ನಾನು ಆರೋಗ್ಯ ಸಚಿವನಾಗಲು ಡಾ.ಜಿ.ಪರಮೇಶ್ವರ್ ಅವರೇ ಕಾರಣ: ಸಚಿವ ಡಾ.ಸುಧಾಕರ್

ನಾವೀಗ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಅದರೆ... ಸುಧಾಕರ್ ಜನ ಮೆಚ್ಚುವ ಕೆಲಸ ಮಾಡಿದ್ದಾರೆ...!

Team Udayavani, Dec 24, 2022, 8:08 PM IST

1-dsdsadsa

ಕೊರಟಗೆರೆ: ನನಗೆ ಎಂಬಿಬಿಎಸ್ ಮಾಡಲು1993 ರಲ್ಲಿ ಡಾ. ಜಿ ಪರಮೇಶ್ವರವರು ಸೀಟ್ ಕೊಟ್ಟಿದ್ದರು. ಪ್ರಥಮ ಬಾರಿ ಎಂದರೆ 2013 ರಲ್ಲಿ ಮೊದಲ ಬಾರಿ ಶಾಸಕನಾಗಲು ಅವರೇ ಟಿಕೆಟ್ ನೀಡಿದ್ದರು. ಈ ಎಲ್ಲಾ ಅವಕಾಶದಿಂದಲೇ ನಾನು ಇಂದು ಆರೋಗ್ಯ ಸಚಿವನಾಗಲು ಸಾಧ್ಯವಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಅವರು ದೊಡ್ಡಸಾಗ್ಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ , ನಾವೀಗ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಅದರೆ ಬೇರೆ ಮಾತು ನಾನು ರಾಜಕೀಯದ ಭಾಷಣ ಮಾಡಲು ಬಂದಿಲ್ಲ.ಡಾ.ಜಿ ಪರಮೇಶ್ವರರವರ ಆದರ್ಶದಾಯಕ ಆತ್ಮೀಯ ಮಾತು.ಮೃದು ಸ್ವಭಾವದವರು ಎಲ್ಲರನ್ನೂ ಪ್ರೀತಿ ಮಾಡುವಂತವರು ಎಂದು ಬಣ್ಣಿಸಿದರು.

ಕಳೆದ 2013ರಲ್ಲಿ ಅವರ ಜೊತೆಯಲ್ಲಿಯೇ ಇದ್ದೆ. ನೀವು ಸರಿಯಾಗಿ ಆಶೀರ್ವಾದ ಮಾಡಿದ್ದಿದ್ದರೆ ಈ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದರು. ನಿಮ್ಮ ಮೇಲೆ ಆ ಒಂದು ಬೇಸರವಿದೆ. 2013 ರಲ್ಲಿ ಸೋಲಾಗಿದ್ದು ದುರದೃಷ್ಟ. ನಾವು ಅಂದು ದೊಡ್ಡ ಕನಸನ್ನು ಕಟ್ಟಿಕೊಂಡಿದ್ದೇವು. ಅದರೆ ಭವಿಷ್ಯದಲ್ಲಿ ಅವರಿಗೆ ಉತ್ತಮ ಅವಕಾಶವಿದೆ.ಆ ಭಗವಂತ ಆಶೀರ್ವಾದ ಮಾಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುವೆ ಎಂದರು.

ನಾನು ಎರಡೂ ಬಾರಿ ನಾಮ ಪತ್ರ ಸಲ್ಲಿಸ ಬೇಕಾದಾಗಲೂ ಕೂಡ ಅವರ ಧರ್ಮಪತ್ನಿಯವರೂ ನನಗೆ ತಾಯಿಯ ಸಮಾನರಾಗಿರುವ ಕನ್ನಿಕಾದೇವಿಯವರೂ ಮತ್ತು ಪರಮೇಶ್ವರ್ ಅವರ ಹತ್ತಿರ ಆಶೀರ್ವಾದ ಪಡೆದೇ ನಾಮ ಪತ್ರ ಸಲ್ಲಿಸಿದ್ದೆ. ಅದರೆ 2019 ರ ವೇಳೆಗೆ ನಾನು ಬಿಜೆಪಿಯಿಂದ ನಾಮಪತ್ರ ಸಲ್ಲಿಸುವಾಗಲೂ ಮನಸ್ಸಿನಲ್ಲಿಯೇ ನೆನೆದು ಸಲ್ಲಿಸಿದ್ದೇನೆ. ಇಂದು ಅವರ ಕ್ಷೇತ್ರಕ್ಕೆ ಆರೋಗ್ಯ ಭಾಗ್ಯವನ್ನೂ ಕೋಡುತ್ತಿರುವುದು ನನ್ನ ಭಾಗ್ಯ. ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ.ಪರಮೇಶ್ವರ ಋಣ ತಿರಿಸುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಅವರ ಆತ್ಮೀಯತೆ ಎಂದೂ ಮರೆಯಲೂ ಸಾಧ್ಯವಿಲ್ಲ. ತುಮಕೂರು ಅಭಿವೃದ್ಧಿ ವಿಚಾರದಲ್ಲಿ ಎಂದೂ ರಾಜಿಯಿಲ್ಲ ಎಂದರು.

17 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸುಧಾಕರ್ ಚಾಲನೆ

ಕೊರಟಗೆರೆ ತಾಲೂಕಿನ ದೊಡ್ಡಸಾಗ್ಗೆರೆ, ಬುಕ್ಕಾಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶನಿವಾರ ಏರ್ಪಡಿಸಲಾಗಿದ್ದ 5 ಕೋಟಿ ರೂ. ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೂತನ ಕಟ್ಟಡದ ಉದ್ಘಾಟನೆ ಹಾಗೂ 12 ಕೋಟಿ 50 ಲಕ್ಷ ರೂ. ವೆಚ್ಚದ ತೋವಿನಕೆರೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಮಾತನಾಡಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ನನ್ನ ನಡುವೆ ತಂದೆ-ಮಗನ ಸಂಬಂಧವಿದೆ.ಅವರ ಅಭಿಮಾನಕ್ಕೆ ನಾನು ಅಭಾರಿ ಆಗಿದ್ದೇನೆ. ಆರೋಗ್ಯ ಸೇವೆಯಲ್ಲಿ ಸುಧಾಕರ್ ಜನರು ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ಕೊರೊನಾ ನಿರ್ವಹಣೆಯ ಜವಾಬ್ದಾರಿಯಲ್ಲಿ ಯಶಸ್ಸು ಕಂಡಿದ್ದಾರೆ. ಕೊರಟಗೆರೆಗೆ ಸಾರ್ವಜನಿಕ ಆಸ್ಪತ್ರೆ, ವೈದ್ಯಕೀಯ ತಂಡ ಮತ್ತು ಸಿಬ್ಬಂದಿಗಳನ್ನು ಕೋಟ್ರೇ ನೀವೇ ನನ್ನ ಕ್ಷೇತ್ರದ ನಿಜವಾದ ದೇವರು ಎಂದು ತಿಳಿಸಿದರು.

ಸಮಾರಂಭದಲ್ಲಿ ಮಾಜಿ ಸಚಿವ ಸಿ.ವೀರಣ್ಣ, ಡಿಹೆಚ್‌ಓ ಡಾ.ಮಂಜುನಾಥ, ಟಿಹೆಚ್‌ಓ ವಿಜಯಕುಮಾರ್, ತಹಶೀಲ್ದಾರ್ ನಾಹೀದಾ, ಸ್ವಾತಂತ್ರ ಹೋರಾಟಗಾರ ಕೆ.ಸಿ.ನಾರಾಯಣಪ್ಪ, ಗ್ರಾಪಂ ಅಧ್ಯಕ್ಷ ಶಿವರಾಮು, ರಾಮಯ್ಯ, ಮುಖಂಡರಾದ ಅರಕೆರೆಶಂಕರ್, ಅನಿಲ್‌ಕುಮಾರ್, ಸುಜಯ್.ಪಿ.ಮಂಜುನಾಥ, ವಿನಯ್‌ಕುಮಾರ್ ಸೇರಿದಂತೆ ಇತರರು ಇದ್ದರು.

ಕಾಂಗ್ರೆಸ್-ಬಿಜೆಪಿ ಬೆಂಬಲಿಗರ ಜೈಕಾರ..
ದೊಡ್ಡಸಾಗ್ಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಡಾ.ಜಿ.ಪರಮೇಶ್ವರ್ ಮತ್ತು ಜೈ ಹನುಮಾನ್ ಪರವಾಗಿ ಜೈಕಾರ ಕೊಗಿದರೇ ಬಿಜೆಪಿ ಕಾರ್ಯಕರ್ತರು ನರೇಂದ್ರಮೋದಿ ಮತ್ತು ಜೈಶ್ರೀರಾಮ್ ಪರವಾಗಿ ಘೋಷಣೆ ಕೂಗಿದರು.
ಇದೇ ಸಂದರ್ಭದಲ್ಲಿ ಸಮಾರಂಭದ ಉದ್ಘಾಟನೆಗೆ ಆಗಮಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಕಾಲಿಗೆ ನಮಸ್ಕರಿಸಿ ಆರ್ಶಿವಾದ ಪಡೆದರು.

100 ಬೆಡ್‌ಗಳ ಸರಕಾರಿ ಆಸ್ಪತ್ರೆಯ ಆಶ್ವಾಸನೆ..

ಕೊರಟಗೆರೆ ಪಟ್ಟಣದಲ್ಲಿ 100 ಬೆಡ್‌ಗಳ ಸರಕಾರಿ ಆಸ್ಪತ್ರೆ, ಕೋಳಾಲ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಕೆ, ವೈದ್ಯಕೀಯ ತಂಡ ಮತ್ತು ಸಿಬ್ಬಂದಿಗಳ ನೇಮಕ ಸೇರಿದಂತೆ ಕೊರಟಗೆರೆ ಕ್ಷೇತ್ರಕ್ಕೆ ಅವಶ್ಯಕತೆ ಇರುವಂತಹ ಆರೋಗ್ಯ ಸೇವೆಯನ್ನು ತ್ವರಿತವಾಗಿ ನೀಡುತ್ತೇನೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಕೇಳಿದ ಎಲ್ಲಾ ಬೇಡಿಕೆಯನ್ನು ತ್ವರಿತವಾಗಿ ಪೂರೈಸುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

ಭಾರತ ದೇಶದಲ್ಲಿ 700 ಜನರಿಗೆ ಒಬ್ಬ ವೈದ್ಯರು ಇದ್ದಾರೇ. ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ವಿಶೇಷ ಬದಲಾವಣೆ ಅಗತ್ಯ. ಆರೋಗ್ಯ ಕ್ಷೇತ್ರದ ಬಗ್ಗೆ ಡಾ.ಕೆ.ಸುಧಾಕರ್‌ಗೆ ವಿಶೇಷ ಕಾಳಜಿ ಇದೆ. ಕೊರಟಗೆರೆ ಕ್ಷೇತ್ರದ ಆರೋಗ್ಯ ಕ್ಷೇತ್ರಕ್ಕೆ ಆರೋಗ್ಯ ಸಚಿವರು ವಿಶೇಷ ಅನುಧಾನ ನೀಡಬೇಕಿದೆ. ವೈದ್ಯಕೀಯ ತಂಡ ಮತ್ತು ಸಿಬಂದಿಗಳ ಕೊರತೆ ಪೂರೈಸಿದರೇ ಕೊರಟಗೆರೆ ಕ್ಷೇತ್ರದ ಜನತೆ ನಿಮ್ಮನ್ನು ದೇವರಂತೆ ಪೂಜಿಸುತ್ತಾರೆ- ಡಾ.ಜಿ.ಪರಮೇಶ್ವರ್

ಬುಕ್ಕಾಪಟ್ಟಣ ಬಡಜನರ ಬಹುದಿನದ ಆಸ್ಪತ್ರೆಯ ಬೇಡಿಕೆಯು ಈಗ ನನಸಾಗಿದೆ. ವೈದ್ಯಕೀಯ ಸೇವೆಗೆ ಮತ್ತೊಂದು ಹೆಸರೇ ಡಾ.ಜಿ.ಪರಮೇಶ್ವರ್. ಬಿಜೆಪಿ ಪಕ್ಷದ ಆರೋಗ್ಯ ಸಚಿವರೇ ಪರಮೇಶ್ವರ್‌ರನ್ನ ಮೆಚ್ಚಿ ಹಾಡಿ ಹೋಗಳಿರುವುದೇ ಪ್ರಮುಖ ಸಾಕ್ಷಿ ಅಲ್ಲವೇ. 2023ಕ್ಕೆ ಮತ್ತೆ ಕೊರಟಗೆರೆ ಕ್ಷೇತ್ರದಿಂದ ಪರಮೇಶ್ವರ್‌ಗೆ ಪೂರ್ಣ ಬೆಂಬಲ ಇರಲಿ ಎಂದು ಹಾರೈಸುವೆ.-ಸಿ.ವೀರಣ್ಣ, ಮಾಜಿ ಸಚಿವ. ಕೊರಟಗೆರೆ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.