ಪ್ರಧಾನಿ ಮೋದಿಯನ್ನು ಕೊಲೆ ಮಾಡುವುದಾಗಿ ದೆಹಲಿ ಪೊಲೀಸರಿಗೆ ಬೆದರಿಕೆ ಕರೆ : ಆರೋಪಿಯ ಬಂಧನ
Team Udayavani, Nov 26, 2020, 12:59 PM IST
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ದೆಹಲಿಯ ಪೊಲೀಸ್ ಠಾಣೆಗೆ ಬೆದರಿಕೆ ಕರೆಯೊಂದು ಬಂದ ಪರಿಣಾಮ ದೆಹಲಿ ಪೊಲೀಸ್ ಠಾಣೆಯಲ್ಲಿ ಭಾರಿ ಸಂಚಲನ ಮೂಡಿಸಿತು.
ಗುರುವಾರ ಬೆಳಿಗ್ಗೆ ದಕ್ಷಿಣ ದೆಹಲಿಯ ಪೊಲೀಸ್ ಠಾಣೆಗೆ ಅನಾಮದೇಯ ಕರೆಯೊಂದು ಬಂದಿದ್ದು ಅದರಲ್ಲಿ ಮಾತನಾಡಿದ ವ್ಯಕ್ತಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ.
ಬೆದರಿಕೆ ಕರೆ ಬಂದ ಕೂಡಲೇ ಎಚ್ಚೆತ್ತ ಪೊಲೀಸ್ ಇಲಾಖೆ ಕರೆ ಬಂದ ಮೂಲಗಳನ್ನು ಪತ್ತೆ ಹಚ್ಚಲು ಶುರುಮಾಡಿದ್ದಾರೆ ಅಷ್ಟೋತ್ತಿಗೆ ಬೆದರಿಕೆ ಕರೆ ಬಂದಿದ್ದು ದೆಹಲಿಯ ದಕ್ಷಿಣಪುರಿ ಪ್ರದೇಶದಿಂದ ಎಂಬುದು ತಿಳಿದುಬಂದಿದೆ ಕೂಡಲೇ ಅಲ್ಲಿಗೆ ಹೋರಾಟ ಪೋಲೀಸರ ತಂಡ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಫ್ರೂಟ್ ಇರ್ಫಾನ್ ಕೊಲೆ ಆರೋಪಿ ಸೆರೆ : ದಯಾನಾಯಕ್ ನೇತೃತ್ವದ ತಂಡದಿಂದ ಕಾರ್ಯಾಚರಣೆ
ಬಂಧಿತ ವ್ಯಕ್ತಿಯನ್ನು ನಿತಿನ್ ಎಂದು ಗುರುತಿಸಲಾಗಿದ್ದು ಪೋಲೀಸರ ಹೇಳಿಕೆಯಂತೆ ವ್ಯಕ್ತಿಯನ್ನು ಬಂಧಿಸುವ ಸಂದರ್ಭ ಮದ್ಯದ ನಶೆಯಲ್ಲಿದ್ದುದು ಕಂಡು ಬಂದಿದೆ, ಮದ್ಯದ ನಶೆಯಲ್ಲಿಯೇ ಬೆದರಿಕೆ ಹಾಕಿರುವುದಾಗಿ ವ್ಯಕ್ತಿ ತಪ್ಪು ಒಪ್ಪಿಕೊಂಡಿದ್ದಾನೆ. ತನಿಖೆಯನ್ನು ಮುಂದುವರೆಸಿದ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ