ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ
Team Udayavani, May 27, 2024, 12:39 AM IST
ಮಂಗಳೂರು: ಶುಕ್ರವಾರ ತಡರಾತ್ರಿ ಸುರಿದ ಭಾರೀ ಮಳೆಗೆ ಕೊಟ್ಟಾರಚೌಕಿಯಲ್ಲಿ ತುಂಬಿ ಹರಿಯುತ್ತಿದ್ದ ರಾಜಕಾಲುವೆಗೆ ಆಟೋರಿಕ್ಷಾ ಬಿದ್ದು ಚಾಲಕ ಮೃತಪಟ್ಟ ಘಟನೆಯ ಅನಂತರ ಸ್ಥಳದಲ್ಲಿ ತಾತ್ಕಾಲಿಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ತಾತ್ಕಾಲಿಕ ಮುನ್ನೆಚ್ಚರಿಕೆ ಕ್ರಮವಾಗಿ, ಮರಳು ತುಂಬಿದ ಚೀಲ, ಬ್ಯಾರಿಕೇಡ್, ರಿಫ್ಲೆಕ್ಟರ್ ಟೇಪ್ ಅಳವಡಿಸಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್, ಆಯುಕ್ತರು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತ ನಡೆದಿರುವ ಕಾಲುವೆ ಸೇರಿದಂತೆ ನಗರದಲ್ಲಿ ಈ ರೀತಿ ಅಪಾಯಕಾರಿಯಾಗಿರುವ ಎಲ್ಲ ರಾಜಕಾಲುವೆಗಳ ಪಕ್ಕದ ರಸ್ತೆಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಬಲವಾಗಿದೆ.
ಪರಿಶೀಲನೆ ಬಳಿಕ ಪರಿಹಾರ
ಮೃತಪಟ್ಟ ಆಟೋರಿಕ್ಷಾ ಚಾಲಕ ದೀಪಕ್ ಆಚಾರ್ಯ ಅವರ ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪ ಪರಿಹಾರ ಸದ್ಯ ನೀಡಿಲ್ಲ. ಕೆಲವು ಪ್ರಕರಣಗಳಲ್ಲಿ ಘಟನೆ ನಡೆದ 24 ಗಂಟೆಗಳೊಳಗೆ ಪರಿಹಾರ ಧನ ನೀಡಲಾಗುತ್ತದೆ. ಆದರೆ ಇನ್ನು ಕೆಲವು ಘಟನೆಗಳಲ್ಲಿ ಕೂಡಲೇ ಪರಿಹಾರ ನೀಡುವುದಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್, ಇನ್ಶೂರೆನ್ಸ್ ಮೊದಲಾದ ವಿಚಾರಗಳನ್ನು ಪರಿಶೀಲಿಸಿ ಅನಂತರ ಪರಿಹಾರ ನೀಡುವ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.