ದೇಶದಲ್ಲಿ ಸಿದ್ಧಗೊಳ್ಳಲಿದೆ ಆನೆಗಳ ಅಭಯಾರಣ್ಯ : ಹುಲಿ ಅಭಯಾರಣ್ಯದ ಮಾದರಿಯಲ್ಲಿ ಬರಲಿದೆ ನಿಯಮ


Team Udayavani, Oct 6, 2020, 12:37 PM IST

ದೇಶದಲ್ಲಿ ಸಿದ್ಧಗೊಳ್ಳಲಿದೆ ಆನೆಗಳ ಅಭಯಾರಣ್ಯ : ಹುಲಿ ಅಭಯಾರಣ್ಯದ ಮಾದರಿಯಲ್ಲಿ ಬರಲಿದೆ ನಿಯಮ

ರಾಂಚಿ/ಕೋಲ್ಕತಾ: ಹುಲಿಅಭಯಾರಣ್ಯಗಳ ಮಾದರಿಯಲ್ಲಿಯೇ ದೇಶದಲ್ಲಿ ಆನೆಗಳಿಗೇ ಮೀಸಲಾಗಿರುವ ಅರಣ್ಯ ಪ್ರದೇಶ ರಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಆನೆಗಳು ಮತ್ತು ಮಾನವರ ನಡುವಿನ ಸಂಘರ್ಷಕ್ಕೆ ಮುಕ್ತಾಯ ಹಾಕುವ ಪ್ರಯತ್ನ ಶುರುವಾಗಿದೆ. ಅದಕ್ಕಾಗಿ 1972ರವನ್ಯಜೀವಿ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲುಕೇಂದ್ರ ಪರಿಸರ ಸಚಿವಾಲಯ ಪ್ರಸ್ತಾವನೆ ಮುಂದಿಟ್ಟಿದೆ. ಆನೆಗಳ ಸಂಖ್ಯೆ ಹೆಚ್ಚಾಗಿರುವಕರ್ನಾಟಕ ಸೇರಿದಂತೆ ಹತ್ತು ರಾಜ್ಯ ಸರ್ಕಾರಗಳಿಂದ ಈ ಬಗ್ಗೆ ಸಲಹೆಗಳನ್ನು ಆಹ್ವಾನಿಸಿದೆ.

ಹುಲಿಅಭಯಾರಣ್ಯಕ್ಕೆ ರಾಜ್ಯ ಸರ್ಕಾರಗಳು ಸಿದ್ಧಪಡಿಸಿದ ನಿಯಮಾವಳಿಗಳಂತೆಯೇ ಆನೆಗಳ ಅಭಯಾರಣ್ಯ ಸ್ಥಾಪನೆಗೆ ನಿಯಮ ರಚಿಸಬೇಕು. ಅದರ ಅನ್ವಯ ಹದಿನೈದು ರಾಜ್ಯಗಳಲ್ಲಿ ಆನೆ ಅಭಯಾರಣ್ಯ ಸ್ಥಾಪನೆ ಮಾಡಬೇಕು ಎನ್ನುವುದು ಆಶಯ. ದೇಶದಲ್ಲಿ ಸುಮಾರು30 ಸಾವಿರಆನೆಗಳು ಇವೆ.ಅಂದರೆ ಜಗತ್ತಿನ ಶೇ.60ರಷ್ಟು ಆನೆಗಳು, ಅದರಲ್ಲೂ ಏಷ್ಯಾ ವಲಯದಲ್ಲಿ ಕಂಡುಬರುವವುಗಳು ನಮ್ಮ ದೇಶದಲ್ಲಿಯೇ ಇವೆ. 2019ರಲ್ಲಿ ರಾಷ್ಟ್ರೀಯ ಆನೆ ಕಾರ್ಯ ಯೋಜನೆ ಸಿದ್ಧಪಡಿಸಲು ಸಮಿತಿ ರಚಿಸಲಾಗಿತ್ತು. ಅದೇ ವರ್ಷದ ನವೆಂಬರ್‌ ನಲ್ಲಿ ಸಭೆ ನಡೆಸಿತ್ತು. “ಜಗತ್ತಿನ ಯಾವುದೇ ದೇಶದಲ್ಲಿ ಆನೆಗಳಿಗಾಗಿ ಅಭಯಾರಣ್ಯ ರಚಿಸಿಲ್ಲ. ಆದರೆ ನಮ್ಮ ದೇಶಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಆನೆಗಳಿರುವ ಬಾಂಗ್ಲಾದೇಶ, ನೇಪಾಳದಂಥ ರಾಷ್ಟ್ರಗಳು ಅವುಗಳದ್ದೇ ಆಗಿರುವ ಕಾರ್ಯಯೋಜನೆ ಸಿದ್ಧಪಡಿಸಿವೆ’ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ
ಸಚಿವಾಲಯದಲ್ಲಿ ಆನೆಗಳ ವಿಭಾಗದಲ್ಲಿ ರಾಷ್ಟ್ರೀಯ ಸಂಚಾಲಕರಾಗಿರುವ ಪ್ರಜ್ಞಾ ಪಾಂಡಾ ಹೇಳಿದ್ದಾರೆ.

ಇದನ್ನೂ ಓದಿ :ಅರೆಬೆಂದ ಅನ್ನದಂತಾದ ಆಹಾರ ಉದ್ಯಮ : ಉತ್ಪಾದನೆಯೂ ಕುಸಿತ – ವಹಿವಾಟೂ ಕುಂಠಿತ

ಯಾವೆಲ್ಲ ರಾಜ್ಯಗಳು?
ಒಡಿಶಾ, ಪಶ್ಚಿಮ ಬಂಗಾಳದ ದಕ್ಷಿಣ ಭಾಗ, ಛತ್ತೀಸ್‌ಘಡ, ಜಾರ್ಖಂಡ್‌, ಬಿಹಾರ, ಆಂಧ್ರಪ್ರದೇಶದ ಉತ್ತರ ಭಾಗ ಮತ್ತು ದಕ್ಷಿಣ ಭಾಗ, ತಮಿಳುನಾಡು, ಕರ್ನಾಟಕ,ಕೇರಳ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ವಲಯಗಳನ್ನು ಆನೆಗಳ ಅಭಯಾರಣ್ಯ ರಚಿಸಲು ಗುರುತಿಸಲಾಗಿದೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.