1,500 ಫಲಾನುಭವಿಗಳಿಗೆ ನನಸಾಗದ ಸೂರಿನ ಕನಸು


Team Udayavani, Mar 9, 2021, 5:40 AM IST

1,500 ಫಲಾನುಭವಿಗಳಿಗೆ ನನಸಾಗದ ಸೂರಿನ ಕನಸು

ಮಹಾನಗರ: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಮಂಜೂರು ಆಗಿರುವ ಎರಡು ಪ್ರಮುಖ ಜಿ-ಪ್ಲಸ್‌ 3 (ಜಿ+3) ಬಹು ಅಂತಸ್ತು ವಸತಿ ಯೋಜನೆಗಳಿಗೆ ಎದುರಾಗಿರುವ ಜಾಗದ ಸಮಸ್ಯೆಯಿಂದ ಸ್ವಂತ ಸೂರು ಪಡೆಯುವ 1,500 ಫಲಾನುಭವಿಗಳ ಕನಸು ಸದ್ಯಕ್ಕೆ ನನಸಾಗುವ ಸಾಧ್ಯತೆ ಕಾಣಿಸುತ್ತಿಲ್ಲ.

ಕೇಂದ್ರ ಸರಕಾರ ಅನುದಾನಿತ ಸರ್ವ ರಿಗೂ ಸೂರು ಯೋಜನೆಯಲ್ಲಿ ಮಹಾನಗರ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಜ್‌ ಯೋಜನೆಯಡಿ ವಸತಿ ರಹಿತರಿಗೆ ನಗರದ ಪದವು ಗ್ರಾಮದ ಶಕ್ತಿನಗರದಲ್ಲಿ ಒಂದು, ಇಡ್ಯಾದಲ್ಲಿ ಎರಡು ಹಾಗೂ ತಿರುವೈಲಿನಲ್ಲಿ ಒಂದು ಜಿ-ಪ್ಲಸ್‌3 ಮಾದರಿಯ ವಸತಿ ಯೋಜನೆಗಳು ಮಂಜೂರಾಗಿತ್ತು. ಇದರಲ್ಲಿ ಇಡ್ಯಾದ 2 ಯೋಜನೆಗಳು ಮಾತ್ರ ಅನುಷ್ಠಾನದಲ್ಲಿದ್ದು, ಉಳಿದಂತೆ ಶಕ್ತಿನಗರ, ತಿರುವೈಲ್‌ ಯೋಜನೆಗಳು ಜಾಗದ ಸಮಸ್ಯೆಯಿಂದಾಗಿ ಅತಂತ್ರ ಸ್ಥಿತಿಯಲ್ಲಿದೆ.

ಪದವು ಗ್ರಾಮದ ಶಕ್ತಿನಗರದ ರಾಜೀವ ನಗರದಲ್ಲಿ ಒಟ್ಟು 930 ಫಲಾನುಭವಿಗಳಿಗೆ ವಸತಿ ನೀಡುವ ಜಿ- ಪ್ಲಸ್‌3 ಮಾದರಿಯ ವಸತಿ ಸಂಕೀರ್ಣ ಯೋಜನೆ ಮಂಜೂರಾಗಿ ಸುಮಾರು 4 ವರ್ಷಗಳಾಗಿವೆ. 3ವರ್ಷಗಳ ಹಿಂದೆ ±ಹಕ್ಕುಪತ್ರ ಕೂಡ ವಿತರಿಸಲಾಗಿತ್ತು.

ನಿವೇಶನಕ್ಕೆ ಆಯ್ಕೆ ಮಾಡಿರುವ ಜಾಗ ಅರಣ್ಯ ಇಲಾಖೆಗೆ ಸೇರಿದ ಕಾರಣದಿಂದಾಗಿ ಸಮಸ್ಯೆ ಎದುರಾಗಿದೆ. ಕಾಮಗಾರಿ ಆರಂಭಿಸುವ ಸಂದರ್ಭ ಅರಣ್ಯ ಇಲಾಖೆಯಿಂದ ಇದಕ್ಕೆ ತಡೆ ಬಂದಿತ್ತು. ಇದೀಗ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಅರಣ್ಯ ಇಲಾಖೆಗೆ ಬದಲಿ ಜಾಗ ಮೀಸಲಿರಿಸುವ ಸಲುವಾಗಿ ತೆಂಕ ಎಡಪದವು ಗ್ರಾಮದಲ್ಲಿ 20 ಎಕ್ರೆ ಜಾಗವನ್ನು ಪಾಲಿಕೆಗೆ ಪಡೆದುಕೊಳ್ಳುವ ಪ್ರಸ್ತಾವನೆ ರೂಪಿಸಲಾಗಿದೆ. ಇದಕ್ಕೆ ಕೇಂದ್ರ ಅರಣ್ಯ, ಪರಿಸರ ಇಲಾಖೆ ಅನುಮತಿಯೂ ಅಗತ್ಯವಿದೆ. ಇದೆಲ್ಲಾ ಮುಗಿದು ಯೋಜನೆ ಯಾವಾಗ ಕಾರ್ಯಗತಗೊಳ್ಳುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದೇ ರೀತಿ ತಿರುವೈಲು ಗ್ರಾಮದಲ್ಲಿ 600 ಫಲಾನುಭವಿ ಗಳನ್ನು ಆಯ್ಕೆ ಮಾಡಿ ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆಯಲ್ಲಿ ಜಿ-ಪ್ಲಸ್‌3 ಮಾದರಿಯಲ್ಲಿ ವಸತಿ ಸಂಕೀರ್ಣ ನಿರ್ಮಿಸಲು ನಿರ್ಧರಿಸಲಾಗಿತ್ತು. ಈ ಜಾಗದಲ್ಲಿ ವಸತಿ ನಿರ್ಮಿಸಲು ತಾಂತ್ರಿಕ ಸಮಸ್ಯೆ ನಿರ್ಮಾಣ
ವಾಗಿರುವ ಕಾರಣ ಈ ಜಾಗವನ್ನು ಕೈಬಿಟ್ಟು ಬೇರೆ ಕಡೆ ಜಾಗ ಹೊಂದಿಸಿಕೊಳ್ಳಲು ನಿರ್ಧರಿಸಲಾಗಿದೆ. ಇದಕ್ಕೆ ಬದಲಿ ಜಾಗ ಒದಗಿಸಿಕೊಡುವಂತೆ ಮಂಗಳೂರು ಸಹಾಯಕ ಆಯುಕ್ತರನ್ನು ಕೋರಲಾಗಿದೆ.

ಇಡ್ಯಾದಲ್ಲಿ 2 ಯೋಜನೆಗಳು ಪ್ರಗತಿಯಲ್ಲಿ
ಇಡ್ಯಾದಲ್ಲಿ ಜಿ-ಪ್ಲಸ್‌3 ಮಾದರಿಯ ಎರಡು ವಸತಿ ಸಂಕೀರ್ಣ ನಿರ್ಮಾಣ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಗ್ರಾಮದ ಸರ್ವೇ ನಂ.16 ಪಿ1ರಲ್ಲಿ 600 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಸರ್ವರಿಗೂ ಸೂರು ಯೋಜನೆಯಲ್ಲಿ ಎಎಚ್‌ಪಿ (ಅರ್ಪೊರ್ಡೆಬಲ್‌ ಹೌಸಿಂಗ್‌ ಇನ್‌ ಪಾಟ್ನರ್‌ಶಿಪ್‌) ಜಿ -ಪ್ಲಸ್‌3 ಮಾದರಿಯಲ್ಲಿ 600 ಮನೆಗಳನ್ನು ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಕೇಂದ್ರ ಸರಕಾರದಿಂದ 1ನೇ ಕಂತಿನ ಅನುದಾನ 3.60 ಕೋ.ರೂ. ಮಂಜೂರಾಗಿದ್ದೆ ಇದರಲ್ಲಿ 1,44,20,613 ರೂ. ಈಗಾಗಲೇ ನಿರ್ಮಾಣ ಕಾಮಗಾರಿಗೆ ಪಾವತಿಸಲಾಗಿದೆ. ಇನ್ನೊಂದು ಯೋಜನೆಯಲ್ಲಿ 192 ಫಲಾನುಭವಿಗಳಿಗೆ ಜಿ – ಪ್ಲಸ್‌3 ವಸತಿ ಸಂಕೀಣ ನಿರ್ಮಿಸಿ ಪ್ರಧಾನ್‌ ಮಂತ್ರಿ ಅವಾಸ್‌ ಯೋಜನೆಯಡಿ ವಿತರಿಸುವ ಯೋಜನೆಗೆ ಈಗಾಗಲೇ ಅನುಮೋದನೆ ದೊರಕಿದೆ. ಪರಿಷ್ಕೃತ ಯೋಜನ ವರದಿಯನ್ನು ರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ಟೆಂಡರ್‌ ಕರೆಯಲಾಗಿದೆ.

ಪ್ರಕ್ರಿಯೆಗಳು ಪ್ರಗತಿಯಲ್ಲಿವೆ
ಶಕ್ತಿನಗರದಲ್ಲಿ ಜಿ+3 ವಸತಿ ಸಂಕೀರ್ಣಕ್ಕೆ ಸಂಬಂಧ ಪಟ್ಟಂತೆ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ. ಅರಣ್ಯ ಇಲಾಖೆಗೆ ಪ್ರತಿಯಾಗಿ ಬೇರೆ ಕಡೆ 20 ಎಕ್ರೆ ಜಾಗ ನೀಡುವ ಪ್ರಸ್ತಾವ ಒಪ್ಪಿಗೆಯಾಗಿ ಇದನ್ನು ಪಾಲಿಕೆ ಮೂಲಕ ರಾಜ್ಯ ಸರಕಾರಕ್ಕೆ ಕಳುಹಿಸಿ ಕೊಡ ಲಾಗಿದೆ. ಬಳಿಕ ಇದು ಬೆಂಗಳೂರಿನಲ್ಲಿರುವ ಕೇಂದ್ರ ಅರಣ್ಯ, ಪರಿಸರ ಇಲಾಖೆ ಕಚೇರಿಗೆ ಅನುಮೋದನೆಗೆ ಹೋಗಲಿದೆ. ಬಳಿಕ ನಿರ್ಮಾಣಕ್ಕೆ ಚಾಲನೆ ದೊರಕಲಿದೆ.
-ವೇದವ್ಯಾಸ ಕಾಮತ್‌, ಶಾಸಕರು

– ಕೇಶವ ಕುಂದರ್‌

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.