ವೈದ್ಯರ ನಡೆ ಹಳ್ಳಿಗಳ ಕಡೆ ಅಭಿಯಾನ ಸ್ವಾಗತಾರ್ಹ ಕ್ರಮ


Team Udayavani, May 25, 2021, 6:40 AM IST

ವೈದ್ಯರ ನಡೆ ಹಳ್ಳಿಗಳ ಕಡೆ ಅಭಿಯಾನ ಸ್ವಾಗತಾರ್ಹ ಕ್ರಮ

ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ “ವೈದ್ಯರ ನಡೆ ಹಳ್ಳಿಗಳ ಕಡೆ’ ಎಂಬ ಅಭಿಯಾನಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ.

ಸಂಚಾರಿ ಕ್ಲಿನಿಕ್‌ ಜತೆ ತೆರಳಿ ಸ್ಥಳದಲ್ಲೇ ತಪಾಸಣೆ ನಡೆಸಿ ಸೋಂಕು ಅಥವಾ ಇತರೆ ರೋಗದ ಗುಣಲಕ್ಷಣ ಕಂಡುಬಂದರೆ ಚಿಕಿತ್ಸೆ, ಆರೈಕೆ, ಉಪಚಾರಕ್ಕೆ ತೀರ್ಮಾನ ಮಾಡಿರುವುದರಿಂದ ಗ್ರಾಮೀಣ ಭಾಗದ ಜನಕ್ಕೆ ಉಪಕಾರವಾಗಲಿದೆ. ಇದು ಈಗಿನ ಅಗತ್ಯತೆಯೂ ಆಗಿದೆ.

ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲ. ಕೋವಿಡ್‌ ಆರೈಕೆ ಕೇಂದ್ರಗಳೂ ಕಡಿಮೆ. ಇತ್ತೀಚೆಗೆ ಹೋಂ ಐಸೋಲೇಷನ್‌ ಮಾಡುವಂತಿಲ್ಲ ಎಂದು ಹೇಳಿದ್ದರೂ ಕೆಲವರು ತಪಾಸಣೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಆತಂಕದ ವಿಚಾರ.

ಸರ್ಕಾರ ಜವಾಬ್ದಾರಿಯುತವಾಗಿ ಇದೀಗ ಅಂತಿಮ ವರ್ಷದ ವೈದ್ಯ ಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಇಂಟರ್ನ್ಶಿಪ್‌ ವಿದ್ಯಾರ್ಥಿ ಗಳು, ಬಿಎಸ್‌ಸಿ ನರ್ಸಿಂಗ್‌ , ಬಿ.ಡಿ.ಎಸ್‌., ಎಂ.ಡಿ.ಎಸ್‌., ಆಯುಷ್‌ ಪದವೀಧರ ವೈದ್ಯರ ಸೇವೆ ಎರವಲು ಪಡೆದು ಪರೀಕ್ಷೆ ಹಾಗೂ ಚಿಕಿತ್ಸೆಗೆ ನಿರ್ಧಾರ ಮಾಡಿರುವುದರಿಂದ ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣ ಗಳ ಬಗ್ಗೆ ಸ್ಪಷ್ಟತೆ ಸಿಗಲಿದೆ.

ಜತೆಗೆ, ತುರ್ತು ಚಿಕಿತ್ಸೆ ದೊರೆತು ಸಮಸ್ಯೆ ಮತ್ತಷ್ಟು ಉಲ½ಣಿಸುವುದು ತಪ್ಪಲಿದೆ. ರಾಜ್ಯ ಸರ್ಕಾರದ ಮಾರ್ಗ ಸೂಚಿ ಪ್ರಕಾರ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿ ಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ಇದೀಗ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗಿದೆ. ಸಮನ್ವಯತೆಯಿಂದ ಜತೆಗೂಡಿ ಕಾರ್ಯನಿರ್ವಹಿಸಿ ಗ್ರಾಮಗಳನ್ನು ಕೊರೊನಾ ಮುಕ್ತ ಮಾಡಬೇಕಾಗಿದೆ.

ಈ ಕಾರ್ಯಕ್ರಮಕ್ಕೆ ಪ್ರಚಾರದ ಅಗತ್ಯತೆಯೂ ಇದೆ. ಜತೆಗೆ ಮಹಿಳಾ ಸ್ವ ಸಹಾಯ ಸಂಘ, ಯುವಕ ಸಂಘಗಳನ್ನು, ಸೇವಾ ಸಂಸ್ಥೆಗಳನ್ನು ಜತೆ ಗೂಡಿಸಿಕೊಂಡು ಇದೊಂದು ಸಮುದಾಯದ ಅಭಿಯಾನ ಎಂಬಂತೆ ಕೈಗೊಳ್ಳಬೇಕಾಗಿದೆ. ಇಲ್ಲದಿದ್ದರೆ ಶಾಸ್ತ್ರಕ್ಕೆ ಎಂದಾದರೆ ಮೂಲ ಉದ್ದೇಶ ಈಡೇರುವುದಿಲ್ಲ. ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಕಾರ್ಯ ಪಡೆ ಸದಸ್ಯರನ್ನೂ ಈ ಕೆಲಸಕ್ಕೆ ನಿಯೋಜಿಸಲು ತೀರ್ಮಾನಿಸಿರುವುದರಿಂದ ಒಂದು ಹಂತದಲ್ಲಿ ಎಲ್ಲರಿಗೂ ಗ್ರಾಮದ ಪ್ರತಿ ಮನೆ ಕುಟುಂಬ ಸದಸ್ಯರ ಪರಿಚಯ ಇರುವುದರಿಂದ ತೀರಾ ಸಮಸ್ಯೆಯಾಗದು.

ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ವ್ಯಾಪಿಸಿ ಪ್ರತಿ ಕುಟುಂಬ ದಲ್ಲೂ ಪ್ರಕರಣಗಳು ಪತ್ತೆಯಾಗುತ್ತಿವೆ. ಅಲ್ಲಿ ಹೋ ಐಸೋಲೇಷನ್‌ಗೂ ವ್ಯವಸ್ಥೆ ಇರುವುದಿಲ್ಲ. ಹೀಗಾಗಿ, ಪಂಚಾಯಿತಿ ಹಂತದಲ್ಲೇ ಕೊರೊನಾ ಕೇರ್‌ ಸೆಂಟರ್‌ ತೆರೆದರೆ ಸೋಂಕಿತರು ಅಥವಾ ಗುಣಲಕ್ಷಣ ಇರುವವರು ಅಲ್ಲಿಗೆ ಹೋಗಲು ಮನಸ್ಸು ಮಾಡಬಹುದು. ಇಲ್ಲದವಾದರೆ ಕೊರೊನಾ ಕೇರ್‌ ಸೆಂಟರ್‌ ಕಿ.ಮೀ. ಗಟ್ಟಲೆ ದೂರ ಇದ್ದರೆ ಯಾರೂ ಹೋಗುವುದಿಲ್ಲ. ಸರ್ಕಾರ ಈ ಬಗ್ಗೆಯೂ ಗಮನಹರಿಸಬೇಕು.

ಹಾಗೆಯೇ, ರಾಜ್ಯ ಸರ್ಕಾರ ವೈದ್ಯರ ನೇರ ನೇಮಕಾತಿಗೆ ಮುಂದಾಗಿರುವ ಕೆಲಸವೂ ಉತ್ತಮವೇ. ಇದರಿಂದ ಸದ್ಯ ರಾಜ್ಯದಲ್ಲಿ ತಲೆದೋರಿರುವ ವೈದ್ಯರ ಕೊರತೆ ನಿವಾರಣೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಬಹುದು.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.