ರಾಜ್ಯದಲ್ಲೂ ಇ-ಹುಂಡಿ ವ್ಯವಸ್ಥೆ
Team Udayavani, Sep 13, 2019, 6:05 AM IST
ತ.ನಾಡಿನ ಶ್ರೀರಂಗನಲ್ಲಿರುವ ಇ-ಹುಂಡಿ
ಬೆಂಗಳೂರು: ದೇವಸ್ಥಾನದ ಹುಂಡಿಗೆ ಇನ್ನು ಮುಂದೆ ನೀವು ಹಾಕುವ ಪ್ರತಿ ಪೈಸೆ ಕಾಣಿಕೆಗೂ ಲೆಕ್ಕ ಸಿಗಲಿದೆ. ಒಂದೊಂದು ರೂಪಾಯಿಗೂ ರಶೀದಿ ಸಿಗಲಿದೆ.
ಇಂಥದ್ದೊಂದು ಎಲೆಕ್ಟ್ರಾನಿಕ್ ಹುಂಡಿ ವ್ಯವಸ್ಥೆಯನ್ನು ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಅಳವಡಿಸಲು ಸರ್ಕಾರ ನಿರ್ಧರಿಸಿದೆ. ಆರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಸೇರಿದಂತೆ ಆಯ್ದ 10- 15 ದೇವಸ್ಥಾನಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಬರಲಿದೆ.
‘ಇ- ಆಡಳಿತ’ ಇಲಾಖೆ ಹಾಗೂ ಖಾಸಗಿ ಸಂಸ್ಥೆಯೊಂದರ ಸಹಯೋಗದಲ್ಲಿ ಸುಧಾರಿತ ‘ಇ-ಹುಂಡಿ’ ವ್ಯವಸ್ಥೆ ಅಳವಡಿಕೆಗೆ ಇಲಾಖೆ ಪ್ರಯತ್ನ ನಡೆಸಿದೆ. ಖಾಸಗಿ ಸಂಸ್ಥೆ ಸುಧಾರಿತ ಸಾಧನವನ್ನು ಅಭಿವೃದ್ಧಿಪಡಿಸಿದ್ದು, ತಮಿಳುನಾಡಿನ 25ಕ್ಕೂ ಹೆಚ್ಚು ದೇವಸ್ಥಾನದಲ್ಲಿ ಅಳವಡಿಸಿದೆ. ಭಕ್ತರು ಹಾಕುವ ಕಾಣಿಕೆ, ನಾಣ್ಯ, ನೋಟುಗಳನ್ನು ಮೌಲ್ಯಮಾಪನ ಮಾಡುವ, ರಸೀದಿ ನೀಡುವ ಹಾಗೂ ಆಯಾ ದಿನವೇ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.
ಸದ್ಯಕ್ಕೆ ನಾಣ್ಯ, ನೋಟು, ನೋಟಿನ ಕಂತೆ ಸ್ವೀಕಾರ ವ್ಯವಸ್ಥೆ ಇದೆ. ಹರಕೆ ಚಿನ್ನ, ಬೆಳ್ಳಿ ಕಾಣಿಕೆಯನ್ನು ಮೌಲ್ಯಮಾಪನ ಮಾಡುವ ವ್ಯವಸ್ಥೆ ಅಳವಡಿಕೆ ಸಾಧ್ಯಾಸಾಧ್ಯತೆ ಬಗ್ಗೆಯೂ ಚರ್ಚೆ ನಡೆದಿದೆ. ಒಟ್ಟಾರೆ ದೇವಸ್ಥಾನಕ್ಕೆ ಭಕ್ತರು ನೀಡುವ ಕಾಣಿಕೆಯ ಪ್ರತಿ ಪೈಸೆಯ ಲೆಕ್ಕ ಪಡೆಯಲು ಸುಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಇಲಾಖೆ ಸಜ್ಜಾಗಿದೆ.
ಸಚಿವರಿಗೆ ಪ್ರಾತ್ಯಕ್ಷಿಕೆ: ವಿಕಾಸಸೌಧದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಡೆಸಿದ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿದೆ. ಸಭೆ ಬಳಿಕ ಮಾತನಾಡಿದ ಅವರು, ಹುಂಡಿಗೆೆ ಹಾಕುವ ಪ್ರತಿ ಪೈಸೆಯ ಲೆಕ್ಕ ಸಿಗಲಿದೆ ಎಂದರು. ಜತೆಗೆ ಇ-ಹುಂಡಿಗೆ ಸಂಗ್ರಹವಾಗುವ ಹಣದ ಮೌಲ್ಯ ಅದೇ ದಿನ ಸಂಬಂಧಪಟ್ಟ ರಾಷ್ಟ್ರೀಕೃತ ಬ್ಯಾಂಕ್ನ ನಿರ್ದಿಷ್ಟ ಖಾತೆಗೆ ಜಮೆಯಾಗುವ ವ್ಯವಸ್ಥೆ ಇರಲಿದೆ ಎಂದು ಹೇಳಿದರು.
ಹೇಗಿರುತ್ತೆ ಇ-ಹುಂಡಿ?
ಸುಮಾರು 5.5 ಅಡಿ ಎತ್ತರದ 300 ಕೆ.ಜಿ. ತೂಕದ ಸಾಧನ ಎಟಿಎಂ ಯಂತ್ರದ ಮಾದರಿಯಲ್ಲಿರುತ್ತದೆ. ನಾಣ್ಯ, ನೋಟುಗಳನ್ನು ಹಾಕುತ್ತಿದ್ದಂತೆ ಲೆಕ್ಕ ಹಾಕಿ ರಸೀದಿ ನೀಡಲಿದೆ. ಉನ್ನತ ಅಧಿಕಾರಿಗಳು ಕುಳಿತಲ್ಲೇ ನಿರ್ದಿಷ್ಟ ದೇವಾಲಯದ ‘ಇ-ಹುಂಡಿ’ಯಲ್ಲಿನ ಕಾಣಿಕೆ ಮೊತ್ತದ ವಿವರ ಪಡೆಯಲು ಅವಕಾಶವಿರಲಿದೆ. ಸಾಧನವನ್ನು ಹಾನಿಪಡಿಸಲು, ಹಣ ದೋಚಲು ಯತ್ನಿಸಿದರೆ ಎಚ್ಚರಿಕೆ ಗಂಟೆ ಮೊಳಗುವ ವ್ಯವಸ್ಥೆಯೂ ಇರಲಿದೆ. ನಾನಾ ಸೇವಾ ಕಾರ್ಯಗಳಿಗೆ ಶುಲ್ಕ ಪಾವತಿಸಿ ರಸೀದಿ ಪಡೆಯಲು ಅವಕಾಶವಿರುತ್ತದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ