ಕೇರಳದಿಂದ ಪರಾರಿಯಾಗಿರುವ ಎಂಟು ಮಂದಿ ದಶಕಗಳು ಕಳೆದರೂ ಪತ್ತೆಯಿಲ್ಲ!
Team Udayavani, Feb 9, 2023, 7:25 AM IST
ತಿರುವನಂತಪುರ: ಘೋರ ಪಾತಕದಲ್ಲಿ ಪಾಲ್ಗೊಂಡು ಕೇರಳದಿಂದ ಪರಾರಿಯಾಗಿರುವ 8 ಆರೋಪಿಗಳು ಇವತ್ತಿಗೂ ಪೊಲೀಸರ ಕೈಗೆ ಸಿಕ್ಕಿಲ್ಲ. ಅಂತಾರಾಷ್ಟ್ರೀಯ ಪೊಲೀಸ್ ಸಂಸ್ಥೆಯೇ ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ನೀಡಿದ್ದರೂ ಸುಳಿವು ಸಿಕ್ಕಿಲ್ಲ. ಕೆಲವರ ವಿರುದ್ಧವಂತೂ ದಶಕಗಳ ಹಿಂದೆಯೇ ಇಂಟರ್ಪೋಲ್ ನೋಟಿಸ್ ನೀಡಿದೆ.
ಹಾಗಿದ್ದರೂ ಅವರ ಸುಳಿವೇ ಸಿಕ್ಕಿಲ್ಲ.ಈ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಹೆಸರುಗಳು ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಸುಕುಮಾರ ಕುರುಪ್ ಮತ್ತು ಡಾ.ಎದಡಿ ಒಮಾನಾ. ಇನ್ನು ಉಗ್ರರ ಪಟ್ಟಿಗೆ ಸೇರಿರುವ ಕೊಚುಪೀಡಿಕಯಿಲ್ ಶಬ್ಬೀರ್, ಮೊಹಮ್ಮದ್ ಬಶೀರ್, ಮೊಹಮ್ಮದ್ ರಫೀಖ್ ಕೂಡ ಸಿಕ್ಕಿಲ್ಲ. ಮೊಹಮ್ಮದ್ ಹನೀಫಾ, ಸುಧಿನ್ ಕುಮಾರ್ ಶ್ರೀಧರನ್, ಚೆರಿಯವೀಟಿಲ್ ಸಾದಿಖ್ ಮೇಲೆ ಅತ್ಯಂತ ಗಂಭೀರ ಪ್ರಕರಣಗಳಿವೆ.
ಈ ಬಗ್ಗೆ ಸಿಬಿಐನ ಮೂಲಗಳು ಪ್ರತಿಕ್ರಿಯೆ ನೀಡಿ; ಇತರೆ ದೇಶಗಳು ಸರಿಯಾಗಿ ಸ್ಪಂದಿಸದೇ ಇರುವುದೇ ಆರೋಪಿಗಳು ಸಿಗದಿರಲು ಕಾರಣ, ಸ್ಥಳಗಳನ್ನು ತಿಳಿಸಿದರೂ ಬಹುತೇಕ ದೇಶಗಳು ಪ್ರತಿಕ್ರಿಯೆ ನೀಡುವುದಿಲ್ಲ ಅಥವಾ ಹತ್ತಾರು ಪ್ರಶ್ನೆಗಳನ್ನು ಹಾಕಿ ಮನವಿಯನ್ನು ಹಿಂತಿರುಗಿ ಕಳಿಸುತ್ತವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ