ಅರ್ಜಿ ತಡ: ವಿಮೆ ತಿರಸ್ಕರಿಸುವಂತಿಲ್ಲ!ಸರ್ವೋಚ್ಚ ನ್ಯಾಯಾಲಯ
Team Udayavani, Feb 12, 2022, 5:55 AM IST
ಹೊಸದಿಲ್ಲಿ: ಕಳ್ಳತನವಾದ ವಾಹನಕ್ಕೆ ಪರಿಹಾರ ನೀಡಿ ಎಂದು ವಿಮಾ ಕಂಪೆನಿಗೆ ಅರ್ಜಿ ಸಲ್ಲಿಸುವುದು ತುಸು ತಡವಾಗಿರ ಬಹುದು, ಹಾಗಂತ ಪರಿಹಾರ ನೀಡುವುದನ್ನು ತಿರಸ್ಕರಿಸುವಂತಿಲ್ಲ..
ಹೀಗೊಂದು ಮಹತ್ವದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ನೀಡಿದೆ. ಐನಾ ನಿರ್ಮಾಣ ಕಂಪೆನಿಗೆ ಸೇರಿದ ಟ್ರಕ್ 2007, ನ.4ರಂದು ಕಳ್ಳತನವಾಗಿತ್ತು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ದರೂ ಟ್ರಕ್ ಅನ್ನು ವಶಪಡಿಸಿಕೊಳ್ಳಲು ಆಗಲಿಲ್ಲ.
ಇದನ್ನೂ ಓದಿ:ಮೋದಿ, ನಿತೀಶ್ ಕುಮಾರ್ಗೂ ಮಕ್ಕಳಾಗಲಿ ಎಂದು ದೇವರಲ್ಲಿ ಪಾರ್ಥಿಸುವೆ; ಲಾಲೂ ಪ್ರಸಾದ್ ಕಿಡಿ
ಈ ಹಿನ್ನೆಲೆಯಲ್ಲಿ ಐದು ತಿಂಗಳು ತಡವಾಗಿ ಐನಾ, ಓರಿಯೆಂಟಲ್ ವಿಮಾ ಕಂಪೆನಿಗೆ ವಿಮಾ ಮೊತ್ತ ನೀಡಿ ಎಂದು ಅರ್ಜಿ ಸಲ್ಲಿಸಿತ್ತು. ಆದರೆ ತಡವಾಗಿ ಅಷ್ಟು ತಿಂಗಳಾದ ಅನಂತರ ಅರ್ಜಿ ಸಲ್ಲಿಸಲಾಗಿದೆ ಎಂದ ಓರಿಯಂಟಲ್ ಪರಿಹಾರ ನೀಡಲು ತಿರಸ್ಕರಿಸಿತ್ತು. ಇದನ್ನು ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗವೂ ಪುರಸ್ಕರಿಸಿತ್ತು. ಆದರೆ ಹೀಗೆ ಮಾಡಲು ಸರ್ವೋಚ್ಚ ಪೀಠ ಒಪ್ಪಿಲ್ಲ. ಅರ್ಜಿ ಸಲ್ಲಿಕೆ ತಡವಾಗಿದ್ದರೂ, ಕಳ್ಳತನ ಸತ್ಯವೇ ಆಗಿರು ವುದರಿಂದ ಪರಿಹಾರ ನೀಡಬೇಕೆಂದು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ