ಚಾಮರಾಜನಗರ ದುರಂತದಲ್ಲಿ ಸತ್ತವರಿಗೆ ಕೋವಿಡ್ ಮರಣ ಪ್ರಮಾಣ ಪತ್ರ ಕೊಟ್ಟಿಲ್ಲ : ಡಿಕೆಶಿ
Team Udayavani, Jul 2, 2021, 8:40 PM IST
ಬೆಂಗಳೂರು: ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರಿಗೆ ಕೋವಿಡ್ ಸಾವು ಎಂದು ಮರಣ ಪ್ರಮಾಣ ಪತ್ರ ನೀಡುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 3.30 ಲಕ್ಷ ಕೋವಿಡ್ ಸಾವುಗಳ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ. ಚಾಮರಾಜನಗರದಲ್ಲಿ ಒಂದೇ ದಿನ 65 ಮಂದಿ ಆಕ್ಸಿಜನ್ ಸಿಗದೆ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ 36 ಮಂದಿ ಎಂಬ ವರದಿ ಕೊಡಲಾಗಿದೆ. ನಾನು 36 ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ಕೊಟ್ಟಿದ್ದೆ. ಇವರಲ್ಲಿ ಯಾರಿಗೂ ಸರ್ಕಾರ ಕೋವಿಡ್ ಸಾವು ಎಂದು ಮರಣ ಪ್ರಮಾಣ ಪತ್ರ ಕೊಟ್ಟಿಲ್ಲ ಎಂದು ದೂರಿದರು.
ಆಂಧ್ರಪ್ರದೇಶ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಮೃತರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದೇವೆ. ಈ ಸೋಂಕಿನಿಂದ ಸತ್ತವರ ಮಾಹಿತಿ ಪಡೆಯಲು ಸರ್ಕಾರ ಡೆತ್ ಆಡಿಟ್ ಮಾಡಿ ಅವರಿಗೆ ಪರಿಹಾರ ನೀಡಬೇಕು ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.
ರಾಜ್ಯ ಸರ್ಕಾರ ಕೊರೊನಾ ಸಾವಿನ ಸುಳ್ಳು ಲೆಕ್ಕ ನೀಡುತ್ತಿದೆ. ಬೀದರ್ ಒಂದೇ ಜಿಲ್ಲೆಯಲ್ಲಿ ಸರ್ಕಾರ ಹೇಗೆ ಸುಳ್ಳು ಸಾವಿನ ಲೆಕ್ಕ ನೀಡುತ್ತಿದೆ ಎಂದು ನಮ್ಮ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಅಂಕಿ-ಸಂಖ್ಯೆ ಸಮೇತ ಬಹಿರಂಗಗೊಳಿಸಿದ್ದಾರೆ ಎಂದು ತಿಳಿಸಿದರು.
ಇದೇ ಕಾರಣಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಪ್ರತಿ ಮನೆಗೂ ಹೋಗಿ ಅವರ ಮಾಹಿತಿ ಪಡೆದು, ಅವರಿಗೆ ಪರಿಹಾರ ಸಿಗುವಂತೆ ಮಾಡಬೇಕೆಂದು ಸೂಚನೆ ಕೊಟ್ಟಿದ್ದೇವೆ. ನಾವು ಈ ಸಂಕಷ್ಟದ ಸಮಯದಲ್ಲಿ ಜನರ ಬೆನ್ನಿಗೆ ನಿಲ್ಲುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ : ಗೋವಾ : ಜುಲೈ 12 ರ ತನಕ ಕರ್ಫ್ಯೂ ವಿಸ್ತರಣೆ : ಮುಖ್ಯಮಂತ್ರಿ ಸಾವಂತ್
ಪ್ರತಿಕ್ರಿಯಿಸುವುದಿಲ್ಲ
ವಿಜಯೇಂದ್ರ ಅವರ ಹೆಸರಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಆಪ್ತ ಸಹಾಯಕರ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ