Election 2023: ಪ್ರಧಾನಿ ಮೋದಿ ವಿಷದ ಹಾವಾದರೆ, ಸೋನಿಯಾ ಗಾಂಧಿ ವಿಷಕನ್ಯೆಯೇ? ಯತ್ನಾಳ್
ರಾಹುಲ್ ಗಾಂಧಿ ಬಿಜೆಪಿಯ ಸ್ಟಾರ್ ಪ್ರಚಾರಕ
Team Udayavani, Apr 28, 2023, 3:37 PM IST
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷದ ಹಾವು ಎಂದು ಹೇಳಿಕೆ ನೀಡಿ ಕಾಂಗ್ರೆಸ್ ಮುಖಂಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿವಾದಕ್ಕೊಳಗಾಗಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ವಿಷದ ಹಾವು ಎಂದಾದರೆ, ಸೋನಿಯಾ ಗಾಂಧಿ ವಿಷ ಕನ್ಯೆಯೇ ಎಂದು ವಿಜಯಪುರ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಈ ಚುನಾವಣೆ ಕರ್ನಾಟಕ ಮುಂದಿನ ಭವಿಷ್ಯದ ಚುನಾವಣೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ J. P. Nadda
ಯಲಬುರ್ಗಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ಪರ ಗುರುವಾರ (ಎ.27) ರಾತ್ರಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದ ಯತ್ನಾಳ್, ಪ್ರಧಾನಿ ನರೇಂದ್ರ ಮೋದಿ ಜಾಗತಿಕ ನಾಯಕ ಎಂಬುದನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅಂತಹ ನಾಯಕನನ್ನು ಹಾವಿಗೆ ಹೋಲಿವುವುದು ಸರಿಯೇ ಎಂದು ತಿರುಗೇಟು ನೀಡಿದ್ದಾರೆ.
ಭಾರತದ ಘನತೆಗೆ ಧಕ್ಕೆ ತಂದಿರುವ ಸೋನಿಯಾ ಗಾಂಧಿ ಚೀನಾ ಮತ್ತು ಪಾಕ್ ಏಜೆಂಟರಂತೆ ಕೆಲಸ ಮಾಡುತ್ತಿರುವುದಾಗಿ ಯತ್ನಾಳ್ ಆರೋಪಿಸಿದ್ದಾರೆ. ಸೋನಿಯಾ ವಿಷಯ ಕನ್ಯೆಯೇ ಎಂದು ಪ್ರಶ್ನಿಸಿರುವ ಯತ್ನಾಳ್, ರಾಹುಲ್ ಗಾಂಧಿ ಹುಚ್ಚ ಎಂದು ಟೀಕಿಸಿದ್ದು, ಮೌನ್ ಸಿಂಗ್ (ಮನಮೋಹನ್ ಸಿಂಗ್) ಅವರು ಪ್ರಧಾನಿಯಾಗಿದ್ದೇ ದುರಂತ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಲಿಂಗಾಯತರು ಭ್ರಷ್ಟರು ಅಂತ ಹೇಳುತ್ತಾರೆ. ಇಡೀ ಸಮುದಾಯವನ್ನು ಭ್ರಷ್ಟರು ಎಂದು ಹೇಳುವುದು ಸರಿಯಲ್ಲ. ಕಾಂಗ್ರೆಸ್ ನವರಿಗೆ ತಾಕತ್ ಇದ್ದರೆ ಲಿಂಗಾಯತ ಸಿಎಂ ಘೋಷಣೆ ಮಾಡಲಿ. ರಾಹುಲ್ ಗಾಂಧಿ ಬಿಜೆಪಿಯ ಸ್ಟಾರ್ ಪ್ರಚಾರಕ ಎಂದು ಯತ್ನಾಳ್ ಈ ಸಂದರ್ಭದಲ್ಲಿ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ