ಮೂರು ತ್ತೈಮಾಸಿಕ: ಸಹಜ…ಸುರಕ್ಷಿತ ಹೆರಿಗೆಗೆ ಸುಲಭ ಯೋಗ

ಉತ್ಕಟಾಸನ ಮಾಡುವುದರಿಂದ ಗರ್ಭಿಣಿಯರ ಸ್ನಾಯುಗಳು ಬಲಗೊಳ್ಳುತ್ತವೆ.

Team Udayavani, Jan 1, 2021, 4:32 PM IST

 ಮೂರು ತ್ತೈಮಾಸಿಕ: ಸಹಜ…ಸುರಕ್ಷಿತ ಹೆರಿಗೆಗೆ ಸುಲಭ ಯೋಗ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಅನೇಕ ವಿಧದ ಆರೋಗ್ಯ, ಮಾನಸಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಉದಾಹರಣೆಗೆ ಕಾಲು ಸೆಳೆತ, ಉಸಿರಾಟದ ತೊಂದರೆಗಳು, ಆತಂಕ, ಖಿನ್ನತೆ ಇತ್ಯಾದಿ. ಆದರೆ ಯೋಗದ ಮೂಲಕ ಇದನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಿದೆ. ಜತೆಗೆ ತಮ್ಮ ದೇಹ ಮತ್ತು ಮನಸ್ಸು ಮಾತ್ರವಲ್ಲ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯವನ್ನೂ ಕಾಪಾಡಬಹುದು ಹಾಗೂ ಸುಲಭ ಹಾಗೂ ಸುರಕ್ಷಿತ ಹೆರಿಗೆಗೆ ಇದು ಸಹಕಾರಿಯಾಗುತ್ತದೆ.

ಗರ್ಭಿಣಿಯಾದ ತತ್‌ಕ್ಷಣ ಯೋಗ ಪ್ರಯೋಗ ಮಾಡಬಾರದು. ಮಗು ಪಡೆಯುವ ಯೋಜನೆ ಇದ್ದರೆ ಕೂಡಲೇ ಮಾರ್ಗದರ್ಶಕರ ಸಹಾಯದಿಂದ ಯೋಗ ಪ್ರಾರಂಭಿಸಬಹುದು. ಗರ್ಭಧಾರಣೆಯ ಅನಂತರ ಮಾಡಬಹುದಾದ ಯೋಗ ಭಂಗಿಗಳ ಬಗ್ಗೆ ಮೊದಲೇ ತಜ್ಞರಿಂದ ಕೇಳಿ ತಿಳಿಯಿರಿ. ಹೊಸ ಭಂಗಿಗಳನ್ನು
ಪ್ರಯೋಗ ಮಾಡಿ ನೋಡುವುದು ಸರಿಯಲ್ಲ. ಪ್ರತೀ ಮೂರು ತ್ತೈಮಾಸಿಕದಲ್ಲಿ ಅಭ್ಯಾಸ ಮಾಡುವ ಭಂಗಿಗಳು ಬೇರೆಬೇರೆ ಇರುತ್ತವೆ.

ಜತೆಗೆ ತನ್ನ ಆರೋಗ್ಯದ ಇತಿಹಾಸವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಆರಂಭದ ಮೂರು ತಿಂಗಳು ಹೆಚ್ಚು ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಕೆಲವೊಂದು ಯೋಗ ಭಂಗಿಗಳನ್ನು ಹೆಚ್ಚಾಗಿ ತಜ್ಞರು ಗರ್ಭಿಣಿಯರಿಗೆ ಶಿಫಾರಸು ಮಾಡುತ್ತಾರೆ. ಅವುಗಳ ಕುರಿತ ಮಾಹಿತಿ ಇಲ್ಲಿದೆ. ಈ ಭಂಗಿಗಳು ಭ್ರೂಣದ ಆರೋಗ್ಯಕರ ಬೆಳವಣಿಗೆಗೆ, ಗರ್ಭಾಶಯದ ಜಾಗ ಹೆಚ್ಚಿಸಲು, ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಲ್ಲದೇ ನಿಯಮಿತ ವ್ಯಾಯಾಮ ಮಾಡುವುದರಿಂದ ಮನಸ್ಸು ಶಾಂತವಾಗಿರುತ್ತದೆ.

*ವೃಕ್ಷಾಸನವನ್ನು ಗರ್ಭಿಣಿಯರು ಮಾಡಬಹುದು. ಇದರಿಂದ ಕಿಬ್ಬೊಟ್ಟೆಯ ಅಂಗಗಳಿಗೆ ಮಸಾಜ್‌ ದೊರೆತು ಬೆನ್ನು, ಕಾಲು, ಕುತ್ತಿಗೆ ಮೇಲಿನ ಒತ್ತಡ ನಿವಾರಣೆಯಾಗುವುದು.

*ಉತ್ಕಟಾಸನ ಮಾಡುವುದರಿಂದ ಗರ್ಭಿಣಿಯರ ಸ್ನಾಯುಗಳು ಬಲಗೊಳ್ಳುತ್ತವೆ. ಇದು ಸಹಜ ಹೆರಿಗೆಗೆ ಸಹಕಾರಿಯಾಗುತ್ತದೆ.

*ಸಾಮಾನ್ಯವಾಗಿ ಗರ್ಭಿಣಿಯರು ಹೆಚ್ಚು ತಿನ್ನುವ ಪರಿಪಾಠವಿದೆ. ಇದರ ಅಗತ್ಯವಿಲ್ಲದಿದ್ದರೂ ಪದೇಪದೇ ಕಾಡುವ ಸುಸ್ತು, ಹಸಿವಿನಿಂದಾಗಿ ಏನಾದರೂ
ತಿನ್ನುವ ಬಯಕೆಯಾಗುವುದು ಸಹಜ. ಇದರಿಂದ ದೇಹದಲ್ಲಿ ಹೆಚ್ಚಿನ ಕೊಬ್ಬು ಶೇಖರಣೆಯಾಗುವುದು. ಕೋನಾಸನವು ಸೊಂಟ ಮತ್ತು ದೇಹದ ಕೊಬ್ಬನ್ನು ನಿಯಂತ್ರಣದಲ್ಲಿರಿಸುತ್ತದೆ.

* ಪ್ರಾಯಾಂಕಾಸನ, ಹಸ್ತ ಪಾದಾಂಗುಷ್ಟಾಸನ ಕಿಬ್ಬೊಟ್ಟೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.

*ದೇಹದೊಳಗಿನ ಅಂಗಾಂಗಗಳಿಗೆ ಬಲ ಒದಗಿಸುವ ಭದ್ರಾಸನವು ಸಹಜ ಹೆರಿಗೆಗೆ ಸಹಕಾರಿಯಾಗುತ್ತದೆ.

*ಪರ್ವತಾಸನವು ದೇಹಕ್ಕೆ ಶಕ್ತಿ ತುಂಬುತ್ತದೆ ಮತ್ತು ಬೆನ್ನು ನೋವು ನಿವಾರಣೆಗೆ ಸಹಕಾರಿ.

*ಯಷ್ಠಿಕಾಸಾನವು ದೇಹದ ಭಂಗಿಯನ್ನು ಸರಿಪಡಿಸಿ ದೇಹ ಹಿಗ್ಗಲು, ಒತ್ತಡವನ್ನೂ ನಿವಾರಿಸಲು ಸಹಕಾರಿ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.