ಎಂಟು ರಾಜೀನಾಮೆ ತಿರಸ್ಕೃತ

ಹನ್ನೊಂದು ರಾಜೀನಾಮೆಗಳಲ್ಲಿ 5 ಕ್ರಮಬದ್ಧ ವಿಚಾರಣೆಗೆ ಹಾಜರಾಗಲು ಶಾಸಕರಿಗೆ ಸೂಚನೆ

Team Udayavani, Jul 10, 2019, 5:14 AM IST

suresh-kumar

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಆಟ ಹೊಸ ತಿರುವು ಪಡೆದುಕೊಂಡಿದ್ದು, 13 ಶಾಸಕರ ರಾಜೀನಾಮೆ ಪತ್ರಗಳಲ್ಲಿ ಐದು ಮಾತ್ರ ಕ್ರಮಬದ್ಧ ಎಂದಿರುವ ಸ್ಪೀಕರ್‌ ರಮೇಶ್‌ ಕುಮಾರ್‌, ಉಳಿದ ಎಂಟು ರಾಜೀನಾಮೆ ಪತ್ರಗಳನ್ನು ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲ, ಇವು ಕ್ರಮಬದ್ಧವಲ್ಲವಾಗಿರುವುದರಿಂದ ಮತ್ತೆ ಪರಿಷ್ಕರಣೆಗೂ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕರು ರಾಜೀನಾಮೆ ಸಲ್ಲಿಸಿರುವ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ ಅನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜು. 6ರಂದು ನಾನು ಕಚೇರಿಯಲ್ಲಿ ಇದ್ದಾಗ ಯಾವ ಶಾಸಕರೂ ಬಂದಿರಲಿಲ್ಲ. ನನ್ನಲ್ಲಿ ಸಮಯವನ್ನೂ ಕೇಳಿರಲಿಲ್ಲ. ನಾನು ಕಚೇರಿಯಿಂದ ಹೋದ ಮೇಲೆ 13 ಮಂದಿ ಶಾಸಕರು ಬಂದು ನಮ್ಮ ಕಾರ್ಯದರ್ಶಿ ಬಳಿ ರಾಜೀನಾಮೆ ಪತ್ರಗಳನ್ನು ನೀಡಿದ್ದಾರೆ. ಅವರಿಗೆ ಸ್ವೀಕೃತಿ ಪತ್ರ ನೀಡಿ ಕಳುಹಿಸಲಾಗಿದೆ.

ಆನಂದ್‌ ಸಿಂಗ್‌, ಪ್ರತಾಪ್‌ ಗೌಡ ಪಾಟೀಲ್, ನಾರಾಯಣ ಗೌಡ, ರಾಮಲಿಂಗಾ ರೆಡ್ಡಿ, ಗೋಪಾಲಯ್ಯ ಅವರ ರಾಜೀನಾಮೆ ಪತ್ರಗಳು ಕ್ರಮಬದ್ದವಾಗಿವೆ. ಈ ಐವರು ಶಾಸಕರಲ್ಲಿ ಜು. 12ರಂದು ಆನಂದ್‌ಸಿಂಗ್‌, ಪ್ರತಾಪ್‌ ಗೌಡ ಪಾಟೀಲ್ ಹಾಗೂ ನಾರಾಯಣ ಗೌಡ ಅವರಿಗೆ ಹಾಜರಾಗಲು ಸೂಚನೆ ನೀಡಿದ್ದೇನೆ. ಜು. 15ರಂದು ರಾಮಲಿಂಗಾ ರೆಡ್ಡಿ, ಗೋಪಾಲಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಇದರೊಂದಿಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ದೂರು ಸಲ್ಲಿಸಿದ್ದಾರೆ. ರಮೇಶ್‌ ಜಾರಕಿಹೊಳಿ ಹಾಗೂ ಕೆಲವು ಶಾಸಕರ ವಿರುದ್ಧ ಈ ಹಿಂದೆ ಕಾಂಗ್ರೆಸ್‌ ಸಲ್ಲಿಸಿರುವ ದೂರಿನ ಆಧಾರದಲ್ಲಿ ಜು.11ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮಯ ನೀಡಲಾಗಿದೆ ಎಂದು ಹೇಳಿದರು.

ಅನರ್ಹತೆಯ ಅಸ್ತ್ರ

ಬೆಂಗಳೂರು: ಮುಂಬಯಿಗೆ ಹೋಗಿರುವ ಪಕ್ಷದ ಶಾಸಕರ ವಿರುದ್ಧ ಅನರ್ಹತೆಯ ಅಸ್ತ್ರ ಪ್ರಯೋಗಿಸಲು ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಈ ಸಂಬಂಧ ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಅವರನ್ನು ಭೇಟಿಯಾದ ಸಿದ್ದರಾಮಯ್ಯ ನೇತೃತ್ವದ ನಿಯೋಗ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಶಾಸಕರನ್ನು ಅನರ್ಹಗೊಳಿಸಿ ಎಂದು ಮನವಿ ಮಾಡಿದೆ. ಅಷ್ಟೇ ಅಲ್ಲ, ಅವರು 6 ವರ್ಷ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಲು ಕಾಂಗ್ರೆಸ್‌ ಮನವಿ ಮಾಡಿದೆ.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಸಂವಿಧಾನದ 10ನೇ ಪರಿಚ್ಛೇದದ ಕಲಂ 164 (1 ಮತ್ತು 2)ರ ಪ್ರಕಾರ ಯಾವುದೇ ಪಕ್ಷದಿಂದ ಆಯ್ಕೆಯಾದ ಶಾಸಕ ರಾಜೀನಾಮೆ ನೀಡುವಂತಿಲ್ಲ. ಅದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಅನಂತರ ಅವರು ಯಾವುದೇ ಸಚಿವ ಸ್ಥಾನ ಹಾಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತಿಲ್ಲ. ಹೀಗಾಗಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅನರ್ಹಗೊಳಿಸುವಂತೆ ರಮೇಶ್‌ ಕುಮಾರ್‌ಗೆ ದೂರು ಸಲ್ಲಿಸುವುದಾಗಿ ತಿಳಿಸಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಬಯಲಾಗಿದೆ. ಆದರೂ ಅವರು ರಾಜೀನಾಮೆ ವಾಪಸ್‌ ಪಡೆಯಲು ಮನವಿ ಮಾಡುತ್ತೇನೆ. ಶಾಸಕರ ರಾಜೀನಾಮೆ ಸ್ವಯಂಪ್ರೇರಿತವಾಗಿಲ್ಲ ಮತ್ತು ಪ್ರಾಮಾಣಿಕವಾಗಿಲ್ಲ. ಹೀಗಾಗಿ ಇದು ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ ಎಂದು ಹೇಳಿದರು.

ಆಜಾದ್‌ ಬೆಂಗಳೂರಿಗೆ

ಮೈತ್ರಿ ಸರಕಾರ ಉಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್‌ ಬೆಂಗಳೂರಿಗೆ ಆಗಮಿಸಿದ್ದು, ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.