ಕರೆಂಟ್‌ ಶಾಕ್‌! ಪ್ರತೀ ಯೂನಿಟ್‌ಗೆ 30 ಪೈಸೆ ದರ ಹೆಚ್ಚಳ : ಎಪ್ರಿಲ್‌ ನಿಂದಲೇ ಪೂರ್ವಾನ್ವಯ


Team Udayavani, Jun 10, 2021, 7:15 AM IST

ಕರೆಂಟ್‌ ಶಾಕ್‌! ಪ್ರತೀ ಯೂನಿಟ್‌ಗೆ 30 ಪೈಸೆ ದರ ಹೆಚ್ಚಳ : ಎಪ್ರಿಲ್‌ ನಿಂದಲೇ ಪೂರ್ವಾನ್ವಯ

ಬೆಂಗಳೂರು : ಕೊರೊನಾ ಹಾವಳಿ ಮತ್ತು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಈಗ ಮತ್ತೂಂದು “ಶಾಕ್‌’! ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ವು ಮೆಸ್ಕಾಂ ಸಹಿತ ಎಲ್ಲ ಎಸ್ಕಾಂಗಳ ಬಹುತೇಕ ಎಲ್ಲ ಪ್ರಕಾರದ ಗ್ರಾಹಕರಿಗೆ ಪ್ರತಿ ಯೂನಿಟ್‌ ವಿದ್ಯುತ್‌ಗೆ ಸರಾಸರಿ 30 ಪೈಸೆ ಹೆಚ್ಚಳ ಮಾಡಿದೆ. ಈ ಪರಿಷ್ಕೃತ ದರವು
ಎ. 1ರಿಂದಲೇ ಪೂರ್ವಾನ್ವಯ ಆಗುವಂತೆ ಬುಧವಾರ ಆದೇಶ ಹೊರಡಿಸಿದ್ದು, ಎಪ್ರಿಲ್‌, ಮೇ ತಿಂಗಳ ಪರಿಷ್ಕರಣೆ ಬಾಕಿಯನ್ನು ಯಾವುದೇ ಬಡ್ಡಿ ವಿಧಿಸದೆ ಬರುವ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ವಸೂಲು ಮಾಡುವಂತೆಯೂ ಸೂಚಿಸಿದೆ.
ಇದರೊಂದಿಗೆ ಸರಾಸರಿ ಪ್ರತೀ ಯೂನಿಟ್‌ಗೆ ಶೇ. 3.84 ರಷ್ಟು ಹೆಚ್ಚಳ ಮಾಡಿದಂತಾಗಿದೆ. ಇದರಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ನಗರ ಪ್ರದೇಶದ ಗೃಹ ಬಳಕೆದಾರರಿಗೆ ಮಾಸಿಕ 200 ಯೂನಿಟ್‌ ಬಳಕೆಗೆ ಪ್ರಸ್ತುತ 1,172 ರೂ. ಬಿಲ್‌ ಬರುತ್ತಿದ್ದರೆ, ಪರಿಷ್ಕೃತ ದರದ ಪ್ರಕಾರ 1,192 ರೂ. ಬರಲಿದೆ. ಇದರೊಂದಿಗೆ ನಿಗದಿತ ಶುಲ್ಕದಲ್ಲಿ 10ರಿಂದ 20 ರೂ. ವರೆಗೆ ಹೆಚ್ಚಳ ಮಾಡಲಾಗಿದೆ.
ವಿದ್ಯುತ್‌ ಸರಬರಾಜು ಕಂಪೆನಿಗಳು ಶೇ. 17.31ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಕಳೆದ ಬಾರಿ ಪ್ರತೀ ಯೂನಿಟ್‌ಗೆ 40 ಪೈಸೆ ಏರಿಕೆಗೆ ಆಯೋಗ ಅಸ್ತು ಎಂದಿತ್ತು. ಲಾಕ್‌ಡೌನ್‌ನಿಂದ ಉಂಟಾದ ಆರ್ಥಿಕ ಸಂಕಷ್ಟ ಹಾಗೂ ಪೆಟ್ರೋಲ್‌-ಡೀಸೆಲ್‌, ಅಗತ್ಯ ವಸ್ತು ಗಳ ಬೆಲೆ ಏರಿಕೆ ನಡುವೆ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ ಹೊರೆ ಬೀಳುತ್ತಿದೆ.

ಎಷ್ಟು ಹೆಚ್ಚಳ?
ಗೃಹ ಬಳಕೆ ಪ್ರವರ್ಗದಲ್ಲಿ ಮೊದಲ ಹಂತವನ್ನು 0-30 ಯೂನಿಟ್‌ಗಳಿಂದ 0-50 ಯೂನಿಟ್‌ಗೆ ಹೆಚ್ಚಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಯ ಮಹಾನಗರ ಪಾಲಿಕೆ ಮತ್ತು ಪುರಸಭೆ ಪ್ರದೇಶಗಳಲ್ಲಿ ಗೃಹಬಳಕೆ ಗ್ರಾಹಕರಿಗೆ ಮೊದಲ 50 ಯೂನಿಟ್‌ಗೆ 10 ಪೈಸೆ ಹೆಚ್ಚಳ ಮಾಡಲಾಗಿದ್ದು, ಉಳಿದ ಎಲ್ಲ ಹಂತಗಳಲ್ಲೂ ಇದೇ ಮಾದರಿಯಲ್ಲಿ ತಲಾ 10 ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಬೆಸ್ಕಾಂ ವ್ಯಾಪ್ತಿಯ ಹೊರತಾದ ಗ್ರಾಮೀಣ ಪ್ರದೇಶದ ಗೃಹಬಳಕೆದಾರರಿಗೂ ಇದೇ ದರ ಅನ್ವಯ ಆಗಲಿದೆ. ಇತರ ಎಸ್ಕಾಂಗಳಲ್ಲೂ ಪ್ರತೀ ಸ್ಲಾéಬ್‌ಗಳಲ್ಲಿ ತಲಾ 10 ಪೈಸೆ ಪರಿಷ್ಕರಣೆ ಮಾಡಲಾಗಿದೆ.

ಮೂರನೇ ಬಾರಿಗೆ ಏರಿಕೆ!
ಕಳೆದ ಒಂದು ವರ್ಷದಲ್ಲಿ ಇದು ಮೂರನೇ ಬಾರಿಗೆ ಆಗುತ್ತಿರುವ ಏರಿಕೆ. ಮೊದಲಿಗೆ ಜೂನ್‌ನಲ್ಲಿಯೇ ಪ್ರತೀ ತ್ತೈಮಾಸಿಕದಲ್ಲಿ ಪರಿಷ್ಕರಿಸಲಾಗುವ ಇಂಧನ ಸರಿದೂಗಿಸುವ ವೆಚ್ಚದಡಿ ಪ್ರತಿ ಯೂನಿಟ್‌ ಗೆ 8ರಿಂದ 13 ಪೈಸೆ ಏರಿಸಲಾಗಿತ್ತು. ಬಳಿಕ ಎಪ್ರಿಲ್‌ ನಲ್ಲಿ ಮಾಡಬೇಕಾಗಿದ್ದ ದರ ಹೆಚ್ಚಳವನ್ನು ನವೆಂಬರ್‌ ನಲ್ಲಿ ಮಾಡಲಾಗಿತ್ತು. ಅಂದರೆ ಆಗ ಪ್ರತೀ ಯೂನಿಟ್‌ಗೆ
40 ಪೈಸೆಗಳಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಮೂರನೇ ಬಾರಿಗೆ ಪ್ರತಿ ಯೂನಿಟ್‌ಗೆ 30 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.