ವಿಜಯೋತ್ಸವಕ್ಕೆ ನಿಷೇಧ : ಕೋವಿಡ್ ಹಿನ್ನೆಲೆ ಚುನಾವಣಾ ಆಯೋಗದಿಂದ ಮಹತ್ವದ ನಿರ್ಧಾರ
Team Udayavani, Apr 28, 2021, 7:20 AM IST
ಹೊಸದಿಲ್ಲಿ : ಚುನಾವಣ ರ್ಯಾಲಿ, ರೋಡ್ ಶೋಗಳು ದೇಶದಲ್ಲಿ ಕೊರೊನಾ ಪ್ರಸರಣ ಹೆಚ್ಚಿಸಿವೆ ಎಂಬ ಆರೋಪದ ಬೆನ್ನಲ್ಲೇ ಕೇಂದ್ರ ಚುನಾವಣ ಆಯೋಗವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೇ 2ರ ಚುನಾವಣ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿದೆ.
ಫಲಿತಾಂಶದ ಬಳಿಕ ವಿಜೇತ ಅಭ್ಯರ್ಥಿಯ ಜತೆಗೆ ಇಬ್ಬರಿಗಿಂತ ಹೆಚ್ಚು ಮಂದಿ ಇರಲು ಅನುಮತಿ ಇಲ್ಲ. ಅಭ್ಯರ್ಥಿಯ ಅಧಿಕೃತ ಪ್ರತಿನಿಧಿ ಚುನಾವಣ ಪ್ರಮಾಣಪತ್ರ ಪಡೆಯಬೇಕು ಎಂದು ಆಯೋಗ ಸೂಚಿಸಿದೆ. ಮೇ 2ರಂದು ಕೇರಳ, ತಮಿಳುನಾಡು, ಪುದುಚೆರಿ, ಪ. ಬಂಗಾಲ, ಅಸ್ಸಾಂನ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.
ಬಿಜೆಪಿ ಸ್ವಾಗತ
ಈ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ. ವಿಜಯೋ ತ್ಸವ ಮತ್ತು ಸಂಭ್ರಮಾಚರಣೆಗಳಿಗೆ ಆಯೋಗ ನಿಷೇಧ ವಿಧಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!