Anantapuram: ನಿಯಂತ್ರಣ ತಪ್ಪಿ ಲಾರಿ ಪಲ್ಟಿ…ಚಾಲಕ, ಕ್ಲೀನರ್ ಹಾಗೂ 40 ಜಾನುವಾರು ಸಾವು!
ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ
Team Udayavani, Feb 7, 2024, 1:46 PM IST
ಹೈದರಾಬಾದ್: ಮಿತಿಮೀರಿದ ವೇಗದಿಂದಾಗಿ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಲಾರಿ ಚಾಲಕ, ಕ್ಲೀನರ್ ಹಾಗೂ 40 ಹಸುಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Protest: ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ, ತೆರಿಗೆ ಪಾಲು ತಾರತಮ್ಯದ ಬಗ್ಗೆ: ಸಿದ್ದರಾಮಯ್ಯ
ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಸಮೀಪ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಚಾಲಕ ಮತ್ತು ಕ್ಲೀನರ್ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ ಎಂದು ವರದಿ ತಿಳಿಸಿದೆ.
ಹಸುಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿದ್ದು, ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವರದಿ ವಿವರಿಸಿದೆ.
ಕ್ರೇನ್ ನೆರವಿನಿಂದ ಹಸುಗಳ ಶವಗಳನ್ನು ಮೇಲಕ್ಕೆತ್ತಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿರುವುದಾಗಿ ಪಾಮಿಡಿ ಸರ್ಕಲ್ ಇನ್ಸ್ ಪೆಕ್ಟರ್ ರೋಶನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್