ತುರ್ತು ರಕ್ಷಣೆ: ಕರಾವಳಿಯಲ್ಲಿಲ್ಲ ಹೆಲಿಕಾಪ್ಟರ್‌!


Team Udayavani, May 19, 2021, 7:30 AM IST

ತುರ್ತು ರಕ್ಷಣೆ: ಕರಾವಳಿಯಲ್ಲಿಲ್ಲ ಹೆಲಿಕಾಪ್ಟರ್‌!

ಮಂಗಳೂರು: ರಾಜ್ಯ ಕರಾವಳಿಯ ಭದ್ರತೆಗಾಗಿ ವಿವಿಧ ಭದ್ರತ ಸಂಸ್ಥೆಗಳು ಇದ್ದರೂ ತುರ್ತು ರಕ್ಷಣೆಗೆ ಹೆಲಿಕಾಪ್ಟರ್‌ ಮಾತ್ರ ಇಲ್ಲಿಲ್ಲ. ಅನಿವಾರ್ಯ ಸಂದರ್ಭಗಳಲ್ಲಿ ಗೋವಾ ಅಥವಾ ಕೇರಳದ ಕೊಚ್ಚಿಯನ್ನು ಅವಲಂಬಿಸಬೇಕಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಸಹಿತ 320 ಕಿ.ಮೀ. ಉದ್ದದ ಕರಾವಳಿಯಲ್ಲಿ ವಿವಿಧ ಚಟುವ ಟಿಕೆಗಳು ನಡೆಯುತ್ತವೆ. ಹಡಗು ಗಳು, ನೂರಾರು ಮೀನುಗಾರಿಕೆ ಬೋಟ್‌ ದಿನನಿತ್ಯ ಸಂಚರಿಸುತ್ತವೆ. ಕಡಲಿನಲ್ಲಿ ದುರ್ಘ‌ಟನೆ ಗಳು ಸಂಭವಿಸಿದಾಗ ತತ್‌ಕ್ಷಣ ರಕ್ಷಣೆಗೆ ಹೆಲಿಕಾಪ್ಟರ್‌ ಅನಿವಾರ್ಯ. ಆದರೆ ನಮ್ಮ ಕರಾವಳಿಯಲ್ಲಿ ಒಂದೂ ಇಲ್ಲ!

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೋಸ್ಟ್‌ ಗಾರ್ಡ್‌ ವಾಯುನೆಲೆ ಇದ್ದರೂ ಹೆಲಿಕಾಪ್ಟರ್‌ ಇಲ್ಲದೆ ತುರ್ತು ಸಂದರ್ಭಗಳಲ್ಲಿ ತೊಡಕಾಗುತ್ತಿದೆ.

ಗೋವಾ, ಕೊಚ್ಚಿ: ಒಂದು ದಿನ ತಡ!
ಶನಿವಾರ ಟಗ್‌ ದುರಂತ ಅರಿವಿಗೆ ಬಂದ ಕೂಡಲೇ ರಕ್ಷಣ ಕಾರ್ಯಾಚರಣೆ ಆರಂಭ ವಾಗಿತ್ತು. ಆದರೆ ಯಶಸ್ವಿಯಾಗಿರಲಿಲ್ಲ. ಹೆಲಿ ಕಾಪ್ಟರ್‌ ಅನಿವಾರ್ಯವೆನಿಸಿದಾಗ ಸೇನೆಯಿಂದ ತರಿಸಲು ಜಿಲ್ಲಾಡಳಿತ ತೀರ್ಮಾನಿಸಿತು. ರವಿವಾರ ಸಂಜೆ 4ಕ್ಕೆ ಗೋವಾದಿಂದ ಅದು ಮಂಗಳೂರಿಗೆ ಬರಬೇಕಿತ್ತು. ಆದರೆ ಮಳೆಯಿಂದ ಸಾಧ್ಯವಾಗಿಲ್ಲ. ಕೊಚ್ಚಿಯಿಂದ ತರಿಸುವ ಬಗ್ಗೆಯೂ ಮಾತುಕತೆ ನಡೆಯಿತು. ಮಳೆ ಅದಕ್ಕೂ ಕಲ್ಲು ಹಾಕಿತು. ದ.ಕ. ಕರಾವಳಿಯಲ್ಲೇ ಹೆಲಿಕಾಪ್ಟರ್‌ ಇರುತ್ತಿದ್ದರೆ ಘಟನೆ ಸಂಭವಿಸಿದ ತತ್‌ಕ್ಷಣ ರಕ್ಷಿಸಬಹುದಿತ್ತು.

ವರ್ಷದೊಳಗೆ 2 ಹೆಲಿಕಾಪ್ಟರ್‌ ?
ಮರವೂರಿನಲ್ಲಿ ಅತ್ಯುನ್ನತ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆಯಾಗಲಿದೆ. ಅದಕ್ಕಾಗಿ ವರ್ಷ ದೊಳಗೆ 2 ಹೆಲಿಕಾಪ್ಟರ್‌ ಆಗಮಿಸಲಿವೆ ಎಂಬ ಮಾಹಿತಿ ಇದೆ. ಅದುವರೆಗೆ ಕೊಚ್ಚಿ, ಗೋವಾ ಅವ ಲಂಬನೆ ಅನಿವಾರ್ಯ ಎಂದು ದ.ಕ. ಜಿಲ್ಲಾ ಉಸ್ತು ವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸಾಮಾನ್ಯವಾಗಿ ಇಂಥ ಸಂದರ್ಭಗಳಲ್ಲಿ ನೌಕಾಪಡೆ ಅಥವಾ ವಾಯು ಪಡೆ ಹೆಲಿಕಾಪ್ಟರ್‌ ಬಳಸಿಕೊಳ್ಳುತ್ತೇವೆ. ಕರಾವಳಿಗೆ ಹೆಲಿಕಾಪ್ಟರ್‌ ಅಗತ್ಯವಿರುವ ಕುರಿತು ಸರಕಾರದ ಗಮನಕ್ಕೆ ತರುತ್ತೇವೆ.
– ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ಸಮುದ್ರದಲ್ಲಿ ಅವಘಡ ಸಂಭವಿಸಿದಾಗ ರಕ್ಷಣೆಗೆ ಹೆಲಿಕಾಪ್ಟರ್‌ನ ತುರ್ತು ಅಗತ್ಯವಿದೆ. ರಾಜ್ಯ ಸರಕಾರಕ್ಕೆ ಪತ್ರ ಬರೆದು ಅಲ್ಲಿಂದ ರಕ್ಷಣ ಇಲಾಖೆಗೆ ಮನವಿ ಸಲ್ಲಿಸಲು ವಿನಂತಿಸಲಾಗುವುದು.
– ಡಾ| ಕೆ.ವಿ. ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ

– ದಿನೇಶ್‌ ಇರಾ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.