ಸರಕಾರದಿಂದ ಆರ್ಥಿಕ ಪ್ಯಾಕೇಜ್ ನಿರೀಕ್ಷಿಸಬೇಡಿ: ಸ್ಮತಿ ಇರಾನಿ
Team Udayavani, May 10, 2020, 8:36 PM IST
ಕೊಲ್ಕತ್ತಾ: ಸರಕಾರದ ಆರ್ಥಿಕ ಪ್ಯಾಕೇಜ್ ಮೇಲೆ ಅವಲಂಬಿತರಾಗಬೇಡಿ. ಹೊಸ ಆಲೋಚನೆಗೆ ತೆರೆದುಕೊಂಡು ಸ್ವಾವಲಂಬಿಗಳಾಗಿ ಉದ್ಯಮ ನಡೆಸಿ ಎಂದು ಕೇಂದ್ರ ಸಚಿವೆ ಸ್ಮತಿ ಇರಾನಿಯವರು ಜವಳಿ ಉದ್ಯಮಕ್ಕೆ ಸಲಹೆ ನೀಡಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಸದಸ್ಯರ ಜತೆ ವೀಡಿಯೋ ಸಂವಾದ ನಡೆಸಿದ ಸಚಿವರು, ಜವಳಿ ಉದ್ಯಮವು ಆತ್ಮಾವಲೋಕನ ಮಾಡಿಕೊಳ್ಳುವ ಸಮಯವಿದು.ಹೊಸ ಮಾರ್ಗ ಮತ್ತು ಆಲೋಚನೆಗೆ ತೆರೆದುಕೊಳ್ಳಲು ಇದು ಸೂಕ್ತ ಸಮಯ.ಉದ್ಯಮಕ್ಕೆ ಆ ಸಾಮರ್ಥ್ಯವಿದೆ. ಹೊಸ ಪರಿಸ್ಥಿತಿಗೆ ಅವರು ತಮ್ಮನ್ನು ತಾವು ಹೊಂದಿಸಿಕೊಂಡರೆ ಸರಕಾರವನ್ನು ಅವಲಂಬಿಸುವ ಅಗತ್ಯವಿಲ್ಲ ಎಂದರು.
ಉದ್ಯಮಕ್ಕೆ ಅಗತ್ಯವಾದ ನೀತಿಗಳನ್ನು ರೂಪಿಸುವುದು ಮತ್ತು ಉದ್ಯಮದ ಚಟುವಟಿಕೆಗಳಿಗೆ ಬೆಂಬಲ ನೀಡುವುದು ಸರಕಾರದ ಕೆಲಸ. ಈಗ ನೀವು ಸರಕಾರದಿಂದ ನಿರೀಕ್ಷಿಸುತ್ತಿರುವ ಹಣ ಸಾರ್ವಜನಿಕರದ್ದು. ಖರ್ಚು ಮಾಡುವ ಪ್ರತಿ ರೂಪಾಯಿಗೂ ಜನ ಲೆಕ್ಕ ಕೇಳುತ್ತಾರೆ ಎಂದರು.
ಸೆಣಬು ಉದ್ಯಮಕ್ಕೆ ಸಹಾಯ ಮಾಡುವ ವಿಚಾರವಾಗಿ ಪಶ್ಚಿಮ ಬಂಗಾಳ ಸರಕಾರದ ಜತೆ ಜವಳಿ ಸಚಿವಾಲಯದ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ