ಯುದ್ಧ ಕೊನೆಗಾಣಿಸಿ; ರಷ್ಯಾ ಸಚಿವ ಸರ್ಗಿಗೆ ಪ್ರಧಾನಿ ಮೋದಿ ಆಗ್ರಹ
ಶಾಂತಿ ಸಂಧಾನದ ಮಧ್ಯಸ್ಥಿಕೆ ವಹಿಸಲು ಸಿದ್ಧ
Team Udayavani, Apr 2, 2022, 7:00 AM IST
ಹೊಸದಿಲ್ಲಿ: ರಷ್ಯಾ- ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗಾಣಿಸುವಂತೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾವನ್ನು ಆಗ್ರಹಿಸಿದ್ದಾರೆ. 2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್ ಜತೆ ಪ್ರಧಾನಿ ಮೋದಿ ಶುಕ್ರವಾರ ಸುಮಾರು 40 ನಿಮಿಷ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಯುದ್ಧ ಕೊನೆಗಾಣಿಸುವಂತೆ ಮೋದಿ, ಸರ್ಗಿ ಯವರಲ್ಲಿ ಮನವಿ ಮಾಡಿದ್ದಾರೆ. ಯುದ್ಧ ನಿಲ್ಲಿಸುವ ನಿಟ್ಟಿ ನಲ್ಲಿ ಕೈಗೊಳ್ಳಲಾಗುವ ಶಾಂತಿ ಮಾತುಕತೆಯನ್ನು ಭಾರತ ಬೆಂಬಲಿಸುತ್ತದೆ ಎಂದೂ ಹೇಳಿದ್ದಾರೆ. ಉಕ್ರೇನ್-ರಷ್ಯಾ ನಡುವೆ ಶಾಂತಿ ಸ್ಥಾಪನೆಗಾಗಿ ಮಧ್ಯಸ್ಥಿಕೆ ವಹಿಸುವ ಅವಶ್ಯಕತೆ ಬಂದರೆ ಅದಕ್ಕೆ ಭಾರತ ಸಿದ್ಧವಿರುವ ವಿಚಾರವನ್ನು ಮೋದಿ ಯವರು, ಸರ್ಗಿಯವರಿಗೆ ತಿಳಿಸಿದ್ದಾರೆಂದು ಹೇಳಲಾಗಿದೆ.
ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸರ್ಗಿ, ಉಕ್ರೇನ್-ರಷ್ಯಾ ಬಿಕ್ಕಟ್ಟನ್ನು ಕೊನೆಗಾಣಿಸಲು ಭಾರತ ಮಧ್ಯಸ್ಥಿಕೆ ವಹಿಸುವುದಾದರೆ ಅದಕ್ಕೆ ಸ್ವಾಗತ. ಭಾರತವು ರಷ್ಯಾದ ಪ್ರಮಖ ಸ್ನೇಹಿತ. ಜತೆಗೆ ಉಕ್ರೇನ್ ಹಾಗೂ ರಷ್ಯಾ ಜತೆಗೆ ಹಲವಾರು ವ್ಯವಹಾರಗಳಲ್ಲಿ ಭಾಗಿದಾರ. ಭಾರತವು ಎರಡೂ ದೇಶಗಳ ನಡುವಿನ ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುವುದಾದರೆ ಅದನ್ನು ರಷ್ಯಾ ಸ್ವಾಗತಿಸುತ್ತದೆ. ಪಾಶ್ಚಾತ್ಯ ರಾಷ್ಟ್ರಗಳು ಮರೆತುಹೋದ ಜವಾಬ್ದಾರಿಯುತ ವರ್ತನೆಯನ್ನು ಭಾರತ ತೋರ್ಪಡಿಸುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಭಾರತದ ಜನರಿಗೆ ರಿಯಾ ಯಿತಿ ಬೆಲೆಯಲ್ಲಿ ತೈಲದ ಅಗತ್ಯವಿದೆ. ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡುವ ಪ್ರಕ್ರಿಯೆ ಮುಂದುವರಿ ಯುತ್ತದೆ.
-ನಿರ್ಮಲಾ ಸೀತಾರಾಮನ್, ಕೇಂದ್ರ ವಿತ್ತ ಸಚಿವೆ
ವ್ಯಾಪಾರಕ್ಕೆ ಸದಾ ಸಿದ್ಧ
ರಷ್ಯಾದಿಂದ ಯಾವುದೇ ಸಾಮಗ್ರಿಗಳನ್ನು ಯಾವುದೇ ಕ್ಷಣದಲ್ಲಿ ಭಾರತ ಖರೀದಿಸಲು ಬಯಸಿದರೂ ರಷ್ಯಾ ಸದಾ ಸಿದ್ಧವಿರುತ್ತದೆ ಎಂದೂ ರಷ್ಯಾ ಸಚಿವ ಸರ್ಗಿ ಆಶ್ವಾಸನೆ ನೀಡಿ ದ್ದಾರೆ. ಇದೇ ವೇಳೆ ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಅವರು ಮನಸಾರೆ ಶ್ಲಾ ಸಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ