ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

 ಲಾಕ್‌ಡೌನ್‌, ಶಾಲೆ ಬಂದ್‌ ಇಲ್ಲ

Team Udayavani, Nov 30, 2021, 7:15 AM IST

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಬೆಂಗಳೂರು: ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್‌ 13 ದೇಶಗಳಲ್ಲಿ ಕಂಡುಬಂದಿದೆ. ಇದು ವೇಗವಾಗಿ ಹರಡಬಲ್ಲ ಶಕ್ತಿ ಹೊಂದಿದ್ದರೂ ಹೆಚ್ಚಿನ ಹಾನಿ ಮಾಡುವ ಲಕ್ಷಣ ಗಳು ಕಂಡುಬಂದಿಲ್ಲ ಎಂದು ದಕ್ಷಿಣ ಆಫ್ರಿಕಾದ ವೈದ್ಯರು ಹೇಳಿದ್ದಾರೆ. ಅಲ್ಲದೆ ಸೋಂಕುಪೀಡಿತರು ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ ಎಂದಿದ್ದಾರೆ.

ಇದರ ಮಧ್ಯೆಯೇ ವಿಶ್ವ ಆರೋಗ್ಯ ಸಂಸ್ಥೆ ಈ ವೈರಸ್‌ ಬಗ್ಗೆ ಎಚ್ಚರದಿಂದ ಇರುವಂತೆ ಮತ್ತೂಮ್ಮೆ ಸೂಚನೆ ನೀಡಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತಂಕ ಬೇಡ, ಎಚ್ಚರ ಇರಲಿ ಎಂದಿದ್ದು, ಸದ್ಯ ಶಾಲೆ ಮುಚ್ಚುವುದಿಲ್ಲ, ಲಾಕ್‌ಡೌನ್‌ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಸಚಿವ ಡಾ| ಸುಧಾಕರ್‌ ಅವರು ದಕ್ಷಿಣ ಆಫ್ರಿಕಾದಲ್ಲಿರುವ ಸಹಪಾಠಿ ವೈದ್ಯರ ಜತೆ ಮಾತನಾಡಿದ ವಿಚಾರವನ್ನು ಹಂಚಿಕೊಂಡಿದ್ದಾರೆ. ಒಮಿಕ್ರಾನ್‌ ರೂಪಾಂತರಿಯಿಂದ ಹೆಚ್ಚಿನ ಆತಂಕ ಕಂಡುಬರುವುದಿಲ್ಲ ಎಂದು ಈ ವೈದ್ಯರು ಹೇಳಿರುವುದಾಗಿ ಡಾ| ಸುಧಾಕರ್‌ ಮಾಹಿತಿ ನೀಡಿದ್ದಾರೆ. ತೀವ್ರತೆ ಕಡಿಮೆ ಪ್ರಮಾಣದ್ದಾಗಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ಅಗತ್ಯ ಬರುವುದಿಲ್ಲ ಎಂದು ತಿಳಿಸಿರುವುದಾಗಿ ಡಾ| ಸುಧಾಕರ್‌ ಹೇಳಿದ್ದಾರೆ.

ಇದರ ಜತೆಗೆ ಹೊಸ ರೂಪಾಂತರಿ ಬಗ್ಗೆ ಹೆಚ್ಚಿನ ವಿವರಗಳನ್ನು ಕಳುಹಿಸಿಕೊಡುವಂತೆ ಡಾ| ಸುಧಾಕರ್‌ ದಕ್ಷಿಣ ಆಫ್ರಿಕಾದಲ್ಲಿರುವ ವೈದ್ಯರಿಗೆ ಮನವಿ ಮಾಡಿದ್ದಾರೆ. ಹೊಸ ರೂಪಾಂತರಿ ವೇಗವಾಗಿ ಹಬ್ಬುವುದಾದರೂ ಅಪಾಯ ಇಲ್ಲ ಎಂಬ ಅಂಶ ದೃಢಪಟ್ಟಿದೆ ಎಂದಿದ್ದಾರೆ.

ಕೇಂದ್ರ ನಿರ್ಧರಿಸಬೇಕು
ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ಲಸಿಕೆ ನೀಡುವ ಬಗ್ಗೆ ಕೇಂದ್ರ ಸರಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಸಿಎಂ ಹೇಳಿದ್ದಾರೆ. ಕೇರಳದಿಂದ ಬಂದಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 7 ದಿನಗಳ ಅನಂತರ ಮತ್ತೂಮ್ಮೆ ಪರೀಕ್ಷೆ ನಡೆಸಲಾಗುವುದು. ನೆಗೆಟಿವ್‌ ಬಂದರೂ ಕ್ವಾರಂಟೈನ್‌ ಮಾಡಲಾಗುತ್ತಿದೆ. ಆದಷ್ಟು ಗುಂಪು ಗೂಡದಂತೆ ನಿಗಾ ವಹಿಸಲಾಗುತ್ತಿದೆ ಎಂದರು.

ವದಂತಿ ಹಬ್ಬಿಸುವವರ ವಿರುದ್ಧ ಕ್ರಮ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಸುಧಾಕರ್‌ ಮಾತನಾಡಿ, ವದಂತಿ ಹಬ್ಬಿಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಮೊದಲನೇ ಮತ್ತು 2ನೇ ಅಲೆಯ ಸಂದರ್ಭದಲ್ಲಿ ಲಾಕ್‌ಡೌನ್‌ ಜಾರಿ ಮಾಡಿದ ಪರಿಣಾಮ ಸಾಕಷ್ಟು ನಷ್ಟ ಅನುಭವಿಸಬೇಕಾಯಿತು. ಅನೇಕರು ಉದ್ಯೋಗಗಳನ್ನು ಕಳೆದುಕೊಂಡರು. ನಮ್ಮ ಮುಂದೆ ಲಾಕ್‌ಡೌನ್‌ ಮಾಡುವ ಚಿಂತನೆ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಲಾಕ್‌ಡೌನ್‌ ಮಾಡಲಾಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ರೀತಿ ವದಂತಿಗಳನ್ನು ಹಬ್ಬಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ:ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ಭಿನ್ನ ವೈದ್ಯಕೀಯ ವರದಿ ತಂದ ಆತಂಕ
ಒಮಿಕ್ರಾನ್‌ ರೂಪಾಂತರಿ ಭೀತಿ ನಡುವೆ ದ. ಆಫ್ರಿಕಾದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ವ್ಯಕ್ತಿಯೊಬ್ಬರ ವೈದ್ಯಕೀಯ ವರದಿ ಭಿನ್ನವಾಗಿರುವುದು ಆತಂಕ ಮೂಡಿಸಿದೆ. ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಡಾ| ಸುಧಾಕರ್‌, ಈ ಪ್ರಕರಣದ ಜಿನೋಮ್‌ ಸೀಕ್ವೆನ್ಸಿಂಗ್‌ ವರದಿ ಬರಲು ಒಂದು ವಾರ ಬೇಕು. ಡಿ. 1ರಂದು ವರದಿ ಕೈಸೇರುವ ನಿರೀಕ್ಷೆ ಇದೆ ಎಂದರು. ದ. ಆಫ್ರಿಕಾದಿಂದ ಬಂದ ಹಿರಿಯ ನಾಗರಿಕರಿಗೆ ದೃಢಪಟ್ಟಿರುವ ಸೋಂಕಿನ ಬಗ್ಗೆ ಅಧಿಕೃತವಾಗಿ ಹೇಳಲು ಸಾಧ್ಯವಾಗದು ಎಂದರು.

ಎಚ್ಚರ ವಹಿಸಿ: ಡಬ್ಲ್ಯುಎಚ್‌ಒ
ಹೊಸ ರೂಪಾಂತರಿ ವೇಗವಾಗಿ ಹಬ್ಬಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕೆಲವು ಪ್ರದೇಶಗಳಲ್ಲಿ ಅದು ಗಂಭೀರ ಆರೋಗ್ಯ ಸವಾಲುಗಳನ್ನು ತಂದೊಡ್ಡಲಿದೆ ಎಂದೂ ಹೇಳಿದೆ. ಜಗತ್ತಿನ ಯಾವುದೇ ಭಾಗದಲ್ಲಿ ಹೊಸ ರೂಪಾಂತರಿ ತಳಿಯಿಂದಾಗಿ ಅಸುನೀಗಿದ್ದು ಇದುವರೆಗೆ ದೃಢಪಟ್ಟಿಲ್ಲ ಎಂದು ಹೇಳಿದೆ.

ಲಾಕ್‌ಡೌನ್‌ ಇಲ್ಲ
ಲಾಕ್‌ಡೌನ್‌ ಮಾಡುವುದಿಲ್ಲ ಮತ್ತು ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಮಿಕ್ರಾನ್‌ ರೂಪಾಂತರಿ ತಡೆಯಲು ಸರಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಆದರೆ ಎಲ್ಲರೂ ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲಿಸಬೇಕು. ವಿಮಾನ ನಿಲ್ದಾಣಗಳಲ್ಲಿ ವಿದೇಶಗಳಿಂದ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ದಕ್ಷಿಣ ಆಫ್ರಿಕಾದಿಂದ ಬಂದ ಒಬ್ಬರಲ್ಲಿ ವಿಭಿನ್ನ ಸೋಂಕಿನ ಲಕ್ಷಣ ಕಂಡುಬಂದಿರುವ ಹಿನ್ನೆಲೆ ಯಲ್ಲಿ ಗಂಟಲದ್ರವದ ಮಾದರಿಯನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ. ವರದಿಯ ನಿರೀಕ್ಷೆಯಲ್ಲಿದ್ದೇವೆ ಎಂದರು.

ಇಂದು ಉನ್ನತ ಮಟ್ಟದ ಸಭೆ
ಹೊಸ ರೂಪಾಂತರಿ ಭೀತಿ ಹಿನ್ನೆಲೆಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ತಜ್ಞರ ಸಭೆ ನಡೆಯಲಿದೆ. ಕೊರೊನಾ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ. ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ. ಬಳಿಕ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ. ಮಾಸ್ಕ್ ಬಳಕೆ ಕಡ್ಡಾಯ, ಸ್ಯಾನಿಟೈಸರ್‌ ಬಳಕೆ, ಸಾಮಾಜಿಕ ಅಂತರ ಪಾಲನೆ ವಿಚಾರದಲ್ಲಿ ಬಿಗಿ ನಿಯಮ ಜಾರಿಗೊಳಿಸಲು ಸರಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿಗಳು ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆಗೆ ಮಾತನಾಡಿದ್ದು, ಅವರನ್ನೂ ಸಭೆಗೆ ಆಹ್ವಾನಿಸಲಾಗಿದೆ ಎಂದು ಸಚಿವ ಸುಧಾಕರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.