ಜಮ್ಮು ಕಾಶ್ಮೀರದಲ್ಲಿ ಶಾಂತಿ ಕದಡುವ ಯತ್ನಕ್ಕೆ ಅವಕಾಶ ಸಲ್ಲದು


Team Udayavani, Jun 28, 2021, 7:00 AM IST

ಜಮ್ಮು ಕಾಶ್ಮೀರದಲ್ಲಿ ಶಾಂತಿ ಕದಡುವ ಯತ್ನಕ್ಕೆ ಅವಕಾಶ ಸಲ್ಲದು

ಜಮ್ಮು ವಿಮಾನ ನಿಲ್ದಾಣದ ಭಾರತೀಯ ವಾಯುಪಡೆ ಕೇಂದ್ರವನ್ನು ಗುರಿ ಯಾಗಿಸಿ ಭಯೋತ್ಪಾದಕರು ಶನಿವಾರ ತಡರಾತ್ರಿ ಡ್ರೋನ್‌ ದಾಳಿ ನಡೆಸಿದ್ದಾರೆ. ಈವರೆಗೆ ಸಾಂಪ್ರದಾಯಿಕ ಮಾದರಿಯಲ್ಲಿ ಭಯೋತ್ಪಾದನ ಕೃತ್ಯಗಳನ್ನು ಎಸಗುತ್ತಿದ್ದ ಉಗ್ರರು ಇದೀಗ ಸುಧಾರಿತ ತಂತ್ರಜ್ಞಾನಗಳನ್ನು ತಮ್ಮ ದುಷ್ಕೃತ್ಯ ಗಳಿಗೆ ಬಳಸಲಾರಂಭಿಸಿರುವುದು ತೀರಾ ಆತಂಕಕಾರಿ ಬೆಳವಣಿಗೆಯಾಗಿದೆ.

ಪಾಕಿಸ್ಥಾನ ಗಡಿಯಿಂದ ಸುಮಾರು 14 ಕಿ.ಮೀ.ಗಳಷ್ಟು ವಾಯು ದೂರದಲ್ಲಿರುವ ಸತ್ವಾರಿ ಪ್ರದೇಶದಲ್ಲಿ ಜಮ್ಮು ವಿಮಾನ ನಿಲ್ದಾಣವಿದ್ದು ಈ ನಿಲ್ದಾಣ ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದೆ. ಶನಿವಾರ ತಡರಾತ್ರಿ ಗಂಟೆ 1.37ರಿಂದ 1.43ರ ನಡುವಣ ಆರು ನಿಮಿಷಗಳ ಅಂತರದಲ್ಲಿ ಎರಡು ಡ್ರೋನ್‌ಗಳು ವಾಯುಪಡೆಯ ನೆಲೆಯನ್ನು ಗುರಿಯಾಗಿಸಿ ದಾಳಿ ನಡೆಸಿದವು. ಒಂದು ಡ್ರೋನ್‌ ವಾಯುಪಡೆ ಕೇಂದ್ರದ ಮೇಲೆ ಸ್ಫೋಟಕವನ್ನು ಬೀಳಿಸಿದ ಪರಿಣಾಮ ಒಂದಸ್ತಿನ ಕಟ್ಟಡದ ಛಾವಣಿ ಧ್ವಂಸವಾದರೆ ಮತ್ತೂಂದು ಡ್ರೋನ್‌ ಒಂದು ಕಿ.ಮೀ. ದೂರದ ಬಯಲು ಪ್ರದೇಶದಲ್ಲಿ ಸ್ಫೋಟಕವನ್ನು ಬೀಳಿಸಿದ್ದರಿಂದಾಗಿ ಯಾವುದೇ ಹಾನಿಯಾಗಿಲ್ಲ. ಈ ದಾಳಿಯಲ್ಲಿ ಭಾರತೀಯ ವಾಯುಪಡೆಯ ಇಬ್ಬರು ಸಿಬಂದಿಗೆ ಗಾಯಗಳಾಗಿವೆ.

ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರಕಾರ ಸಮಗ್ರ ತನಿಖೆಗೆ ಆದೇಶಿಸಿದೆ. ಭಾರತೀಯ ವಾಯುಪಡೆ, ಎನ್‌ಐಎ ಸಹಿತ ಉನ್ನತ ತನಿಖಾ ಸಂಸ್ಥೆಗಳು ದಾಳಿಯ ತನಿಖೆಯನ್ನು ಕೈಗೆತ್ತಿಕೊಂ ಡಿದ್ದು ದಾಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕಲೆಹಾಕಲಾರಂಭಿಸಿವೆ. ಇದೊಂದು ಭಯೋತ್ಪಾದಕ ದಾಳಿ ಎಂದು ಜಮ್ಮು ಪೊಲೀಸರು ಈಗಾಗಲೇ ದೃಢಪಡಿಸಿದ್ದಾರೆ. ಇದೇ ವೇಳೆ ರವಿವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ನರ್ವಾಲ್‌ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಪೊಲೀಸರು ಉಗ್ರನೋರ್ವನನ್ನು ಬಂಧಿಸಿ ಆತನಿಂದ 5 ಕೆ.ಜಿ. ಐಇಡಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಸ್ಫೋಟಕಗಳನ್ನು ಜನನಿಬಿಡ ಪ್ರದೇಶದಲ್ಲಿ ಸ್ಫೋಟಿಸುವ ಸಂಚು ರೂಪಿಸಿದ್ದುದಾಗಿ ಬಂಧಿತ ಉಗ್ರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಗೊಳಿಸಿ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಎರಡು ವರ್ಷ ಗಳ ಬಳಿಕ ಕೇಂದ್ರ ಸರಕಾರ ಅಲ್ಲಿ ಚುನಾವಣೆ ನಡೆಸಲು ಸಿದ್ಧತೆಗ ಳನ್ನು ಆರಂಭಿಸಿರುವಾಗಲೇ ಭಯೋತ್ಪಾದಕರು ಈ ಕೃತ್ಯ ಎಸಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ವಿಶೇಷ ಸ್ಥಾನಮಾನವನ್ನು ರದ್ದುಗೊಳಿ ಸಿದ ಬಳಿಕ ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿತ್ತಲ್ಲದೆ ಪರಿಸ್ಥಿತಿ ಭಾಗಶಃ ಶಾಂತವಾಗಿತ್ತು.

ಇದರಿಂದಾಗಿ ಜನಜೀವನ ಸಹಜಸ್ಥಿತಿಗೆ ಮರಳಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಸಂಬಂಧ ಅಲ್ಲಿನ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಮಾತುಕತೆ ಆರಂಭಿಸಿತ್ತು. ಈ ಹಂತದಲ್ಲಿ ಇದೀಗ ಭಯೋತ್ಪಾದಕರು ಮತ್ತೆ ಬಾಲಬಿಚ್ಚಿದ್ದು ಜಮ್ಮು ಕಾಶ್ಮೀರದಲ್ಲಿನ ಶಾಂತಿಗೆ ಭಂಗ ತರುವ ಪ್ರಯತ್ನ ನಡೆಸಿದ್ದಾರೆ. ಈ ಮೂಲಕ ಮತ್ತೆ ಅಶಾಂತಿಯ ವಾತಾವರಣವನ್ನು ಸೃಷ್ಟಿಸಿ ಜಮ್ಮು ಕಾಶ್ಮೀರದಲ್ಲಿ ಪ್ರಜಾಸತ್ತೆಯನ್ನು ಮರುಸ್ಥಾಪಿಸುವ ಕೇಂದ್ರದ ಪ್ರಯತ್ನಕ್ಕೆ ಅಡ್ಡಗಾಲು ಹಾಕಲು ಉಗ್ರರು ಮುಂದಾದಂತಿದೆ. ಉಗ್ರರು ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಡ್ರೋನ್‌ ಬಳಸಿ ದಾಳಿ ನಡೆಸಿದ್ದು ಇದರಲ್ಲಿ ಪಾಕಿಸ್ತಾನದ ಕೈವಾಡ ಇರುವ ಸಾಧ್ಯತೆಗಳು ದಟ್ಟವಾಗಿವೆ. ಉಗ್ರರ ಈ ಕೃತ್ಯವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ ಜಮ್ಮು ಕಾಶ್ಮೀರದಲ್ಲಿನ ಶಾಂತ ಪರಿಸ್ಥಿತಿಯನ್ನು ಮತ್ತೆ ಕದಡಲು ಉಗ್ರರಿಗೆ ಅವಕಾಶ ನೀಡ ಬಾರದು. ಭಯೋತ್ಪಾದನೆಯ ದಮನಕ್ಕಾಗಿ ಸರಕಾರ ಕೈಗೊ ಳ್ಳುವ ಕ್ರಮ ಗಳಿಗೆ ವಿಪಕ್ಷಗಳಿಂದಲೂ ಪೂರ್ಣ ತೆರನಾದ ಸಹಕಾರ ಅತ್ಯಗತ್ಯವಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.