ಸೋಂಕಿನ ವಿರುದ್ಧ ಹೆಚ್ಚು ಲಸಿಕೆ ನೀಡುವುದರಿಂದ ಅರ್ಥ ವ್ಯವಸ್ಥೆ ಚೇತರಿಕೆ ಕಾಣಲಿದೆ
Team Udayavani, Jun 18, 2021, 7:20 AM IST
ಮುಂಬಯಿ: ಕೊರೊನಾ ಸೋಂಕಿನ ವಿರುದ್ಧ ಹೆಚ್ಚುತ್ತಿರುವ ಲಸಿಕೆ ನೀಡಿಕೆಯಿಂದಾಗಿ ಅರ್ಥ ವ್ಯವಸ್ಥೆ ಚೇತರಿಕೆ ಕಾಣಲಿದೆ. ಹೀಗೆಂದು ಆರ್ಬಿಐನ ಅರ್ಥ ವ್ಯವಸ್ಥೆಯ ಮುನ್ನೋಟದಲ್ಲಿ ವಿಶ್ವಾಸ ವ್ಯಕ್ತಪಡಿಸಲಾಗಿದೆ.
2ನೇ ಅಲೆಯಿಂದಾಗಿ ವಿವಿಧ ಕ್ಷೇತ್ರಗಳಲ್ಲಿನ ಬೇಡಿಕೆ ಮೇಲೆ ಪ್ರತಿಕೂಲ ಉಂಟಾಗಿದೆ. ಸದ್ಯ, ಸೋಂಕಿನ ಪರಿಸ್ಥಿತಿ ಚೇತರಿಸಿಕೊಳ್ಳುತ್ತಿರುವುದರಿಂದ ಅದು ನಿಧಾನಕ್ಕೆ ಸುಧಾರಿಸಲಿದೆ ಎಂದು ಆರ್ಬಿಐ ಪ್ರತಿಪಾದಿಸಿದೆ.
ಕೇಂದ್ರ ಸರಕಾರ ಅಥವಾ ಆರ್ಬಿಐ ವತಿಯಿಂದ ಸೋಂಕಿನ 2ನೇ ಅಲೆಯಿಂದ ಉಂಟಾಗಲಿರುವ ಸಂಭಾವ್ಯ ನಷ್ಟದ ಮೊದಲ ಅಧ್ಯಯನ ಇದಾಗಿದೆ. ಕೃಷಿ ಕ್ಷೇತ್ರದಲ್ಲಿ, ರಫ್ತು, ಕೈಗಾರಿಕಾ ಉತ್ಪಾದನೆ, ಸಂಪರ್ಕ ರಹಿತ ಸೇವಾ ಕ್ಷೇತ್ರದಲ್ಲಿ ಸೋಂಕಿನ ಪ್ರತಿಕೂಲ ಪ್ರಭಾವ ಇದ್ದರೂ, ಉತ್ತಮ ಚೇತರಿಕೆ ಉಂಟಾಗಿದೆ ಎಂದು ಆರ್ಬಿಐ ಮುನ್ನೋಟದಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕಿನ 2ನೇ ಅಲೆಯಿಂದ ಪ್ರಸಕ್ತ ವಿತ್ತೀಯ ವರ್ಷದಲ್ಲಿ 2 ಲಕ್ಷ ಕೋಟಿ ರೂ. ನಷ್ಟ ಉಂಟಾಗಲಿದೆ. ಜನರು ಕೂಡಿಟ್ಟ ಹಣ ಕಡಿಮೆಯಾಗಲಿದೆ ಮತ್ತು ಆರೋಗ್ಯಕ್ಕಾಗಿನ ವೆಚ್ಚ ಏರಿಕೆಯಾಗಲಿದೆ ಎಂದು ಆರ್ಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್ಗೆ ಅಮೆರಿಕ ಸಲಹೆ
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ