ಡಿಕೆಶಿ ಬಾಂಬ್ ಸ್ಫೋಟ: ಹೇಳಿಕೆಗೆ ಬಿಜೆಪಿ ಆಕ್ರೋಶ
Team Udayavani, Dec 16, 2022, 7:20 AM IST
ಬೆಂಗಳೂರು: ಮತದಾರರ ಮಾಹಿತಿಕಳವು, 40 ಪರ್ಸೆಂಟ್ ಕಮಿ ಷನ್, ನಿರಂತರ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಮುಚ್ಚಿ ಹಾಕಲು ಬಿಜೆಪಿಯು ಮಂಗಳೂರು ಕುಕ್ಕರ್ಬ್ಲಾಸ್ಟ್ ಪ್ರಕರಣವನ್ನು ಬಳಸಿತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದು, ವಿವಾದಕ್ಕೀಡಾಗಿದೆ.
ಡಿ.ಕೆ. ಶಿವಕುಮಾರ್ ಮೇಲೆ ಮುಗಿಬಿದ್ದ ಬಿಜೆಪಿ ನಾಯಕರು, ಅವರು ಜನತೆಯ ಕ್ಷಮೆ ಕೋರ ಬೇಕು. ಉಗ್ರರ ಪರ ಅನು ಕಂಪದ ಇಂಥ ಹೇಳಿಕೆ ಪೊಲೀಸರ ಮನ ಸ್ಥೈರ್ಯ ಕುಗ್ಗಿಸುವಂಥದ್ದು. ಈ ಮೂಲಕ ರಾಷ್ಟ್ರೀಯ ಭದ್ರ ತೆಗೆ ಅಪಾಯಕಾರಿಯಾಗಿ ಪರಿಣಮಿಸಿದ್ದಾರೆ ಎಂದು ಸರಣಿ ಟ್ವೀಟ್ಗಳ ಮೂಲಕ ಟೀಕಿಸಿದ್ದಾರೆ.
ನಾನು ಪ್ರಕರಣವನ್ನು ಸಮರ್ಥಿಸಿಲ್ಲ ಹಾಗೂ ಕ್ಷಮೆ ಕೇಳುವಂಥದ್ದೇನೂ ಹೇಳಿಲ್ಲ ಎಂದಿರುವ ಡಿಕೆಶಿ, ಬಿಜೆಪಿ ಪ್ರತಿಯೊಂದರಲ್ಲೂ ರಾಜಕೀಯ ಲಾಭ ಪಡೆಯಲು ಹೇಗೆ ಹವಣಿಸುತ್ತಿದೆ ಎಂಬುದನ್ನು ಹೇಳಿರುವೆ ಎಂದಿದ್ದಾರೆ. ಈ ರೀತಿ ಸುತ್ತಿ ಬಳಸಿ ಹೇಳುವ ಬದಲು ಉಗ್ರ ಕೃತ್ಯ ಎಸಗುವವರನ್ನೆಲ್ಲ “ದೇ ಆರ್ ಮೈ ಬ್ರದರ್ಸ್’ ಎನ್ನಿ ಎಂದು ಸಚಿವ ಸುನಿಲ್ಕುಮಾರ್ ಟೀಕಿಸಿದ್ದಾರೆ.
ಡಿಕೆಶಿ ಹೇಳಿದ್ದೇನು?:
ಕುಕ್ಕರ್ ಬ್ಲಾಸ್ಟ್ ಪುಲ್ವಾಮಾ ದಾಳಿಯಾ? ಮತದಾರರ ಮಾಹಿತಿ ಕಳವು ಅಕ್ರಮ ವಿಷಯದಿಂದ ಜನರ ಗಮನ ಬೇರೆಡೆ ಸೆಳೆ ಯಲು ಬಿಜೆಪಿ ಸರಕಾರ ಇದನ್ನು ಬಳಸಿತು. ತನಿಖೆಗೂ ಮುನ್ನವೇ ಅಧಿಕಾರಿಗಳು ಇದು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು? ಇದರ ಹಿಂದೆ ಯಾವ ಉಗ್ರನಿದ್ದಾನೆ? ಯಾವ ಸಂಘಟನೆ ಇದೆ? ತನಿಖೆ ಏನಾಯಿತು? ಎಂದು ಡಿಕೆಶಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
MUST WATCH
ಹೊಸ ಸೇರ್ಪಡೆ
ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ