ಕಲಾವಿದನ ಕೈಚಳಕ: ಭತ್ತದಲ್ಲಿ ಅರಳಿದ ದೀಪಾವಳಿ ಹಬ್ಬದ ಅಲಂಕಾರಿಕ ವಸ್ತುಗಳು


Team Udayavani, Oct 23, 2022, 6:48 PM IST

ಕಲಾವಿದನ ಕೈಚಳಕ: ಭತ್ತದಲ್ಲಿ ಅರಳಿದ ದೀಪಾವಳಿ ಹಬ್ಬದ ಅಲಂಕಾರಿಕ ವಸ್ತುಗಳು

ಗಂಗಾವತಿ: ಬೆಳಕಿನ ಹಬ್ಬ ದೀಪಾವಳಿ ವಿವಿಧ ಅಲಂಕಾರಿಕ ವಸ್ತುಗಳನ್ನು ಮನೆ ಮತ್ತು ವ್ಯಾಪಾರದ ಸ್ಥಳವನ್ನು ಅಲಂಕರಿಸಲು ಬಳಕೆ ಮಾಡುವ ಹಬ್ಬವಾಗಿದೆ. ಈ ಹಬ್ಬವನ್ನು ಮಹಿಳೆಯರು ಮತ್ತು ವ್ಯಾಪಾರಸ್ಥರು ಅತ್ಯಂತ ಸಡಗರದಿಂದ ಆಚರಣೆ ಮಾಡುತ್ತಾರೆ. ಮನೆ ಮತ್ತು ವ್ಯಾಪರಸ್ಥರನ್ನು ಅಲಂಕಾರ ಮಾಡಲು ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ವಸ್ತುಗಳನ್ನು ಖರೀದಿ ಮಾಡಲಾಗುತ್ತದೆ. ಆದರೆ ಗಂಗಾವತಿಯ ವಡ್ಡರಹಟ್ಟಿ ಕ್ಯಾಂಪ್ ನ ಕಲಾವಿದ ಭೀಮರಾಯ ಹದ್ದಿನಾಳ ಭತ್ತದ ಬೆಳೆಯಲ್ಲಿ ವಿವಿಧ ಅಲಂಕಾರಿಕ ವಸ್ತುಗಳನ್ನು ತಯಾರು ಮಾಡುವ ಮೂಲಕ ಪ್ರಾಕೃತಿಕವಾಗಿ ಸಿಗುವ ವಸ್ತುಗಳಿಂದಲೇ ಅಲಂಕಾರ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ .

ಪ್ಲ್ಯಾಸ್ಟಿಕ್ ಅಲಂಕಾರಿಕ ವಸ್ತುಗಳಿಂದಾಗಿ ಹಬ್ಬದ ಸಂಭ್ರಮಗಳು ಕಳೆಗುಂದುತ್ತಿವೆ. ಈ ನಿಟ್ಟಿನಲ್ಲಿ ನೈಸರ್ಗಿಕ ಉತ್ಪನ್ನಗಳಿಂದ ತಳಿರು, ತೋರಣಗಳನ್ನು ತಯಾರಿಸಿ ಉಚಿತ ದರದಲ್ಲಿ ಮಾರಾಟ ಮಾಡುವ ಮೂಲಕ ಜನರಲ್ಲಿ ನಿಸರ್ಗ ಸ್ನೇಹಿ ಮನೋಭಾವ ಮೂಡಿಸುವ ಪ್ರಯತ್ನವನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ಗ್ರಾಮದ ಕಲಾವಿದರೊಬ್ಬರು ಮಾಡುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ಗ್ರಾಮದ ಈ ಕಲಾವಿದರ ಹೆಸರು ಭೀಮರಾಯ ದೇವಿಕೇರಿ. ಚಿತ್ರ ಕಲೆಯಲ್ಲಿ ಮಾಸ್ಟರ್ ಆಫ್ ಫೈನ್ ಆರ್ಟ್ಸ್ ಪದವಿ ಪೂರೈಸಿರುವ ಇವರ ಕ್ಯಾನ್ವಾಸ್ ಪೇಂಟಿಂಗ್ ಗಳಿಗೆ ಬೆಂಗಳೂರು, ಮುಂಬಯಿ, ಗೋವಾ, ಕೋಲ್ಕತ್ತಾ ಸೇರಿದಂತೆ ಇನ್ನಿತರೆಡೆ ಭಾರೀ ಬೇಡಿಕೆ ಇದೆ. ಚಿತ್ರಕಲೆಯಲ್ಲದೆ ಟೆರ್ರಕೋಟ, ಆ್ಯಂಬೋಜಿಂಗ್ ಇನ್ನಿತರ ಕರಕುಶಲ ಕಲೆಗಳಲ್ಲಿ ಪರಿಣಿತಿ ಹೊಂದಿದ್ದಾರೆ. ಇವರ  ಫೈನ್ ಆರ್ಟ್ ಗಾಗಿ ಕೇಂದ್ರೀಯ ಸಚಿವಾಲಯದಿಂದ “ಫೆಲೋಶಿಪ್” ದೊರೆತಿದೆ.

ಸದ್ಯಕ್ಕೆ ಸ್ವಗ್ರಾಮ ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪಿನಲ್ಲಿ ನೆಲೆಗೊಂಡಿರುವ ಇವರು, ಸಮೀಪದ ಗಂಗಾವತಿಯಲ್ಲಿ ” ಚಿತ್ರಿತಾ ಲಲಿತ ಕಲಾಕೇಂದ್ರ” ಎಂಬ ಹೆಸರಿನಲ್ಲಿ ಗ್ಯಾಲರಿ ಆರಂಭಿಸಿದ್ದಾರೆ.

ತಮ್ಮ “ಶ್ರೀ ಹಂಪಿ ವಿರೂಪಾಕ್ಷೇಶ್ವರ ವಿಶ್ವ ಪಾರಂಪರಿಕ ಕಲಾ ಸಂಸ್ಥೆ” ಯ ಮೂಲಕ ಗ್ರಾಮೀಣ ಭಾಗಗಳ ಸಾಂಸ್ಕೃತಿಕ, ಪಾರಂಪರಿಕ ಕರಕುಶಲ ಕಲೆಗಳನ್ನು ಬೆಳಕಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ತರಬೇತಿ ನೀಡಿ ನೈಸರ್ಗಿಕ ಉತ್ಪನ್ನಗಳಿಂದ ತಯಾರಿಸಿದ ಅಲಂಕಾರಿಕ ವಸ್ತುಗಳಿಗೆ ಮಾರುಕಟ್ಟೆ ನೀಡುವ ಪ್ರಯತ್ನ ನಡೆಸಿದ್ದಾರೆ. ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳಿಂದ ಪರಿಸರಕ್ಕೆ ಆಗುವ ಹಾನಿಯ ಜತೆಗೆ ನೈಸರ್ಗಿಕ ಉತ್ಪನ್ನಗಳಿಂದಾಗುವ ಲಾಭಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಅಭಿಯಾನ ಆರಂಭಿಸಿದ್ದಾರೆ.

ಈ ಕಲಾವಿದರು ತಯಾರಿಸುತ್ತಿರುವ ಭತ್ತದ ತೋರಣಗಳು ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ಲಾಗಿದ್ದು, ಜನರ ಬೇಡಿಕೆ ಹೆಚ್ಚಿತ್ತಿದೆ. ಸದ್ಯಕ್ಕೆ ಬೇಡಿಕೆಗೆ ತಕ್ಕಂತೆ ಜನರಿಗೆ ಪೂರೈಸಲು ಆಗುತ್ತಿಲ್ಲ ಎಂಬುದು ಕಲಾವಿದ ಭೀಮರಾಯ ದೇವಿಕೇರಿಯವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.