ಕುಣಿಗಲ್ ನಲ್ಲಿ ನಡೆಯುವ ಗಣಿಗಾರಿಕೆ ದಂಧೆ ಬಳ್ಳಾರಿಯನ್ನೂ ಮೀರಿಸುವಂತಿದೆ :ದ್ವಾರಕಾನಾಥ್ ಕಳವಳ


Team Udayavani, Dec 14, 2021, 7:49 PM IST

ಕುಣಿಗಲ್‌ನಲ್ಲಿ ಮಾನವ ಹಕ್ಕು ಉಲ್ಲಂಘನೆ : ಡಾ.ಸಿ.ಎಸ್.ದ್ವಾರಕಾನಾಥ್ ಕಳವಳ

ಕುಣಿಗಲ್ : ತಾಲೂಕಿನ ಕಸಬಾ ಹೋಬಳಿ ಹಂಗರಹಳ್ಳಿ, ತರಿಕೆರೆ, ಹಂದಲಕುಪ್ಪೆ ಗ್ರಾಮಗಳ ಕಲ್ಲು ಗಣಿಗಾರಿಕೆ ದಂಧೆ, ಬಳ್ಳಾರಿ ಮೈನಿಂಗ್ ಮಾಫಿಯಾವನ್ನೂ ಮೀರಿಸುತ್ತಿರುವಂತಿದೆ ಎಂದು ಕಳವಳ ವ್ಯಕ್ತಪಡಿಸಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಹೈಕೋರ್ಟ್ ಹಿರಿಯ ವಕೀಲ ಡಾ.ಸಿ.ಎಸ್.ದ್ವಾರಕಾನಾಥ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದಾವೆ ಹೂಡುವುದ್ದಾಗಿ ಅವರು ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿ ಹಂಗರಹಳ್ಳಿ ಸರ್ವೆ 46, ಹಂದಲಕುಪ್ಪೆ ಸರ್ವೆ ನಂ 1, ತರೀಕರೆ ಸರ್ವೆ ನಂ 80 ಹಾಗೂ 81 ರಲ್ಲಿ ನಡೆಯುತ್ತಿರುವ ಎಂಟು ಗಣಿಗಾರಿಕೆ ಪ್ರದೇಶಕ್ಕೆ ಮಂಗಳವಾರ ಬೇಟಿ ನೀಡಿ ಪರಿಶೀಲಿಸಿದ ಡಾ.ಸಿ.ಎಸ್.ದ್ವಾರಕಾನಾಥ್ ಇಲ್ಲಿನ ಪರಿಸ್ಥಿಯನ್ನು ನೋಡಿ ಅಧಿಕಾರಿಗಳು ತಾಲೂಕಿನಲ್ಲಿ ಇದ್ದಾರೋ, ಇಲ್ವೋ ಎಂದು ಪ್ರಶ್ನಿಸಿದರು, ಇಷ್ಟೇಲ್ಲಾ ಅಕ್ರಮಗಳು ನಡೆಯುತ್ತಿದ್ದರು ಏಕೆ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಕಲ್ಲುಗಣಿಕಾರಿಕೆಗೆ ಭೂಮಿ ಮಟ್ಟದದಿಂದ ಎತ್ತರದಲ್ಲಿ ಇದ್ದ ಬಂಡೆಯನ್ನು ಈಗ 150, 160 ಅಡಿ ಪಾತಾಳ ಮಟ್ಟದ ಅಳಕ್ಕೆ ಕೊರೆದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಡಾ.ಸಿ.ಎಸ್.ದ್ವಾರಕನಾಥ್ ಅವರೇ ಕ್ಷಣಕಾಲ ಅವಕ್ಕಾದರು. ಇದನ್ನು ನೋಡಿಕೊಂಡು ಅಧಿಕಾರಿಗಳು ಸುಮ್ಮನೇ ಇರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು.

ಜೀವನಕ್ಕೆ ಮಾರಕ : ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಡಾ.ಸಿ.ಎಸ್.ದ್ವಾರಕಾನಾಥ್ ಕಾನೂನುಗಳನ್ನು ಗಾಳಿಗೆ ತೂರಿ ನಿಯಮ ಬಾಹಿರವಾಗಿ ಕಲ್ಲುಗಣಿಗಾರಿಕೆಯಿಂದ ಅಕ್ಕಪಕ್ಕದಲ್ಲಿರುವ ಕಾಡುಗೊಲ್ಲ ಬುಡಕಟ್ಟು ಜನಾಂಗ, ಲಂಬಾಣಿ ತಾಂಡ ಹಾಗೂ ಪರಿಶಿಷ್ಟ ಜನಾಂಗದ ಕಾಲೋನಿಗಳಲ್ಲಿನ ಮನೆಗಳು ಬಿರುಕು ಬಿಟ್ಟು ತೊಂದರೆಯಾಗಿದೆ ಎಂಬ ದೂರಿನ ಹಿನ್ನಲ್ಲೆಯಲ್ಲಿ ಇಂದು ಬೇಟಿ ನೀಡಿ ಪರಿಶೀಲಿಸಿದ್ದೇನೆ, ಕಲ್ಲುಗಣಿಗಾರಿಕೆಯಿಂದ ಬರುವ ದೂಳು ಮನುಷ್ಯನಿಗೆ ಮಾತ್ರವಲ್ಲದೇ ಪ್ರಾಣಿ ಸಂಕುಲಕ್ಕೆ ಮಾರಕವಾದ ರೋಗ ಹರಡುತ್ತವೆ.

ಮೊದಲೇ ಇಲ್ಲಿ ಹಿಂದು ವರ್ಗಗಳ ಬುಡಕಟ್ಟು ಜನಾಂಗಗಳೇ ಹೆಚ್ಚು ವಾಸುತ್ತಿರುವುದರಿಂದ ಆರ್ಥಿಕವಾಗಿ ಹಿಂದಿಳಿದಿರುವ ಇವರಿಗೆ ಆರೋಗ್ಯ ತೋರಿಸಿಕೊಳ್ಳುವ ಶಕ್ತಿ ಇಲ್ಲ ಜೊತೆಗೆ ಇವರ ಜೀವನಾಡಿಯಾಗಿರುವ ಕುರಿ ಸಾಕಾಣಿಕೆಯ ಮೇಲೆ ಪರಿಣಾ ಬಿದ್ದು ಕಳೆದ ಒಂದು ತಿಂಗಳಿಂದ ಇಚೇಗೆ 20 ಕುರಿಗಳು ಸಾವನಪ್ಪಿವೆ ಇದರಿಂದ ಇಲ್ಲಿನ ಜನರ ಜೀವನ ಅಕ್ಷರ ಸತ್ಯ ನರಕವಾಗಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.

ಇದನ್ನೂ ಓದಿ : ರಾಜ್ಯದಲ್ಲಿಂದು 327 ಕೋವಿಡ್‌ ಪಾಸಿಟಿವ್‌ ಪತ್ತೆ: 7 ಸಾವು

ಅಡಳಿತ ನಡೆಸುವ ವಿಧಾನಸೌದದಿಂದ ಕೇವಲ 80 ಕಿ.ಮೀ ಸಮೀಪದಲ್ಲೇ ಇಷ್ಟೋಂದು ಮಾನವ ಹಕ್ಕು ಉಲ್ಲಂಘನೆಯಾಗಿ ಜನ ಜೀವನ ಅಸ್ಥವ್ಯಸ್ಥವಾಗಿದ್ದರು ಆಡಳಿತ ನಡೆಸುವವರು ಇಲ್ಲವೇ ಅಧಿಕಾರಿ ಶಾಹಿಗಳು ಗಮನ ಹರಿಸದೇ ಇರುವುದು ಇಲ್ಲಿನ ಜನರ ದುರ್ದೇವವಾಗಿದೆ ಎಂದು ತಿಳಿಸಿದರು.

ಇಲ್ಲಿನ ಗಣಿಕಾರಿಗೆಯ ಬಗ್ಗೆ ಸಾಕಷ್ಟು ಅಧ್ಯಯನ ನಡೆಸಿ ಎಲ್ಲಾ ನ್ಯೂನ್ಯತೆಗಳನ್ನು ಪಟ್ಟಿ ಮಾಡಿಕೊಂಡು ಸ್ಥಳ ಪರಿಶೀಲನೆ ನಡೆಸಿದ್ದೇನೆ. ನಾನೂ ಅಲ್ಲೇ ಕುಳಿತು ಕೇವಲ ಪೇಪರ್ ನಲ್ಲಿ ಮಾತ್ರ ನೋಡಿದರೇ ಇಲ್ಲಿ ಭೀಕರತೆ ನನಗೆ ಅರ್ಥವಾಗುತ್ತಿರಲಿಲ್ಲ ಈಗ ನನಗೆ ಸಂಪೂರ್ಣ ಅರ್ಥವಾಗಿದೆ. ಮಾನವ ಹಕ್ಕು ಆಯೋಗ ಸೇರಿದಂತೆ ಸರಕಾರದ ಗಮನ ಸೆಳೆಯುವ ಕೆಲಸ ಮಾಡುವ ಜೊತೆಗೆ ಅಲೆಮಾರಿ ಹಾಗೂ ಅದಿವಾಸಿ ಜನಾಂಗಕ್ಕೆ ಆಗುತ್ತಿರುವ ಅನ್ಯಾಯಾವನ್ನು ಕಾನೂನು ಪ್ರಕಾರ ನ್ಯಾಯಾಲಯದಲ್ಲಿಯೂ ಹೋರಾಟ ನಡೆಸುತ್ತೇನೆ. ಸಾಧ್ಯವಾದರೇ ವಿರೋಧ ಪಕ್ಷದ ನಾಯಕರ ಗಮನಕ್ಕೆ ಪರಿಸ್ಥಿತಿ ವಿವರಿಸಿ ಸದನ ಸಮಿತಿಯಿಂದ ತನಿಖೆ ನಡೆಸುವ ನಿಟ್ಟಿನಲ್ಲಿಯೂ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

ಕುರಿಗಾಹಿಯ ಕಷ್ಟ ಕೇಳಿದರು:
ಕಲ್ಲುಗಣಿಕಾರಿಕೆ ಸ್ಥಳ ಪರಿಶೀಲನೆ ನಡೆಸಿ ಬರುತ್ತಿದ್ದ ಡಾ.ಸಿ.ಆರ್.ದ್ವಾರಕನಾಥ್ ಅವರಿಗೆ ಕುರಿಗಾಹಿ ಜಯಮ್ಮ ಅಡ್ಡಲಾಗಿ ಸಿಕ್ಕರು. ಎಷ್ಟು ಕುರಿ ಜಯಮ್ಮ ಎಂದು ಕೇಳಿದಾಗ ಸಾರ್ 80 ಕುರಿ ಇದ್ದವು ಈಗ ಕಲ್ಲುಗಣಿಕಾರಿಕೆಯಿಂದ ದೂಳು ಹಾಗೂ ಕಲುಷಿತು ನೀರು ಕುಡಿದ 20 ಕುರಿ ಒಂದು ತಿಂಗಳಲ್ಲಿ ಸತ್ತು ಹೋಗಿವೆ ಎಂದು ಕಷ್ಟ ಹೇಳಿಕೊಂಡ ಮಹಿಳೆಗೆ ಆಯೋಗದ ಮಾಜಿ ಅಧ್ಯಕ್ಷರು ಸಮಾಧಾನ ಹೇಳಿ ಒಳ್ಳೆ ಕಾಲ ಬರುತ್ತದೆ ಎಂದು ತಿಳಿಸಿದರು.

ಪುರಸಭಾ ಸದಸ್ಯ ಮಲ್ಲಿಪಾಳ್ಯ ಶ್ರೀನಿವಾಸ್, ಕಾಡುಗೊಲ್ಲ ಆಶ್ಮತೆ ಹೋರಾಟ ಸಮಿತಿ ರಾಜ್ಯ ಸಂಚಾಲಕ ಜಿ.ಕೆ.ನಾಗಣ್ಣ, ಗ್ರಾಮದ ಮುಖಂಡ ಧನಂಜಯ್ಯ, ರಾಜಣ್ಣ, ಮಾರೇಗೌಡ, ಜಯಮ್ಮ, ಶಂಕರ್ ನಾಯ್ಕ್, ಶಿವಕುಮಾರ್ ನಾಯ್ಕ್, ನವೀನ, ದೊಡ್ಡಯ್ಯ ಮುಂತಾದವರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.