ಮನೆ ಬಾಗಿಲಿಗೇ ಊಟ : ಹಣಕಾಸಿನ ಕಾರಣಕ್ಕೆ ಸೊರಗದಿರಲಿ ಯೋಜನೆ


Team Udayavani, May 18, 2021, 6:35 AM IST

ಮನೆ ಬಾಗಿಲಿಗೇ ಊಟ : ಹಣಕಾಸಿನ ಕಾರಣಕ್ಕೆ ಸೊರಗದಿರಲಿ ಯೋಜನೆ

ಯಾವುದೇ ಸಂಕಷ್ಟಕ್ಕೆ ಸಿಲುಕಿ ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಆದಾಯ ಕಳೆದುಕೊಂಡ ಬಡವರು ಮತ್ತು ನಿರ್ಗತಿಕರ ಹಸಿವು ನೀಗಿಸುವುದು ಸರಕಾರದ ಶಾಸನಬದ್ಧ ಕರ್ತವ್ಯ ಮತ್ತು ನೈತಿಕ ಹೊಣೆಗಾರಿಕೆಯಾಗಿದೆ. ಅದರಂತೆ ಕೊರೊನಾ ಲಾಕ್‌ಡೌನ್‌ ಅವಧಿ ಯಲ್ಲಿ ನಗರ ಪ್ರದೇಶಗಳ ದುರ್ಬಲ ವರ್ಗಗಳಿಗೆ ಇಂದಿರಾ ಕ್ಯಾಂಟೀನ್‌ ಮೂಲಕ ಉಚಿತ ಊಟ ಪೂರೈಸುವಂತೆ ಗ್ರಾಮೀಣ ಭಾಗದ ದುರ್ಬಲ ಕುಟುಂಬಗಳಿಗೆ ಅವರ ಮನೆ ಬಾಗಿಲಿಗೆ ಊಟ ತಲುಪಿಸುವ ಸರಕಾರದ ಯೋಜನೆ ಸ್ವಾಗತಾರ್ಹ.

ಈ ಯೋಜನೆಯ ಪರಿಣಾಮಕಾರಿಯಾಗಿ ಜಾರಿಗೊಂಡು ಅರ್ಹ ಫಲಾನುಭವಿಗಳಿಗೆ ತಲುಪಿದರೆ ಇದೊಂದು ಮಾದರಿ ಯೋಜನೆ ಆಗುವುದರಲ್ಲಿ ಅನುಮಾನವಿಲ್ಲ. ಆದರೆ ಯೋಜನೆ ಅನುಷ್ಠಾನಕ್ಕೆ ಹಣಕಾಸಿನ ಕೊರತೆಯಿದೆ ಎಂಬ ಮಾತುಗಳು ಕೇಳಿ ಬರುತ್ತವೆ. ಕೇವಲ ಹಣದ ಕಾರಣಕ್ಕೆ ಯೋಜನೆ ನಿಂತು ಹೋಗುವುದು ಅಥವಾ ವಿಳಂಬ ವಾಗುವುದು ನ್ಯಾಯೋಚಿತವಲ್ಲ. ಹಾಗಾಗಿ ಆರ್ಥಿಕ ಸಂಪನ್ಮೂಲಗಳ ಕೊರತೆಯಿಂದ ಈ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನಡೆ ಆಗಬಾರದು. ಆದ್ದರಿಂದ ಆರ್ಥಿಕ ಸಂಪನ್ಮೂಲಗಳನ್ನು ಹೊಂದಿಸಿಕೊಳ್ಳುವ ಕೆಲಸ ತ್ವರಿತವಾಗಿ ಸರಕಾರ ಮಾಡಬೇಕು.

ಹಳ್ಳಿಗಳಲ್ಲಿನ ನಿರ್ಗತಿಕರು ಮತ್ತು ದುರ್ಬಲರನ್ನು ಗುರುತಿಸಿ ತಯಾರಿಸಿದ ಆಹಾರದ ಪೊಟ್ಟಣಗಳನ್ನು ಹಂಚುವ ಯೋಜನೆ ಇದಾಗಿದೆ. ಪ್ರತೀ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 150 ಆಹಾರದ ಪ್ಯಾಕ್‌ಗಳನ್ನು ಸಿದ್ದಪಡಿಸಲಾಗುತ್ತದೆ. ಹೆಚ್ಚುವರಿ ಪ್ಯಾಕ್‌ಗಳ ಆವಶ್ಯಕತೆ ಬಿದ್ದಲ್ಲಿ ಇದಕ್ಕೆ ಬೇಕಾಗುವ ಹಣಕಾಸಿನ ವ್ಯವಸ್ಥೆಯನ್ನು ಆಯಾ ಗ್ರಾಮ ಪಂಚಾಯತ್‌ಗಳು ನಿಭಾಯಿಸಬೇಕಾಗುತ್ತದೆ. ಇದಕ್ಕಾಗಿ 15ನೇ ಹಣಕಾಸು ಆಯೋಗದ ಅನುದಾನ ಮತ್ತು ಸ್ವಂತ ಸಂಪನ್ಮೂಲಗಳಿಂದ ಭರಿಸಬೇಕು ಎಂದು ಹೇಳಲಾಗಿದೆ.

ಆದರೆ ರಾಜ್ಯದ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳಲ್ಲಿ ಬಹುತೇಕ ಗ್ರಾ.ಪಂ.ಗಳು ಆರ್ಥಿಕವಾಗಿ ಸಬಲ ಮತ್ತು ಸ್ವಾವಲಂಬಿಗ ಳಾಗಿಲ್ಲ ಎಂಬ ವಾಸ್ತವ ಸಂಗತಿಯನ್ನು ಸರಕಾರ ಮನಗಾಣಬೇಕು. ಗ್ರಾ.ಪಂ.ಗಳ ಮೇಲೆ ಆರ್ಥಿಕ ಹೊರೆ ಹೊರಿಸುವ ಬದಲು ಸಂಪೂರ್ಣ ವನ್ನು ವೆಚ್ಚವನ್ನು ಸರಕಾರವೇ ಭರಿಸಬೇಕು.

ನಗರ ಪ್ರದೇಶಗಳಂತೆ ಗ್ರಾಮೀಣ ಭಾಗದಲ್ಲೂ ಸ್ವಯಂ ಸೇವಾ ಸಂಸ್ಥೆಗಳು, ಸರಕಾರೇತರ ಸಂಸ್ಥೆಗಳು, ದಾನಿಗಳಿಂದ ನೆರವು ಪಡೆದು ಕೊಳ್ಳುವ ನಿಟ್ಟಿನಲ್ಲಿ ಸರಕಾರ ಯೋಚಿಸಬೇಕಿದೆ.

ನಗರ ಪ್ರದೇಶಗಳಿಂದ ಹಳ್ಳಿಗಳಿಗೆ ಮರು ವಲಸೆ ಆಗಿರುವುದರಿಂದ ಕೊರೊನಾ ಎರಡನೇ ಅಲೆ ಈಗ ಗ್ರಾಮೀಣ ಭಾಗಕ್ಕೆ ವ್ಯಾಪಕವಾಗಿ ಹರಡಿದೆ. ಉದ್ಯೋಗವಿಲ್ಲದೆ ಅನೇಕ ಕಾರ್ಮಿಕ ಕುಟುಂಬಗಳು ಈಗ ಹಳ್ಳಿ ಸೇರಿಕೊಂಡಿವೆ. ನರೇಗಾ ಯೋಜನೆಯಡಿ ಸೀಮಿತ ಕಾರ್ಮಿಕರಿಗೆ ಕೆಲಸ ನೀಡುತ್ತಿರುವುದರಿಂದ ಅಲ್ಲಿಯೂ ಎಲ್ಲರಿಗೂ ಕೆಲಸ ಸಿಗುತ್ತಿಲ್ಲ. ಆದ್ದರಿಂದ ಗ್ರಾಮೀಣ ಭಾಗದ ದುರ್ಬಲ ವರ್ಗಗಳ ಆಹಾರ ಭದ್ರತೆಗೆ ಈಗ ಹೆಚ್ಚಿನ ಒತ್ತು ಮತ್ತು ಆದ್ಯತೆ ಕೊಡಬೇಕಾಗಿದೆ.

ಈ ಯೋಜನೆಗೆ ಆರ್ಥಿಕ ಇಲಾಖೆಯ ಮಂಜೂರಾತಿ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಜತೆಗೆ ಈ ಯೋಜನೆಯ ಬಗ್ಗೆ ರಾಜ್ಯ ಸರಕಾರ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಲಿಖೀತ ಹೇಳಿಕೆಯಲ್ಲಿ ಪ್ರಸ್ತಾವಿಸಿದೆ. ಹೀಗಾಗಿ ಸರಕಾರ ಈ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಲಿ.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.