BJP ಸ್ಥಿತಿ “ಧೋಬಿ ಕಾ ಕುತ್ತಾ ನ ಘರ್ ಕಾ, ನ ಘಾಟ್ ಕಾ ಎನ್ನುವಂತಾಗಿದೆ : ಈಶ್ವರ ಖಂಡ್ರೆ


Team Udayavani, May 19, 2021, 9:35 PM IST

BJP ಸ್ಥಿತಿ “ಧೋಬಿ ಕಾ ಕುತ್ತಾ ನ ಘರ್ ಕಾ, ನ ಘಾಟ್ ಕಾ ಎನ್ನುವಂತಾಗಿದೆ : ಈಶ್ವರ ಖಂಡ್ರೆ

ಬೆಂಗಳೂರು : ಆಪರೇಷನ್ ಕಮಲ ಎಂಬ ವಾಮ ಮಾರ್ಗದಿಂದ ಅಧಿಕಾರ ಹಿಡಿದಿರುವ ಬಿಜೆಪಿಗೆ ಕೋವಿಡ್ ನಿರ್ವಹಣೆ ಹೇಗೆಂದೇ ತಿಳಿಯುತ್ತಿಲ್ಲ, ಕ್ಷಣಕ್ಕೊಂದು, ಘಳಿಗೆಗೊಂದು ನಿರ್ಧಾರ ಕೈಗೊಳ್ಳುತ್ತಾ ಮತ್ತೆ ಆ ನಿರ್ಧಾರ ಹಿಂಪಡೆಯುತ್ತಾ, ಬೇಜವಾಬ್ದಾರಿತನ ತೋರುತ್ತಿದೆ. ತನ್ನ ಅಸಾಮರ್ಥ್ಯದಿಂದ ಆ ಪಕ್ಷ “ಧೋಬಿ ಕಾ ಕುತ್ತಾ ನ ಘರ್ ಕಾ ನಾ ಘಾಟ್ ಕ” ಎಂಬಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿದ್ದಾರೆ.

ಮನೆಗೆ ಮಗನಾಗಲಿಲ್ಲ, ಸ್ಮಶಾಣಕ್ಕೆ ಹೆಣವಾಗಲಿಲ್ಲ ಎಂದು ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಬಿಜೆಪಿಯ ಸಿ.ಟಿ. ರವಿ, “ಕೊಟ್ಟ ಕುದುರೆಯನೇರಲರಿಯದೆ’’ ಹೆಣಗುತ್ತಿರುವ ಸರ್ಕಾರದ ಲೋಪ ಮುಚ್ಚಿಕೊಳ್ಳಲು, ಅಪಲಾಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ತಜ್ಞರು 3-4 ತಿಂಗಳ ಮೊದಲೇ 2ನೇ ಅಲೆಯ ಮುನ್ನೆಚ್ಚರಿಕೆ ನೀಡಿದ್ದರೂ, ಸೂಕ್ತ ಸಿದ್ಧತೆ ಮಾಡಿಕೊಳ್ಳದೆ, ವೈದ್ಯಕೀಯ ಮೂಲಸೌಕರ್ಯ ವರ್ಧನೆ ಮಾಡದೆ, ವೆಂಟಿಲೆಟರ್, ಆಕ್ಸಿಜನ್ ಕಾನ್ಸಂಟ್ರೇಟರ್, ಐಸಿಯು ಯಂತ್ರೋಪಕರಣ ಅಳವಡಿಸದೆ ಧೂಳು ಹಿಡಿಸಿ ಜನರ ಜೀವ ತೆಗೆದು, ಇಡೀ ರಾಜ್ಯವನ್ನು ದೇಶವನ್ನು ಸ್ಮಶಾಣ ಮಾಡಿದ್ದಾರೆ. ಈಗ ಮಗ, ಸ್ಮಶಾಣ, ಹೆಣ ಎಂದೆಲ್ಲಾ ಹೇಳುತ್ತಾ, ಕಾಂಗ್ರೆಸ್ ಗೆ ನೀತಿ ಪಾಠ ಹೇಳುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆಯಂತೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ : ನೂರು ಹಾಸಿಗೆಗಳ ಕೊರೊನಾ ಆರೈಕೆ ಕೇಂದ್ರ ನಾಳೆಯಿಂದ ಆರಂಭ: ಈಶ್ವರಪ್ಪ

“ಕುಣಿಯಲಾರದಾಕೆ ನೆಲ ಡೊಂಕು ಎಂದಳಂತೆ” ಎಂಬ ಗಾದೆ ಇದೆ. ಬಿಜೆಪಿಯವರಿಗೆ ಅಧಿಕಾರ ನಡೆಸಲು ಬರುತ್ತಿಲ್ಲ. ಎಲ್ಲ ರಂಗದಲ್ಲೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಕುಂಟು ನೆಪ ಹುಡುಕುತ್ತಿದ್ದಾರೆ. ಪ್ರತಿಪಕ್ಷದ ಮೇಲೆ ಟೂಲ್ ಕಿಟ್ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಕೊರೊನಾ ಸಮಯದಲ್ಲಿ ಉಪ ಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಲಕ್ಷಾಂತರ ಜನರನ್ನು ಸೇರಿಸಿ ಸೋಂಕು ಹರಡಲು ಕಾರಣವಾದ ಸರ್ಕಾರ ಈಗ ತನ್ನ ಲೋಪ ಮುಚ್ಚಿಕೊಳ್ಳಲು ಕೋತಿ ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿದಂತೆ ಹೇಳಿಕೆ ನೀಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಎಲ್ಲ ರಾಜ್ಯಗಳೂ ತಮ್ಮ ರಾಜ್ಯದ ಜನರ ಪ್ರಾಣ ಕಾಪಾಡಲು ಲಸಿಕೆಯನ್ನು ತಂದು ಯಶಸ್ವಿಯಾಗಿ ನೀಡುತ್ತಿರುವಾಗ, ರಾಜ್ಯದಲ್ಲಿ ಲಸಿಕೆಗೆ ಜನ ಪರದಾಡುತ್ತಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಯೋಗ್ಯತೆ ಇಲ್ಲದಿದ್ದರೂ ಲಸಿಕಾ ಅಭಿಯಾನ ಉದ್ಘಾಟಿಸಿ ಫೋಟೋ ತೆಗೆಸಿಕೊಳ್ಳುವ ಸರ್ಕಾರಕ್ಕೆ ಲಸಿಕೆ ನಿರ್ವಹಣೆ ಎಂದರೇನು ಎಂಬುದೇ ಗೊತ್ತಿಲ್ಲ. ಲಸಿಕೆ ಸಿಗದ ಯುವಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ಲಸಿಕೆಗೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದಲಾದರೂ ಹಣ ಕೊಡುತ್ತೇವೆ ಜನರಿಗೆ ಲಸಿಕೆ ತರಿಸಿ ಕೊಡಿ ಎಂದು ಹೇಳಿದೆ. ಆದರೆ 25 ಸಂಸದರಿದ್ದರೂ ಕೇಂದ್ರದ ಮೇಲೆ ಒತ್ತಡ ಹೇರಿ ಲಸಿಕೆ ತರಿಸಲಾರದ ಗುಲಾಮಗಿರಿ ಮಾಡುತ್ತಿರುವ ಈ ಪಕ್ಷದವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.