Election 2023: ಕಾಂಗ್ರೆಸ್ ಎರಡನೇ ಪಟ್ಟಿಯಲ್ಲೂ ಕಾರ್ಕಳಕ್ಕೆ ಅಭ್ಯರ್ಥಿ ಇಲ್ಲ
ಆಕಾಂಕ್ಷಿಯಲ್ಲಿ ಒಬ್ಬರಿಗೆ ದಿಢೀರ್ ಹುದ್ದೆ : ಸಂಚಲನ
Team Udayavani, Apr 7, 2023, 8:08 AM IST
ಕಾರ್ಕಳ: ಕಾರ್ಕಳ ಹೊರತು ಪಡಿಸಿ ಉಡುಪಿ ಜಿಲ್ಲೆಯ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಈ 2ನೇ ಪಟ್ಟಿಯಲ್ಲೂ ಕಾರ್ಕಳವನ್ನು ಕೈ ಬಿಡಲಾಗಿದೆ.
ಉಡುಪಿ ಹಾಗೂ ಕಾರ್ಕಳ ಕ್ಷೇತ್ರ ಗಳನ್ನು ಹೊರತುಪಡಿಸಿ ಉಳಿದೆಲ್ಲವುಗಳ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲೇ ಪ್ರಕಟಿಸಲಾಗಿತ್ತು. ಈಗ ಎರಡನೇ ಪಟ್ಟಿ ಯಲ್ಲಿ ಉಡುಪಿ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಯನ್ನು ಘೋಷಿಸಲಾಗಿದೆ.
ಕಾರ್ಕಳ ಕಾಂಗ್ರೆಸ್ನಿಂದ ನಾಲ್ವರು ಆಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿದ್ದು ಮಂಜುನಾಥ ಪೂಜಾರಿ, ಡಿ.ಆರ್. ರಾಜು, ಉದಯ ಶೆಟ್ಟಿ ಮುನಿಯಾಲು ಹೆಸರೂ ಚಾಲ್ತಿಯಲ್ಲಿದೆ. ಪ್ರತಿಷ್ಠೆಯ ಕಣವಾಗಿರುವ ಕಾರಣ ಕಾಂಗ್ರೆಸ್ನ ಅಭ್ಯರ್ಥಿ ಯಾರೆಂಬ ಅಂಶ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಬಿಜೆಪಿಯ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದು ಬಿಜೆಪಿಯ ಮತ ಗಳನ್ನೇ ಹೆಚ್ಚು ಬುಟ್ಟಿಗೆ ಹಾಕಿಕೊಳ್ಳುತ್ತಾರೆ ಎನ್ನಲಾಗಿದೆ. ಇದರ ಲಾಭ ಪಡೆಯಲು ಕಾಂಗ್ರೆಸ್ ತಂತ್ರಗಾರಿಕೆಯಲ್ಲಿ ತೊಡಗಿದೆ.
ದಿಢೀರ್ ಹುದ್ದೆ
ಈ ಮಧ್ಯೆ ಹೈಕಮಾಂಡ್ ನಡೆ ನಿಗೂಢವಾಗಿದೆ. ಇದರ ಬೆನ್ನಿಗೇ ಆಕಾಂಕ್ಷಿಗಳಲ್ಲಿ ಒಬ್ಬ ರಾದ ಡಿ.ಆರ್. ರಾಜು ಅವರನ್ನು ತತ್ಕ್ಷಣ ಜಾರಿಗೆ ಬರುವಂತೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಇದು ನಾನಾ ವಿಶ್ಲೇಷಣೆಗೆ ಕಾರಣವಾಗಿದೆ. ಹಾಗಾಗಿ ಹೈಕಮಾಂಡ್ ಮಂಜುನಾಥ ಪೂಜಾರಿ ಅಥವಾ ಉದಯ ಶೆಟ್ಟಿ ಮುನಿಯಾಲು ಅವರಲ್ಲಿ ಒಬ್ಬರನ್ನು ಆರಿಸುತ್ತದೆಯೋ ಮತ್ತೆ ಹೊಸ ಹೆಸರನ್ನು ಘೋಷಿಸುತ್ತದೆಯೋ ಕಾದುನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ