾಗಾರ, ಚಿಂಥನ ಮಂಥನ ಸಭೆಗಳನ್ನು ಹಮ್ಮಿಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ