ನೂಜಿಬಾಳ್ತಿಲ, ರೆಂಜಿಲಾಡಿ ಭಾಗದಲ್ಲಿ ಆನೆ ಹಿಂಡು!
Team Udayavani, Feb 3, 2023, 12:16 AM IST
ಸುಬ್ರಹ್ಮಣ್ಯ: ಕಡಬ ತಾಲೂಕಿನ ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ ಗ್ರಾಮಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟು ಕೃಷಿ ಹಾನಿ ಮಾಡುತ್ತಿವೆ. ರೆಂಜಿಲಾಡಿ ಗ್ರಾಮದ ಕೆಲವಡೆ ಹಗಲಲ್ಲೇ ಕಾಣ ಸಿಗುತ್ತಿದ್ದು, ಶಾಲಾ ಮಕ್ಕಳು ಸೇರಿದಂತೆ ಜನತೆ ಆತಂಕಕ್ಕೊಳಗಾಗಿದ್ದಾರೆ.
ರೆಂಜಿಲಾಡಿ ಗ್ರಾಮದ ಬಾಂತಾಜೆ, ಸಾಕೋಟೆ, ಪಳ್ಳತ್ತಡ್ಕ, ಕಾನೋಳಿ ಭಾಗದಲ್ಲಿ, ಪಾಡ್ಲ ಪರಿಸರದಲ್ಲಿ ಆನೆಗಳು ಬೀಡುಬಿಟ್ಟಿವೆ. ಎರಡು ಕಾಡಾನೆ ಹಿಂಡುಗಳು ಇವೆ ಎನ್ನಲಾಗಿದ್ದು, ಒಂದು ಹಿಂಡಿನಲ್ಲಿ ಮರಿ ಆನೆಯೂ ಇದೆ ಎನ್ನಲಾಗಿದೆ. ದೊಡ್ಡ ಆನೆಯೊಂದು ಸಂಚರಿಸುವ ವೀಡಿಯೋ ಕೂಡ ಹರಿದಾಡುತ್ತಿದೆ. ಕೆಲವು ಮನೆಗಳ ಅಂಗಳಕ್ಕೂ ಆನೆ ಬಂದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ