ಪರಿಸರ ಸಂರಕ್ಷಣೆ: ವೈಯಕ್ತಿಕ ಜವಾಬ್ದಾರಿಗಳು


Team Udayavani, Jun 5, 2021, 6:45 AM IST

ಪರಿಸರ ಸಂರಕ್ಷಣೆ: ವೈಯಕ್ತಿಕ ಜವಾಬ್ದಾರಿಗಳು

ಮಾನವ ಪರಿಸರ ಜೀವಿ. ಮನುಷ್ಯ ಬದುಕಲು ಅನಿವಾರ್ಯ ವಾಗಿರುವ ಮೂಲ ಆವಶ್ಯಕಗಳು ಸಿಗುವುದೇ ಪರಿಸರದಿಂದ. ಹೀಗಾಗಿ ಸುಸ್ಥಿರ ಬದುಕಿಗೆ ಪರಿಸರವನ್ನು ಸಂಕ್ಷಿಸುವುದು ಅಗತ್ಯ. ಪರಿಸರ ಸಂರಕ್ಷಣೆ ಎನ್ನುವುದು ಸಾಮೂಹಿಕ ಜವಾಬ್ದಾರಿ ಮಾತ್ರವಲ್ಲದೆ ಪ್ರತಿಯೋರ್ವರ ಹೊಣೆಗಾರಿಕೆಯೂ ಆಗಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗೆ ವೈಯಕ್ತಿಕವಾಗಿ ನಾವು ಏನು ಮಾಡಬಹುದು ಎಂದು ಕೇಳಿಕೊಂಡಾಗ ನಮ್ಮ ಕರ್ತವ್ಯಗಳ ಬಲುದೊಡ್ಡ ಪಟ್ಟಿಯೇ ನಮ್ಮ ಕಣ್ಣ ಮುಂದೆ ಬಂದು ನಿಲ್ಲುತ್ತದೆ.

ಮನೆಗೊಂದು ಮರ, ಊರಿಗೊಂದು ವನ
ಪರಿಸರ ಸಂರಕ್ಷಣೆಗೆ ನಾವು ಸ್ವಯಂಪ್ರೇರಿತರಾಗಿ ಗಿಡ, ಮರಗಳನ್ನು ಬೆಳೆಸಬೇಕಿದೆ. ಇದು ಸದ್ಯ ಆಗಬೇಕಾದ ತುರ್ತು ಕಾರ್ಯವಾಗಿದೆ. ಆಪ್ತರ ಸಂತೋಷದ ಕ್ಷಣಗಳಿಗೆ ಕಾರಣ ರಾಗಲು ನಾವು ಸವಿನೆನಪಿಗಾಗಿ ಲಕ್ಷಾಂತರ ಮೌಲ್ಯದ ಉಡುಗೂರೆ ನೀಡುತ್ತೇವೆ. ಇದರ ಜತೆಗೆ ಪರಿಸರಕ್ಕೆ ಪೂರಕವಾಗು ವಂತೆ ಒಂದು ಗಿಡ ನೆಟ್ಟು ಪೋಷಿಸಿದಾಗ ಪರಿಸರ ಸಂರಕ್ಷಣೆಗೆ ವೈಯಕ್ತಿಕ ಜವಾಬ್ದಾರಿ ಮೆರೆದಂತೆ ಆಗುತ್ತದೆ. ಜತೆಗೆ ನಮ್ಮ ಸುಸ್ಥಿರ ಬದುಕಿಗೂ ಅನುಕೂಲವಾಗುತ್ತದೆ. ಪ್ರತೀ ಮನೆಗಳಲ್ಲಿ ಒಂದು ಗಿಡ ನೆಟ್ಟರೆ ಸಾಕು, ತನ್ನಿಂತಾನೆ ಊರಿನಲ್ಲಿ ವನ ಸೃಷ್ಟಿಯಾಗುತ್ತದೆ.

ಬಳಕೆ, ಪುನರ್‌ ಬಳಕೆಯ ಮಂತ್ರ
ವಸ್ತುಗಳನ್ನು ನಾವು ಒಂದು ಬಾರಿ ಬಳಸಿ, ಅದನ್ನು ಎಸೆ ಯುವುದರಿಂದ ಅದು ಕಸವಾಗಿ ಮಾರ್ಪಟ್ಟು ಪರಿಸರ ದೃಷ್ಟಿಯಲ್ಲಿ ಹಾನಿಯಾಗುತ್ತದೆ. ಹೀಗಾಗಿ ಒಂದು ವಸ್ತುವನ್ನು ಸಾಧ್ಯವಾದಷ್ಟು ಬಾರಿ ಅಂದರೆ ಎರಡು ಅಥವಾ ಮೂರು ಬಾರಿ ಬಳಕೆ ಮಾಡಲು ಮುಂದಾಗಬೇಕು. ಪರಿಸರ ತಜ್ಞರ ಪ್ರಕಾರ, ಬಳಕೆ ಮಾಡಿದ ವಸ್ತುವನ್ನು ಪುನರ್‌ ಬಳಕೆ ಮಾಡಿದಾಗ ಪರಿಸರ ಹಾನಿಯನ್ನು ಆಂಶಿಕವಾಗಿ ಕಡಿಮೆ ಮಾಡಬಹುದಾಗಿದೆ.

ಕಸದಿಂದ ರಸ
ಮರುಬಳಕೆ ಜತೆಗೆ ಮನೆಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಕಾಂಪೋಸ್ಟ್‌ ಮಾಡುವ ಮೂಲಕ ಪರಿಸರ ಪ್ರಜ್ಞೆ ಮೆರೆಯಬಹುದಾಗಿದೆ. ಕಾಂಪೋಸ್ಟ್‌ ಪ್ರಕ್ರಿಯೆಯೂ ಪರಿಸರಕ್ಕೆ ಪೂರಕ. ಮನೆಯ ಮುಂದೆ ಗುಂಡಿ ತೋಡಬೇಕು. ಅದಕ್ಕೆ ಬೇರ್ಪಡಿಸಿದ ಹಸಿ, ಒಣ ಕಸವನ್ನು ತ್ಯಾಜ್ಯ ಗುಂಡಿಯಲ್ಲಿ ಹಾಕು ವುದರಿಂದ ಅದು ಕೆಲವು ದಿನಗಳ ಬಳಿಕ ಗೊಬ್ಬರವಾಗುತ್ತದೆ. ಅದನ್ನು ಉದ್ಯಾನ, ಕೃಷಿಗೆ ಬಳಕೆ ಮಾಡಬಹುದು.

ನೈಸರ್ಗಿಕ ಸಂಪನ್ಮೂಲಗಳ ಬಳಕೆಯಲ್ಲಿ ನಿಯಂತ್ರಣ
ನೈಸರ್ಗಿಕ ಸಂಪನ್ಮೂಲಗಳನ್ನು ಎಷ್ಟು ಕಡಿಮೆ ಬಳಕೆ ಮಾಡು ತ್ತೇವೆಯೋ ಅಷ್ಟು ಪರಿಸರಕ್ಕೆ ಒಳ್ಳೆಯದು. ಜಲ, ವಿದ್ಯುತ್‌ ನಂತಹ ಅತ್ಯಮೂಲ್ಯ ಸಂಪನ್ಮೂಲಗಳನ್ನು ನಾವು ಯೋಚಿಸಿ, ಯೋಜಿಸಿ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬಾರದು. ಪ್ರತಿಯೊಂದೂ ನೈಸರ್ಗಿಕ ಸಂಪನ್ಮೂಲವೂ ಕೂಡ ನಮ್ಮ ಜೀವನದಲ್ಲಿ ಮಹತ್ವದ್ದಾಗಿದ್ದು ಇವುಗಳ ಮಿತಬಳಕೆ ನಮ್ಮ ಮತ್ತು ಪರಿ ಸರದ ಸುಸ್ಥಿರ ಬದುಕಿಗೆ ಪೂರಕ.

ವೈಯಕ್ತಿಕ ಕಾನೂನು ರೂಪಿಸಿಕೊಳ್ಳಿ
ನಮ್ಮ ದೈನಂದಿನ ಬದುಕಿ ನಲ್ಲಿ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಇದೇ ರೀತಿ ಪರಿಸರ ಸಂರಕ್ಷಣೆಗಾಗಿ ನಾವು ವೈಯಕ್ತಿಕ ಕಾನೂನುಗಳ ಪಾಲನೆಗೆ ಮುಂದಾಗಬೇಕು. ಮರ ಕಡಿಯುವುದಿಲ್ಲ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದಿಲ್ಲ, ನೈಸರ್ಗಿಕ ಸಂಪನ್ಮೂಲಗಳನ್ನು ವ್ಯರ್ಥ ಮಾಡುವುದಿಲ್ಲ ಇವೇ ಮೊದಲಾದ ಸಂಕಲ್ಪಗಳು ನಮ್ಮದಾಗಲಿ. ಇದು ಕೇವಲ ಬಾಯಿಮಾತಿನಲ್ಲಿ ಉಳಿಯದೇ ಕಾರ್ಯರೂಪಕ್ಕೆ ಬರಲಿ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.