Tamil Nadu: ಡಿಎಂಕೆ, ಕಾಂಗ್ರೆಸ್ ಪಕ್ಷಕ್ಕೆ ಹಗರಣಗಳ ಇತಿಹಾಸವೇ ಇದೆ: ಪ್ರಧಾನಿ ಮೋದಿ
ಜಯಲಲಿತಾ ಅವರಿಗೆ ಏನು ಮಾಡಿದ್ದಾರೆ ಎಂಬುದನ್ನು ಎಲ್ಲರೂ ನೆನಪಿಸಿಕೊಳ್ಳುತ್ತಿದ್ದಾರೆ
Team Udayavani, Mar 15, 2024, 3:32 PM IST
ತಮಿಳುನಾಡು(ಕನ್ಯಾಕುಮಾರಿ): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಮಾರ್ಚ್ 15) ಕನ್ಯಾಕುಮಾರಿಯಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ವೇಳೆ ವಿಪಕ್ಷ ಕಾಂಗ್ರೆಸ್ ಮತ್ತು ಡಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಈ ಎರಡೂ ಪಕ್ಷಗಳಿಗೂ ಹಗರಣ ಮತ್ತು ಭ್ರಷ್ಟಾಚಾರದ ಇತಿಹಾಸವನ್ನೇ ಹೊಂದಿದೆ. ಇದರಿಂದಾಗಿ ಯಾವತ್ತೂ ತಮಿಳುನಾಡನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಿಲ್ಲ ಎಂದು ಹೇಳಿದರು.
ಇದನ್ನೂ ಓದಿ:IPL 2024; ಶ್ರೇಯಸ್ ಅಯ್ಯರ್ ಅನಾರೋಗ್ಯದ ಬಗ್ಗೆ ಮುಂದುವರಿದ ಊಹಾಪೋಹ
ಕನ್ಯಾಕುಮಾರಿ ಜತೆಗಿನ ತಮ್ಮ ಈ ಹಿಂದಿನ ನೆನಪನ್ನು ಬಿಚ್ಚಿಟ್ಟ ಪ್ರಧಾನಿ ಮೋದಿ ಅವರು, 1991ರಲ್ಲಿ ನಾನು ಕನ್ಯಾಕುಮಾರಿಯಿಂದಲೇ ಏಕ್ತಾ ಯಾತ್ರೆಯನ್ನು ಆರಂಭಿಸಿದ್ದೆ, ಈ ಬಾರಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪ್ರಯಾಣಿಸಿದ್ದೆ ಎಂದು ಹೇಳಿದರು.
ಎರಡೂ ರಾಜ್ಯಗಳಲ್ಲಿ ವಿಭಜನೆಯ ಸಿದ್ಧಾಂತಗಳನ್ನು ಜನರು ತಿರಸ್ಕರಿಸಿರುವುದಾಗಿ ಪ್ರಧಾನಿ ಹೇಳಿದ್ದು, ಆಡಳಿತಾರೂಢ ಡಿಎಂಕೆ ವಿರುದ್ಧ ಕಿಡಿಕಾರಿದ್ದು, ಆಡಳಿತಾರೂಢ ಡಿಎಂಕೆ ತಮಿಳುನಾಡು ಸಂಸ್ಕೃತಿ ಮತ್ತು ಭವಿಷ್ಯದ ಶತ್ರುವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೂ ಮೊದಲು ನಾನು ತಮಿಳುನಾಡಿಗೆ ಭೇಟಿ ನೀಡಿದ್ದು, ಹಲವಾರು ಪ್ರಮುಖ ದೇವಾಲಯಗಳಿಗೆ ಹೋಗಿದ್ದೆ. ಆದರೆ ಡಿಎಂಕೆ ಸರ್ಕಾರ ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಪ್ರಸಾರವನ್ನು ತಡೆಯಲು ಯತ್ನಿಸಿತ್ತು ಎಂದು ಹೇಳಿದರು.
ಆಡಳಿತಾರೂಢ ಡಿಎಂಕೆ ಮಹಿಳಾ ನಾಯಕರ ಬಗ್ಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಪ್ರಧಾನಿ ಮೋದಿ ಟೀಕಿಸಿದರು. ಡಿಎಂಕೆ ನಾಯಕರು ಜಯಲಲಿತಾ ಅವರಿಗೆ ಏನು ಮಾಡಿದ್ದಾರೆ ಎಂಬುದನ್ನು ಎಲ್ಲರೂ ನೆನಪಿಸಿಕೊಳ್ಳುತ್ತಿದ್ದಾರೆ. ಮಹಿಳೆಯರ ಬಗೆಗಿನ ಅವರ ವರ್ತನೆ ಈಗಲೂ ಹಾಗೆಯೇ ಇದೆ ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡು ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ತೂತುಕುಡಿಯಲ್ಲಿನ ಚಿದಂಬರನಾರ್ ಬಂದರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು. ಮೀನುಗಾರರ ಶ್ರೇಯೋಭಿವೃದ್ಧಿ ಯೋಜನೆ, ಆಧುನಿಕ ಮೀನುಗಾರಿಕೆ ಬೋಟ್, ಕಿಸಾನ್ ಕ್ರೆಟಿಡ್ ಕಾರ್ಡ್ ಸ್ಕೀಮ್ ಗೆ ಬೆಂಬಲ ನೀಡಲಾಗುವುದು ಎಂದು ಪ್ರಧಾನಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್