ಮಿಥಾಲಿ ತಂಡಕ್ಕೆ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ಸವಾಲು


Team Udayavani, Jun 27, 2021, 7:00 AM IST

ಮಿಥಾಲಿ ತಂಡಕ್ಕೆ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ಸವಾಲು

ಬ್ರಿಸ್ಟಲ್‌: ಏಳು ವರ್ಷಗಳ ಬಳಿಕ ಟೆಸ್ಟ್‌ ಪಂದ್ಯವೊಂದನ್ನು ಆಡಿ, ಫಾಲೋಆನ್‌ ಸಂಕಟಕ್ಕೆ ಸಿಲುಕಿಯೂ ಇದನ್ನು ದಿಟ್ಟ ರೀತಿಯಲ್ಲಿ ನಿಭಾಯಿಸುವಲ್ಲಿ ಯಶಸ್ವಿಯಾದ ಭಾರತದ ವನಿತೆಯರಿಗೆ ರವಿವಾರದಿಂದ ಏಕದಿನ ಸವಾಲು ಎದುರಾಗಲಿದೆ.

ಆತಿಥೇಯ ಹಾಗೂ ವಿಶ್ವ ಚಾಂಪಿ ಯನ್‌ ಖ್ಯಾತಿಯ ಇಂಗ್ಲೆಂಡ್‌ ವಿರುದ್ಧ 3 ಪಂದ್ಯಗಳ ಸರಣಿ ಆರಂಭವಾಗಲಿದ್ದು, ಅನೇಕ ನಿರೀಕ್ಷೆ ಹಾಗೂ ಕುತೂಹಲವನ್ನು ಹುಟ್ಟುಹಾಕಿದೆ. ಭಾರತ ವಿಶ್ವಕಪ್‌ ಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧವೇ ಸೋತ ಕಾರಣ ಸೇಡಿನ ಅವಕಾಶವೂ ಇದೆ.

ತವರಿನ ಕೊನೆಯ ಸರಣಿಯಲ್ಲಿ ಭಾರತ 1-4 ಅಂತರದಿಂದ ದಕ್ಷಿಣ ಆಫ್ರಿಕಾಕ್ಕೆ ಶರಣಾಗಿತ್ತು. ಅಲ್ಲಿ ಡ್ಯಾಶಿಂಗ್‌ ಓಪನರ್‌ ಶಫಾಲಿ ವರ್ಮ ಅವರನ್ನು ಕೈಬಿಟ್ಟದ್ದು ಟೀಕೆಗೆ ಕಾರಣವಾಗಿತ್ತು.

ಶಫಾಲಿ ರೆಡಿ…
17 ವರ್ಷದ ಶಫಾಲಿ 96 ಹಾಗೂ 63 ರನ್‌ ಬಾರಿಸಿ ಇಂಗ್ಲೆಂಡ್‌ ಎದುರಿನ ಪದಾರ್ಪಣ ಟೆಸ್ಟ್‌ ಪಂದ್ಯದಲ್ಲೇ ತನ್ನ ಬ್ಯಾಟಿಂಗ್‌ ತಾಕತ್ತು ಏನು ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ತಾನು ಎಲ್ಲ ಮಾದರಿಯ ಪಂದ್ಯಗಳಿಗೂ ಸೈ ಎಂದು ಸಾರಿದ್ದಾರೆ. ರವಿವಾರ ಶಫಾಲಿಗೆ ಏಕದಿನ ಪದಾರ್ಪಣೆಯ ಗಳಿಗೆ ಖಂಡಿತವಾಗಿಯೂ ಕೂಡಿಬರಲಿದೆ.

“ಹರ್ಯಾಣ ಹರಿಕೇನ್‌’ ಶಫಾಲಿ ಇದೇ ಬ್ಯಾಟಿಂಗ್‌ ಫಾರ್ಮ್ ಮುಂದುವರಿಸಿದರೆ ಭಾರ ತದ ಸರಾಸರಿ ಸ್ಕೋರ್‌ ಇನ್ನೂರರ ಗಡಿ ದಾಟಿ 235-240ರ ಸಮೀಪ ಬಂದು ನಿಲ್ಲುವ ಎಲ್ಲ ಸಾಧ್ಯತೆ ಇದೆ. ಶಫಾಲಿ ಬಿರುಸಿನ ಆಟಕ್ಕಿಳಿದರೆ ಶ್ರಬೊÕàಲ್‌, ಬ್ರಂಟ್‌, ಕ್ರಾಸ್‌, ಶಿವರ್‌, ಎಕ್‌Éಸ್ಟೋನ್‌ ಮೊದಲಾದವರ ದಾಳಿಯನ್ನು ನಿಭಾಯಿಸುವುದು ಉಳಿದವರಿಗೂ ಸುಲಭವಾದೀತು.

ಉಳಿದಂತೆ ಪೂನಂ ರಾವುತ್‌, ಮಿಥಾಲಿ, ಕೌರ್‌, ಆಲ್‌ರೌಂಡರ್‌ ದೀಪ್ತಿ ಶರ್ಮ 6ನೇ ಕ್ರಮಾಂಕದ ವರೆಗಿನ ಸ್ಥಾನವನ್ನು ತುಂಬುವುದು ಖಚಿತ. ದೇಶಿ ಏಕದಿನ ಕ್ರಿಕೆಟ್‌ನಲ್ಲಿ ಬಿಗ್‌ ಹಿಟ್ಟಿಂಗ್‌ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿರುವ ಕೀಪರ್‌ ಇಂದ್ರಾಣಿ ರಾಯ್‌ ಕೂಡ ರೇಸ್‌ನಲ್ಲಿದ್ದಾರೆ. ಅವರು ತನಿಯಾ ಭಾಟಿಯ ಜತೆ ಪೈಪೋಟಿ ನಡೆಸಬೇಕಿದೆ. ಜೂಲನ್‌, ಶಿಖಾ, ಪೂಜಾ, ಅರುಂಧತಿ ರೆಡ್ಡಿ ಸ್ಪೆಷಲಿಸ್ಟ್‌ ಬೌಲರ್‌ಗಳಾಗಿ ದಾಳಿಗಿಳಿಯುವ ಸಿದ್ಧತೆಯಲ್ಲಿದ್ದಾರೆ.

ಇಂಗ್ಲೆಂಡ್‌ ಹೆಚ್ಚು ಬಲಿಷ್ಠ
ಭಾರತಕ್ಕೆ ಹೋಲಿಸಿದರೆ ಇಂಗ್ಲೆಂಡ್‌ ಹೆಚ್ಚು ಬಲಿಷ್ಠ ತಂಡ. ತವರಲ್ಲಿ ಆಡುವ ಲಾಭವೂ ಇದೆ. ಟೆಸ್ಟ್‌ನಲ್ಲಿ ಮಿಂಚಿದ ಸೋಫಿಯಾ ಡಂಕ್ಲಿ ಒನ್‌ಡೇ ಕ್ಯಾಪ್‌ ಧರಿಸುವ ಕ್ಷಣಗಣನೆಯಲ್ಲಿದ್ದಾರೆ. ಬ್ಯೂಮಂಟ್‌, ನೈಟ್‌ ಮತ್ತು ಶಿವರ್‌ ಹೆಚ್ಚು ಅಪಾಯಕಾರಿಗಳು.

ಮಿಥಾಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 22 ವರ್ಷ
ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಶನಿವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ ಜೀವನದಲ್ಲಿ ಭರ್ತಿ 22 ವರ್ಷ ಪೂರೈಸಿದರು. 1999ರ ಜೂನ್‌ 26ರಂದು ಐರ್ಲೆಂಡ್‌ ವಿರುದ್ಧ ಏಕದಿನ ಪಂದ್ಯ ಆಡುವ ಮೂಲಕ ಅವರ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಚಾಲನೆ ಲಭಿಸಿತ್ತು. ರವಿವಾರ ಅವರು ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.
ಮಿಲ್ಟನ್‌ ಕೇಯ್ನನಲ್ಲಿ ಆಡಲಾದ ತನ್ನ ಚೊಚ್ಚಲ ಪಂದ್ಯದಲ್ಲೇ ಮಿಥಾಲಿ ಅಜೇಯ 114 ರನ್‌ ಬಾರಿಸಿ ಭವ್ಯ ಭವಿಷ್ಯದ ಮುನ್ಸೂಚನೆ ನೀಡಿದ್ದರು. ಇದೀಗ ನಿಜವಾಗಿದೆ.

ಸಚಿನ್‌ ತೆಂಡುಲ್ಕರ್‌ ಬಳಿಕ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸುದೀರ್ಘ‌ ಅವಧಿಯನ್ನು ಕಳೆದ ಹಿರಿಮೆ ಮಿಥಾಲಿ ರಾಜ್‌ ಅವರದು. ಸಚಿನ್‌ 22 ವರ್ಷ, 91 ದಿನಗಳ ಕಾಲ ಏಕದಿನ ಕ್ರಿಕೆಟ್‌ನಲ್ಲಿದ್ದರು. ಈ ದಾಖಲೆಯನ್ನು ಮುರಿಯುವ ಅವಕಾಶವೂ ಮಿಥಾಲಿ ಮುಂದಿದೆ.

ರನ್‌ ದಾಖಲೆಯತ್ತ…
ಮಿಥಾಲಿ ರಾಜ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 10,131 ರನ್‌ ಪೇರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಇಲ್ಲಿಯೂ ಅಗ್ರಸ್ಥಾನ ಅಲಂಕರಿಸುವ ಅವಕಾಶ ಮಿಥಾಲಿ ಮುಂದಿದೆ. ಇದಕ್ಕೆ ಬೇಕಿರುವುದು 143 ರನ್‌ ಮಾತ್ರ. ಸದ್ಯ 10,273 ರನ್‌ ಗಳಿಸಿರುವ ಚಾರ್ಲೋಟ್‌ ಎಡ್ವರ್ಡ್ಸ್‌ ಮೊದಲ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.